Weight Loss Drinks: ತೂಕ, ಕೊಬ್ಬು ಕಡಿಮೆ ಮಾಡಿಕೊಳ್ಳಲು ಈ ಪಾನೀಯಗಳನ್ನು ಸೇವಿಸಿ

ಎಣ್ಣೆ ಅಂಶವಿರುವ ಆಹಾರಗಳನ್ನು ತ್ಯಜಿಸುವುದು ಸಾಮಾನ್ಯ.

ಕಾವ್ಯಶ್ರೀ, Sep 3, 2024, 6:01 PM IST

6-WLD

ದೇಹದ ತೂಕ ಹೆಚ್ಚಾದರೆ ಸಾಕಷ್ಟು ಆರೋಗ್ಯ ಸಮಸ್ಯೆಗಳು ಕಾಣಿಸುತ್ತವೆ. ಆರೋಗ್ಯದಲ್ಲಿ ಏರುಪೇರಾದರೆ ಅದರ ನೇರ ಪರಿಣಾಮ ದೇಹದ ತೂಕದ ಮೇಲೆ ಆಗುತ್ತದೆ. ಡಯಾಬಿಟೀಸ್‌ ನಂತಹ ಕಾಯಿಲೆ ಇರುವವರಿಗೆ ವೈದ್ಯರು ಹೇಳುವ ಸಾಮಾನ್ಯ ಸಲಹೆ ಎಂದರೆ ತೂಕ ನಿಯಂತ್ರಿಸಬೇಕು ಎನ್ನುವುದು. ಹಾಗಾಗಿ ದೇಹದ ತೂಕ ನಷ್ಟ ಮಾಡಿಕೊಳ್ಳುವುದು ಅಥವಾ ನಿಯಂತ್ರಿಸುವುದು ಉತ್ತಮ.

ತೂಕ ಇಳಿಸಬೇಕು ಎಂದು ಅಲೋಚಿಸುವವರು ಹಲವರು. ಆದರೆ ತೂಕ ಇಳಿಸುವುದು ಅಷ್ಟು ಸುಲಭದ ಕೆಲಸವಲ್ಲ. ವ್ಯಾಯಾಮ, ಡಯಟ್‌, ವಾಕಿಂಗ್‌, ಆಹಾರ ಸೇವನೆ ನಿಯಂತ್ರಿಸಿಕೊಳ್ಳುವುದು, ಸಕ್ಕರೆ, ಎಣ್ಣೆ ಅಂಶವಿರುವ ಆಹಾರಗಳನ್ನು ತ್ಯಜಿಸುವುದು ಸಾಮಾನ್ಯ.

ಅನಾರೋಗ್ಯ ಇರುವವರು ವ್ಯಾಯಾಮ ಮಾಡಲು ಆಗುವುದಿಲ್ಲ. ಹಾಗಾಗಿ ಹೊಟ್ಟೆಯ ಕೊಬ್ಬನ್ನು ತ್ವರಿತವಾಗಿ ಕಳೆದುಕೊಳ್ಳಲು ಈ 5 ಬೆಳಗಿನ ಪಾನೀಯಗಳು ಸಹಾಯ ಮಾಡುತ್ತದೆ.

ಆರೋಗ್ಯಕರ ಬೆಳಗಿನ ಪಾನೀಯಗಳೊಂದಿಗೆ ದಿನ ಪ್ರಾರಂಭಿಸುವುದರಿಂದ ದೇಹ ದಿನವಿಡೀ ಸಕ್ರಿಯವಾಗಿರಲು ಅಗತ್ಯವಾದ ಶಕ್ತಿಯನ್ನು ನೀಡುತ್ತದೆ. ತೂಕ ನಷ್ಟಕ್ಕೆ ಖಾಲಿ ಹೊಟ್ಟೆಯಲ್ಲಿ ಸೇವಿಸಬೇಕಾದ ಪಾನೀಯಗಳು ಹಾಗೂ ರಾತ್ರಿ ಊಟದ ನಂತರ ಸೇವಿಸಬಹುದಾದ 5 ಪಾನೀಯಗಳ ಮಾಹಿತಿ ಇಲ್ಲಿದೆ:

