Death Penalty: ಸ್ವಾತಂತ್ರ್ಯ ನಂತರ ಭಾರತದಲ್ಲಿ ಗಲ್ಲಿಗೇರಿಸಲ್ಪಟ್ಟ ಮೊದಲ ಮಹಿಳಾ ಕೈದಿ ಈಕೆ!

ಕಲ್ಯಾಣ್‌, ಕೊಲ್ಹಾಪುರ್‌ ಮತ್ತು ನಾಸಿಕ್‌ ನಲ್ಲಿ ಸಕ್ರಿಯರಾಗಿ ಮಕ್ಕಳ ಕಳ್ಳತನ ನಡೆಸುತ್ತಿದ್ದರು.

ನಾಗೇಂದ್ರ ತ್ರಾಸಿ, Sep 3, 2024, 4:31 PM IST

Death Penalty: ಸ್ವಾತಂತ್ರ್ಯ ನಂತರ ಭಾರತದಲ್ಲಿ ಗಲ್ಲಿಗೇರಿಸಲ್ಪಟ್ಟ ಮೊದಲ ಮಹಿಳಾ ಕೈದಿ ಈಕೆ!

ಭಾರತದಲ್ಲಿ ಮರಣದಂಡನೆ ಕೆಲವು ಅಪರಾಧಗಳಿಗೆ ಕಾನೂನುಬದ್ದ ಶಿಕ್ಷೆಯಾಗಿದೆ. ಇದು ಕ್ರಿಮಿನಲ್‌ ಕೋಡ್‌ ಆಫ್‌ ಪ್ರೋಸಿಜರ್‌, 1973ರ ಸೆಕ್ಷನ್‌ 354(5)ರ ಪ್ರಕಾರ ಶಿಕ್ಷೆ ವಿಧಿಸಲಾಗುವುದು, ಭಾರತದಲ್ಲಿ ಅಪರೂಪದ ಪ್ರಕರಣಗಳಲ್ಲಿ ಮಾತ್ರ ಗಲ್ಲುಶಿಕ್ಷೆಯನ್ನು ವಿಧಿಸಲಾಗುತ್ತದೆ.

ಪ್ರಸ್ತುತ ಭಾರತದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ 539 ಕೈದಿಗಳಿದ್ದಾರೆ. ಭಾರತದಲ್ಲಿ ತೀರಾ ಇತ್ತೀಚೆಗೆ ಅಂದರೆ 2020ರ ಮಾರ್ಚ್‌ ನಲ್ಲಿ ಗಲ್ಲುಶಿಕ್ಷೆ ವಿಧಿಸಲಾಗಿತ್ತು. 2012ರ ದೆಹಲಿ ಸಾಮೂಹಿಕ ಅತ್ಯಾ*ಚಾರ ಮತ್ತು ಕೊಲೆ ಅಪರಾಧಿಗಳಲ್ಲಿ ನಾಲ್ವರನ್ನು ತಿಹಾರ್‌ ಜೈಲಿನಲ್ಲಿ ಗಲ್ಲಿಗೇರಿಸಲಾಗಿತ್ತು. ಸ್ವಾತಂತ್ರ್ಯ ನಂತರ 1947ರಿಂದ ಈವರೆಗೆ ಭಾರತದಲ್ಲಿ ಹಲವಾರು ಅಪರಾಧಿಗಳನ್ನು ಗಲ್ಲಿಗೇರಿಸಲಾಗಿದೆ. ಸರ್ಕಾರದ ಅಧಿಕೃತ ಅಂಕಿ-ಅಂಶದ ಪ್ರಕಾರ. 1947ರಿಂದ ಈವರೆಗೆ ಕೇವಲ 57 ಅಪರಾಧಿಗಳಿಗೆ ಮಾತ್ರ ಮರಣದಂಡನೆಗೆ ಗುರಿಪಡಿಸಲಾಗಿದೆ.

ಭಾರತದಲ್ಲಿ ಗಲ್ಲಿಗೇರಿಸಲ್ಪಟ್ಟ ಮೊದಲ ಮಹಿಳೆ ಈಕೆ!

