Rabkavi Banhatti; ಲೇಔಟ್ ಗಳಲ್ಲಿ ಮೂಲ ಸೌಕರ್ಯಗಳ ಕೊರತೆ: ಸೂಕ್ತ ಕ್ರಮಕ್ಕೆ ಆಗ್ರಹ

ಸಾಮಾನ್ಯ ಸಭೆಯಲ್ಲಿ ಲೇಔಟ್‌ಗಳದ್ದೇ ಸದ್ದು; ಅಭಿವೃದ್ಧಿಯಾಗದ ಉದ್ಯಾನವನಗಳು

Team Udayavani, Sep 3, 2024, 6:23 PM IST

Rabkavi Banhatti; ಲೇಔಟ್ ಗಳಲ್ಲಿ ಮೂಲ ಸೌಕರ್ಯಗಳ ಕೊರತೆ : ಸೂಕ್ತ ಕ್ರಮಕ್ಕೆ ಆಗ್ರಹ

ರಬಕವಿ-ಬನಹಟ್ಟಿ: ರಬಕವಿ ಬನಹಟ್ಟಿ ನಗರಸಭೆಯ ವ್ಯಾಪ್ತಿಯಲ್ಲಿ ನಿರ್ಮಾಣವಾಗುತ್ತಿರುವ ಲೇಔಟ್ ಗಳಲ್ಲಿ ಮೂಲ ಸೌಕರ್ಯಗಳ ಕೊರತೆ ಇದ್ದು ಲೇಔಟ್ ಗಳ ಮಾಲೀಕರು ನಗರಸಭೆಯ ಯಾವುದೇ ನಿಯಮಗಳನ್ನು ಪಾಲನೆ ಮಾಡುತ್ತಿಲ್ಲ ಮತ್ತು ಲೇಔಟ್ ಗಳಲ್ಲಿ ಕಳಪೆ ಕಾಮಗಾರಿ ಮತ್ತು ಸುಳ್ಳು ಮಾಹಿತಿಯನ್ನು ನಗರಸಭೆಗೆ ನೀಡುತ್ತಿದ್ದಾರೆ. ಅಂಥವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಸದಸ್ಯರು ನಗರಸಭೆಯ ಅಧಿಕಾರಿಗಳನ್ನು ಆಗ್ರಹಿಸಿದರು.

ಮುಂದಿನ ದಿನಗಳಲ್ಲಿ ಇಂಥ ಲೇಔಟ್ ಗಳನ್ನು ನಿರ್ಮಾಣ ಮಾಡುವ ಸಂದರ್ಭದಲ್ಲಿ ನಗರಸಭೆಯ ಸಾಮಾನ್ಯ ಸಭೆಯ ಅನುಮತಿಯನ್ನು ಪಡೆದುಕೊಳ್ಳಬೇಕು. ಅಧ್ಯಕ್ಷರನ್ನು ಒಳಗೊಂಡಂತೆ ಒಂದು ಸಮಿತಿಯನ್ನು ನಿರ್ಮಿಸಬೇಕು ಎಂದು ನಗರಸಭೆಯ ಸದಸ್ಯರ ಸಂಜಯ ತೆಗ್ಗಿ ಸಭೆಗೆ ತಿಳಿಸಿದರು.

ಮತ್ತೊರ್ವ ಸದಸ್ಯ ಶ್ರೀಶೈಲ ಬೀಳಗಿ ಮಾತನಾಡಿ, ಲೇಔಟ್ ಗಳನ್ನು ನಿರ್ಮಾಣ ಮಾಡುವ ಸಂದರ್ಭದಲ್ಲಿ ನಗರಸಭೆಯ ರಸ್ತೆ, ಚರಂಡಿ ಸೇರಿದಂತೆ ಆಸ್ತಿಗಳನ್ನು ಹಾಳು ಮಾಡುತ್ತಿದ್ದಾರೆ. ಅಂಥವರ ವಿರುದ್ಧ ಎಫ್ ಐ ಆರ್ ಮಾಡುವಂತೆ ಆಗ್ರಹಿಸಿದರು.