ಖಾಲಿ ಹೊಟ್ಟೆಯಲ್ಲಿ ಸೇವಿಸಬೇಕಾದ ಪಾನೀಯಗಳು

ಜೀರಿಗೆ ನೀರು

1 ಚಮಚ ಜೀರಿಗೆಯನ್ನು ರಾತ್ರಿಯಿಡೀ ನೆನೆಸಿ, ಬೆಳಿಗ್ಗೆ ಆ ನೀರನ್ನು ಕುದಿಸಿ ಬಿಸಿಯಾಗಿ ಕುಡಿಯಿರಿ. ಇದು ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆ ಮತ್ತು ಕೊಬ್ಬು ಕರಗಿಸುವುದನ್ನು ವೇಗಗೊಳಿಸುತ್ತದೆ. ಇದು ಮಾತ್ರವಲ್ಲದೇ ಖಾಲಿ ಹೊಟ್ಟೆಗೆ ಜೀರಿಗೆ ನೀರು ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಮೆಂತ್ಯ ಬೀಜಗಳ ನೀರು

1 ಚಮಚ ಮೆಂತ್ಯ ಬೀಜಗಳನ್ನು ರಾತ್ರಿ ನೀರಿನಲ್ಲಿ ನೆನೆಸಿಟ್ಟು, ಬೆಳಿಗ್ಗೆ ಖಾಲಿ ಹೊಟ್ಟೆಗೆ ಮೆಂತ್ಯ ಬೀಜಗಳ ಸಮೇತ ಆ ನೀರನ್ನು ಕುಡಿಯಬೇಕು. ಇದು ದೇಹದ ತೂಕ ನಿಯಂತ್ರಿಸಲು ಸಹಾಯ ಮಾಡುತ್ತದೆ. ದಿನವನ್ನು ಕಿಕ್‌ಸ್ಟಾರ್ಟ್ ಮಾಡಲು ಈ ಪಾನೀಯ ಜನಪ್ರಿಯ ಆಯ್ಕೆಯಾಗಿದೆ.

ಜೇನು-ನಿಂಬೆ ನೀರು

ಹೊಟ್ಟೆಯ ಕೊಬ್ಬಿಗೆ ಒಂದು ಶ್ರೇಷ್ಠ ಪರಿಹಾರ ಇದು. ಉಗುರು ಬೆಚ್ಚಗಿನ ನೀರಿಗೆ ನಿಂಬೆ ರಸ ಮತ್ತು ಜೇನುತುಪ್ಪ ಹಾಕಿ ಸೇವಿಸಬೇಕು. ಇದು ಕೊಬ್ಬು ಕಡಿಮೆಗೊಳಿಸಿ ತೂಕ ನಿಯಂತ್ರಿಸಲು ಸಹಾಯ ಮಾಡುತ್ತದೆ.

ಫೆನ್ನೆಲ್ ಬೀಜ (ಸೋಂಪು)

ಪೋಷಕಾಂಶಗಳು ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿರುವ ಫೆನ್ನೆಲ್ ಕಾಳಿನ ನೀರು ಖಾಲಿ ಹೊಟ್ಟೆಗೆ ಕುಡಿಯುವುದರಿಂದ ಚಯಾಪಚಯ ಹೆಚ್ಚಿಸುತ್ತದೆ ಮತ್ತು ತೂಕ ನಷ್ಟವನ್ನು ಉತ್ತೇಜಿಸುತ್ತದೆ. ಫೆನ್ನೆಲ್ ಬೀಜಗಳನ್ನು ತಿನ್ನುವುದರಿಂದ ಹೊಟ್ಟೆ ತುಂಬಿದಂತಾಗಿ ಆಹಾರ ನಿಯಂತ್ರಿಸಲು ಕೂಡಾ ಸಾಧ್ಯವಾಗುತ್ತದೆ.