1955ರ ಜನವರಿ 3ರಂದು ರತ್ತನ್‌ ಬಾಯಿ ಜೈನ್‌ ಎಂಬಾಕೆಯನ್ನು ಗಲ್ಲಿಗೇರಿಸಲಾಗಿದ್ದು, ದೇಶದಲ್ಲಿ ಮರಣದಂಡನೆ ಶಿಕ್ಷೆಗೆ ಒಳಗಾದ ಮೊದಲ ಮಹಿಳೆ ಈಕೆ. ರತ್ತನ್‌ ಬಾಯಿ ಸ್ಟೆರಿಲಿಟಿ(Sterlity-ಬಂಜೆತನ ನಿವಾರಣೆ) ಕ್ಲಿನಿಕ್‌ ನಲ್ಲಿ ಮ್ಯಾನೇಜರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದಳು. ಕ್ಲಿನಿಕ್‌ ನಲ್ಲಿ ಕೆಲಸ ಮಾಡುತ್ತಿದ್ದ ಮೂವರು ಯುವತಿಯರಿಗೆ ತನ್ನ ಪತಿಯ ಜತೆ ಅನೈತಿಕ ಸಂಬಂಧ ಇದೆ ಎಂಬ ಸಂಶಯದ ಪರಿಣಾಮ ರತ್ತನ್‌ ಬಾಯಿ, ಮೂವರು ಯುವತಿಯರಿಗೆ ವಿಷ ನೀಡಿ ಕೊಲೆಗೈದಿದ್ದಳು. ಈ ಪ್ರಕರಣದಲ್ಲಿ ಜೈನ್‌ ಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿತ್ತು. ಇದರ ಪರಿಣಾಮ 1955ರ ಜನವರಿ 3ರಂದು ತಿಹಾರ್‌ ಜೈಲಿನಲ್ಲಿ ರತ್ತನ್‌ ಬಾಯಿಯನ್ನು ಗಲ್ಲಿಗೇರಿಸಲಾಗಿತ್ತು. ಇದನ್ನು ಹೊರತುಪಡಿಸಿ ಜೈನ್‌ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಿಲ್ಲ. ಕಳೆದ 75 ವರ್ಷಗಳಲ್ಲಿ ಭಾರತದಲ್ಲಿ ಮರಣದಂಡನೆ ಶಿಕ್ಷೆಗೊಳಗಾದ ಮೊದಲ ಮಹಿಳೆ ಜೈನ್.‌

ಸೀರಿಯಲ್‌ ಕಿಲ್ಲರ್ಸ್ ರೇಣುಕಾ ಶಿಂಧೆ ಮತ್ತು ಸೀಮಾ ಗಾವಿಟ್:‌‌

ಸೀಮಾ ಮೋಹನ್‌ ಗಾವಿಟ್‌ ಮತ್ತು ರೇಣುಕಾ ಕಿರಣ್‌ ಶಿಂಧೆ ಸಹೋದರಿಯರು 1990ರಿಂದ 1996ರವರೆಗೆ 13 ಮಕ್ಕಳನ್ನು ಅಪಹರಿಸಿದ್ದು, ಅವರಲ್ಲಿ 9 ಮಕ್ಕಳನ್ನು ಹತ್ಯೆ*ಗೈದ ಸರಣಿ ಹಂತಕರು. ಅಷ್ಟೇ ಅಲ್ಲ ತಾಯಿ ಅಂಜನಾಬಾಯಿ ಕೂಡಾ ಈ ಕೃತ್ಯದಲ್ಲಿ ಶಾಮೀಲಾಗಿದ್ದು, ಮಹಾರಾಷ್ಟ್ರ, ಪುಣೆ, ಥಾಣೆ, ಕಲ್ಯಾಣ್‌, ಕೊಲ್ಹಾಪುರ್‌ ಮತ್ತು ನಾಸಿಕ್‌ ನಲ್ಲಿ ಸಕ್ರಿಯರಾಗಿ ಮಕ್ಕಳ ಕಳ್ಳತನ ನಡೆಸುತ್ತಿದ್ದರು.

1996ರ ನವೆಂಬರ್‌ ನಲ್ಲಿ ಸೀಮಾ ಮೋಹನ್‌, ರೇಣುಕಾ ಶಿಂಧೆ, ತಾಯಿ ಅಂಜನಾಬಾಯಿ ಹಾಗೂ ರೇಣುಕಾ ಪತಿ ಕಿರಣ್‌ ಶಿಂಧೆ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದರು. ವಿಚಾರಣೆ ವೇಳೆ ಕಿರಣ್‌ ಶಿಂಧೆ ಸಾಕ್ಷಿಯಾಗಿ ಬದಲಾಗಿದ್ದರಿಂದ ಪ್ರಕರಣದಲ್ಲಿ ಕ್ಷಮೆ ನೀಡಲಾಗಿತ್ತು. ಆದರೆ ಬಂಧನಕ್ಕೊಳಗಾಗಿ ವಿಚಾರಣೆ ಆರಂಭವಾಗುವ ಮುನ್ನವೇ ಅಂಜನಾಬಾಯಿ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಳು.

ಪ್ರಕರಣದಲ್ಲಿ ಸೀಮಾ ಹಾಗೂ ರೇಣುಕಾಗೆ ಕೊಲ್ಹಾಪುರ್‌ ಸೆಷನ್ಸ್‌ ಕೋರ್ಟ್‌ ದೋಷಿ ಎಂದು ತಿಳಿಸಿ, ಮರಣದಂಡನೆ ವಿಧಿಸಿತ್ತು. 2004ರಲ್ಲಿ ಬಾಂಬೆ ಹೈಕೋರ್ಟ್‌ ಕೂಡಾ ಸೆಷನ್ಸ್‌ ಕೋರ್ಟ್‌ ತೀರ್ಪನ್ನು ಎತ್ತಿಹಿಡಿದಿತ್ತು. 2006ರಲ್ಲಿ ಸುಪ್ರೀಂಕೋರ್ಟ್‌ ಕೂಡಾ ಮರಣದಂಡನೆ ಶಿಕ್ಷೆಯನ್ನು ಎತ್ತಿಹಿಡಿದಿತ್ತು. 2014ರಲ್ಲಿ ಅಂದಿನ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದ್ದರು.