ದಾಲ್ಚಿನ್ನಿ ನೀರು

ಉಗುರು ಬೆಚ್ಚನೆಯ ನೀರಿಗೆ ಒಂದು ಚಿಟಿಕೆ ದಾಲ್ಚಿನ್ನಿ ಪುಡಿ ಹಾಕಿ ಕುಡಿಯುವುದರಿಂದ ಚಯಾಪಚಯವನ್ನು ಹೆಚ್ಚಿಸುತ್ತದೆ.

ತೂಕ ನಷ್ಟಕ್ಕೆ ರಾತ್ರಿ ಊಟದ ನಂತರ ಸೇವಿಸಬಹುದಾದ 5 ಪಾನೀಯಗಳು

ತೂಕ ಕಳೆದುಕೊಳ್ಳುವುದು ಒಂದು ಸವಾಲು ಎಂದೇ ಹೇಳಬಹುದು. ನಮ್ಮ  ರಾತ್ರಿಯ ದಿನಚರಿಯಲ್ಲಿ ಕೆಲ ಗಿಡಮೂಲಿಕೆ ಪಾನೀಯಗಳನ್ನು ಸೇರಿಸುವುದರಿಂದ ಕೆಲ ಹೆಚ್ಚುವರಿ ಕಿಲೋಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಕಳೆದುಕೊಳ್ಳಬಹುದು.

ಈ ಪಾನೀಯಗಳು ಜೀರ್ಣಕ್ರಿಯೆಗೆ ಸಹಾಯ ಮಾಡುವುದಲ್ಲದೆ ಚಯಾಪಚಯ ಹೆಚ್ಚಿಸುತ್ತದೆ. ನಾವು ಮಲಗಿರುವಾಗಲೂ ನಮ್ಮ ದೇಹದ ಕೊಬ್ಬನ್ನು ಕರಗಿಸುವುದನ್ನು ಸುಲಭಗೊಳಿಸುತ್ತದೆ. ರಾತ್ರಿ ಊಟದ ನಂತರ ಪರಿಗಣಿಸಬೇಕಾದ 5 ಗಿಡಮೂಲಿಕೆ ಪಾನೀಯಗಳ ಮಾಹಿತಿ ಇಲ್ಲಿವೆ.

ಉಗುರು ಬೆಚ್ಚಗಿನ ನೀರು ಮತ್ತು ನಿಂಬೆ ರಸ:

ನಿಂಬೆಯೊಂದಿಗೆ ಬೆಚ್ಚಗಿನ ನೀರು ಹೆಸರುವಾಸಿಯಾದ ಜನಪ್ರಿಯ ಪಾನೀಯಗಳಲ್ಲಿ ಒಂದು. ನಿಂಬೆಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಇದು ಉತ್ಕರ್ಷಣ ನಿರೋಧಕವಾಗಿ ಕಾರ್ಯನಿರ್ವಹಿಸುತ್ತದೆ. ರಾತ್ರಿ ಊಟದ ನಂತರ ಬೆಚ್ಚಗಿನ ನಿಂಬೆ ನೀರನ್ನು ಕುಡಿಯುವುದರಿಂದ ಪಿತ್ತರಸದ ಉತ್ಪಾದನೆಯನ್ನು ಉತ್ತೇಜಿಸುವ ಮೂಲಕ ಜೀರ್ಣಕ್ರಿಯೆಯನ್ನು ಹೆಚ್ಚಿಸುತ್ತದೆ.

ಹಸಿರು ಚಹಾ (ಗ್ರೀನ್‌ ಟೀ)

ಹಸಿರು ಚಹಾ ತೂಕ ನಷ್ಟ ಪ್ರಯೋಜನಗಳಿಗೆ ಹೆಸರುವಾಸಿಯಾಗಿದೆ. ಗ್ರೀನ್‌ ಟೀ ಚಯಾಪಚಯ ಹೆಚ್ಚಿಸಲು ಸಹಾಯ ಮಾಡುತ್ತದೆ. ರಾತ್ರಿಯ ಊಟದ ನಂತರ ಹಸಿರು ಚಹಾ ಕುಡಿಯುವುದರಿಂದ ದೇಹ ವಿಶ್ರಾಂತಿ ಪಡೆದಾಗಲೂ ಕ್ಯಾಲೊರಿಗಳನ್ನು ಸುಡುವುದನ್ನು ಮುಂದುವರಿಸಲು ಸಹಾಯ ಮಾಡುತ್ತದೆ. ಇದರ ಕೆಫೀನ್ ಅಂಶ ಚಯಾಪಚಯ ಕ್ರಿಯೆ ಸುಧಾರಿಸಲು ಸಹಾಯ ಮಾಡುತ್ತದೆ. ಇದು ತೂಕ ನಷ್ಟಕ್ಕೆ ಉತ್ತಮ ಆಯ್ಕೆಯಾಗಿದೆ.

ನಿಂಬೆ-ಶುಂಠಿ ಚಹಾ

ನಿಂಬೆ-ಶುಂಠಿ ಚಹಾ ತೂಕ ನಷ್ಟಕ್ಕೆ ಮತ್ತೊಂದು ಅತ್ಯುತ್ತಮ ಗಿಡಮೂಲಿಕೆ ಪಾನೀಯ. ಶುಂಠಿಯು ಥರ್ಮೋಜೆನಿಕ್ ಗುಣಲಕ್ಷಣಗಳನ್ನು ಹೊಂದಿದ್ದು ಅದು ಚಯಾಪಚಯವನ್ನು ತ್ವರಿತಗೊಳಿಸಲು ಸಹಾಯ ಮಾಡುತ್ತದೆ. ಇದು ಹಸಿವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ರಾತ್ರಿಯ ಊಟದ ನಂತರ ನಿಂಬೆ-ಶುಂಠಿ ಚಹಾವನ್ನು ಕುಡಿಯುವುದು ಅಜೀರ್ಣ ಮತ್ತು ಉಬ್ಬುವಿಕೆಯನ್ನು ನಿವಾರಿಸಲು ಸಹಾಯ ಮಾಡುತ್ತದೆ.

ಅಜ್ವೈನ್ ಚಹಾ

ಅಜ್ವೈನ್ ಜೀರ್ಣಕಾರಿ ಪ್ರಯೋಜನಗಳಿಗೆ ಹೆಸರುವಾಸಿಯಾದ ಮಸಾಲೆ ಪದಾರ್ಥ. ರಾತ್ರಿಯ ಊಟದ ನಂತರ ಒಂದು ಕಪ್ ಅಜ್ವೈನ್ ಚಹಾ ಜೀರ್ಣಕ್ರಿಯೆಯನ್ನು ಉತ್ತೇಜಿಸುತ್ತದೆ. ಕೊಬ್ಬಿನ ಶೇಖರಣೆಯನ್ನು ತಡೆಯುತ್ತದೆ. ಅಜ್ವೈನ್ ಸೇವಿಸುವುದರಿಂದ ದೇಹ ತೂಕ ಕಳೆದುಕೊಳ್ಳಲು ಸುಲಭವಾಗುತ್ತದೆ.