ಏತನ್ಮಧ್ಯೆ 2008, 2009ರಲ್ಲೇ ನಾವು ಕ್ಷಮದಾನ ಅರ್ಜಿ ಸಲ್ಲಿಸಿದ್ದರು ಕೂಡಾ 2014ರಲ್ಲಿ ತಿರಸ್ಕರಿಸಿದ್ದು ಯಾಕೆ ಎಂದು ವಿಳಂಬವನ್ನು ಪ್ರಶ್ನಿಸಿ ಇಬ್ಬರೂ ಬಾಂಬೆ ಹೈಕೋರ್ಟ್‌ ಗೆ ಮೇಲ್ಮನವಿ ಸಲ್ಲಿಸಿ, ಗಲ್ಲುಶಿಕ್ಷೆ ಜಾರಿಗೆ ತಡೆ ಪಡೆಯುಲ್ಲಿ ಯಶಸ್ವಿಯಾಗಿದ್ದಾರೆ. ಪ್ರಸ್ತುತ ಯರವಾಡ ಜೈಲಿನಲ್ಲಿರುವ ಸಹೋದರಿಯರಿಗೆ ನೇಣು ಕುಣಿಕೆ ಶಿಕ್ಷೆಯಿಂದ ಪಾರಾಗಲು ಸಾಧ್ವವಿಲ್ಲ. ಒಂದು ವೇಳೆ ಮರಣದಂಡನೆ ಶಿಕ್ಷೆಗೆ ದಿನಾಂಕ ನಿಗದಿಯಾದರೆ ಜೈನ್‌ ನಂತರ ಗಲ್ಲಿಗೇರಿದ ಮಹಿಳಾ ಕೈದಿಯಾಗಲಿದ್ದಾರೆ.

ಟಾಪ್ ನ್ಯೂಸ್

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

sidda

‘One Nation One Election’ ಪ್ರಸ್ತಾವ: ಒಕ್ಕೂಟ ವ್ಯವಸ್ಥೆಗೆ ವಿರುದ್ಧ: ಸಿಎಂ

cmCM Siddaramaiah ಮೈಸೂರಲ್ಲಿ ಚಿತ್ರನಗರಿ: 110 ಎಕರೆ ಹಸ್ತಾಂತರ

CM Siddaramaiah ಮೈಸೂರಲ್ಲಿ ಚಿತ್ರನಗರಿ: 110 ಎಕರೆ ಹಸ್ತಾಂತರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fake Visa: ನಕಲಿ ವೀಸಾ ಉತ್ಪಾದನೆಯ ಫ್ಯಾಕ್ಟರಿ ಪತ್ತೆ-ಮೂವರು ಆರೋಪಿಗಳ ಬಂಧನ

Fake Visa: ನಕಲಿ ವೀಸಾ ಉತ್ಪಾದನೆಯ ಫ್ಯಾಕ್ಟರಿ ಪತ್ತೆ-ಮೂವರು ಆರೋಪಿಗಳ ಬಂಧನ

Amroha: Husband beats wife for not giving dowry!

Amroha: ವರದಕ್ಷಿಣೆ ನೀಡಲಿಲ್ಲ ಎಂದು ಪತ್ನಿಯನ್ನು ಹೊಡೆದು ಕೊ*ದ ಪತಿ!

Mumbai: ಉದ್ಯೋಗದ ನೆಪದಲ್ಲಿ ಕಾಂಬೋಡಿಯಾಕ್ಕೆ ಮಾನವ ಕಳ್ಳಸಾಗಣೆ; ಮುಂಬೈ ಮಹಿಳೆ ಸೆರೆ!

Mumbai: ಉದ್ಯೋಗದ ನೆಪದಲ್ಲಿ ಕಾಂಬೋಡಿಯಾಕ್ಕೆ ಮಾನವ ಕಳ್ಳಸಾಗಣೆ; ಮುಂಬೈ ಮಹಿಳೆ ಸೆರೆ!

Kejriwal: ಕೇಜ್ರಿವಾಲ್‌ ಜಾಮೀನು- ಸಿಬಿಐ ಬಂಧನದ ಕಾನೂನುಬದ್ಧತೆ ಬಗ್ಗೆ ಸುಪ್ರೀಂ ಭಿನ್ನ ಆದೇಶ

Kejriwal: ಕೇಜ್ರಿವಾಲ್‌ ಜಾಮೀನು- ಸಿಬಿಐ ಬಂಧನದ ಕಾನೂನುಬದ್ಧತೆ ಬಗ್ಗೆ ಸುಪ್ರೀಂ ಭಿನ್ನ ಆದೇಶ

Representative image

Bihar: ಸಾಮೂಹಿಕ ಅ*ತ್ಯಾಚಾರಕ್ಕೆ ಯತ್ನ-ವೈದ್ಯನ ಖಾಸಗಿ ಅಂಗ ಕತ್ತರಿಸಿ ಬಚಾವ್‌ ಆದ ನರ್ಸ್!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.