ಅರಿಶಿನ ನೀರು

ಅರಿಶಿನ ಸುಪ್ರಸಿದ್ಧ ಉರಿಯೂತದ ಮಸಾಲೆಯಾಗಿದ್ದು ಅದು ತೂಕ ನಷ್ಟಕ್ಕೆ ಕೂಡಾ ಸಹಾಯ ಮಾಡುತ್ತದೆ. ಅರಿಶಿನದಲ್ಲಿರುವ ಕರ್ಕ್ಯುಮಿನ್ ಎಂಬ ಅಂಶ  ಕೊಬ್ಬಿನ ಅಂಗಾಂಶದ ಬೆಳವಣಿಗೆಯನ್ನು ಹತ್ತಿಕ್ಕುತ್ತದೆ ಮತ್ತು ಇನ್ಸುಲಿನ್ ಸಂವೇದನೆಯನ್ನು ಹೆಚ್ಚಿಸುತ್ತದೆ. ಇದು ಪರಿಣಾಮಕಾರಿಯಾಗಿ ತೂಕ ನಿರ್ವಹಿಸಲು ಸಹಾಯ ಮಾಡುತ್ತದೆ. ಊಟದ ನಂತರ ಅರಿಶಿನ ನೀರನ್ನು ಕುಡಿಯುವುದು ಜೀರ್ಣಕ್ರಿಯೆಯನ್ನು ಸುಧಾರಿಸಲು ಮತ್ತು ಕೊಬ್ಬು ನಷ್ಟವನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ. ಇವೆಲ್ಲವೂ ತೂಕ ನಿರ್ವಹಣೆಗೆ ಅವಶ್ಯಕವಾಗಿದೆ.

*ಕಾವ್ಯಶ್ರೀ

ಟಾಪ್ ನ್ಯೂಸ್

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

sidda

‘One Nation One Election’ ಪ್ರಸ್ತಾವ: ಒಕ್ಕೂಟ ವ್ಯವಸ್ಥೆಗೆ ವಿರುದ್ಧ: ಸಿಎಂ

cmCM Siddaramaiah ಮೈಸೂರಲ್ಲಿ ಚಿತ್ರನಗರಿ: 110 ಎಕರೆ ಹಸ್ತಾಂತರ

CM Siddaramaiah ಮೈಸೂರಲ್ಲಿ ಚಿತ್ರನಗರಿ: 110 ಎಕರೆ ಹಸ್ತಾಂತರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

ಈ ಹಳ್ಳಿಯಲ್ಲಿ ಪ್ರತಿಯೊಬ್ಬ ಪುರುಷನು ಎರಡು ಬಾರಿ ಮದುವೆಯಾಗುತ್ತಾನಂತೆ! ಕಾರಣವೂ ವಿಚಿತ್ರ

ಈ ಹಳ್ಳಿಯಲ್ಲಿ ಪ್ರತಿಯೊಬ್ಬ ಪುರುಷನು ಎರಡು ಬಾರಿ ಮದುವೆಯಾಗುತ್ತಾನಂತೆ! ಕಾರಣವೂ ವಿಚಿತ್ರ

smi irani

Smriti Irani ದೆಹಲಿ ಬಿಜೆಪಿಯಲ್ಲಿ ಸಕ್ರಿಯ: ”ಸಿಎಂ ಫೇಸ್” ಆಗಿ ಕೇಳಿ ಬರುತ್ತಿರುವ ಹೆಸರು!

International Day of Democracy: “ವಿಶ್ವ ಪ್ರಜಾಪ್ರಭುತ್ವ” ಆತ್ಮಾವಲೇೂಕನ ದಿನ

International Day of Democracy: “ವಿಶ್ವ ಪ್ರಜಾಪ್ರಭುತ್ವ” ಆತ್ಮಾವಲೇೂಕನ ದಿನ

Tan removalಗೆ ಟೊಮೆಟೊ ಫೇಸ್‌ ಪ್ಯಾಕ್‌; ನೈಸರ್ಗಿಕ ತ್ವಚೆ ಕಾಳಜಿ

Beauty Tips: ಮುಖದ ಕಾಂತಿ ಹೆಚ್ಚಿಸಲು ಟೊಮ್ಯಾಟೋ ಫೇಸ್‌ ಪ್ಯಾಕ್‌; ಇದರ ಲಾಭವೇನು ಗೊತ್ತಾ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.