ಇ-ಆಸ್ತಿಗಳ ಗೊಂದಲದಿಂದಾಗಿ ಅವಳಿ ನಗರಗಳ ಸಾರ್ವಜನಿಕರಿಗೆ ಆಸ್ತಿಗಳ ನೊಂದಣಿ, ಮಾರಾಟ ಮತ್ತು ಖರೀದಿ ಮಾಡಲು ತೊಂದರೆಯಾಗಿದೆ. ಈ ಕುರಿತು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಇದನ್ನು ಸರಳೀಕರಣಗೊಳಿಸಲು ತಿಳಿಸಿದರು.

ನಗರಸಭೆಯ ವ್ಯಾಪ್ತಿಯಲ್ಲಿ ಇಪ್ಪತ್ತು ಸಾವಿರ ಆಸ್ತಿಗಳಿವೆ. ಆದ್ದರಿಂದ ಆಸ್ತಿಗಳ ಮಾಲೀಕರು ತಮ್ಮ ಸೂಕ್ತ ದಾಖಲೆಗಳನ್ನು ನೀಡಿ ಆಸ್ತಿಗಳನ್ನು ಇ-ಆಸ್ತಿಕರಣಗೊಳಿಸಿಕೊಳ್ಳಬೇಕು ಎಂದು ಪೌರಾಯುಕ್ತ ಜಗದೀಶ ಈಟಿ ತಿಳಿಸಿದರು.

ನಗರಸಭೆಯ ಅಧಿಕಾರಿಗಳು ರಬಕವಿ ನಗರದಲ್ಲಿರುವ ಉದ್ಯಾನವನಗಳ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಸಂಜಯ ತೆಗ್ಗಿ ಆಗ್ರಹಿಸಿದರು.

ಲೆಕ್ಕಪತ್ರಗಳ ಮಾಹಿತಿಯನ್ನು ಸದಸ್ಯರಿಗೆ ನೀಡಿ: ಸಾಮಾನ್ಯ ಸಭೆಗಿಂತ ಮುಂಚಿತವಾಗಿ ನಗರಸಭೆಯ ಸದಸ್ಯರಿಗೆ ಲೆಕ್ಕ ಪತ್ರಗಳ ಮಾಹಿತಿಯನ್ನು ನೀಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು. ನಗರಸಭೆಯ ಲೆಕ್ಕಪತ್ರಗಳು ಪಾರದರ್ಶಕವಾಗಿರುವಂತೆ ಎಂದು ಶಾಸಕ ಸಿದ್ದು ಸವದಿ ತಿಳಿಸಿದರು.

ಸರ್ವರ್ ಸಮಸ್ಯೆಯಿಂದಾಗಿ ಹಣಕಾಸು ಬಗ್ಗೆ ಮಾಹಿತಿಯನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಅಧಿಕಾರಿಗಳು ಸಭೆಗೆ ತಿಳಿಸಿದರು.

ನಗರಸಭೆಯ ಸದಸ್ಯೆ ದುರ್ಗವ್ವ ಹರಿಜನ ಮಾತನಾಡಿ, ಅಧಿಕಾರಿಗಳು ಸರಿಯಾಗಿ ಕರ್ತವ್ಯ ನಿರ್ವಹಣೆ ಮಾಡದೇ ಇರುವುದರಿಂದ ವಾರ್ಡ್ ನಲ್ಲಿ ಯಾವುದೇ ದುರಸ್ತಿ ಮತ್ತು ಕಾರ್ಯಗಳು ನಡೆಯುತ್ತಿಲ್ಲ. ಇದರಿಂದಾಗಿ ವಾರ್ಡ್ ಜನರಿಗೆ ಉತ್ತರ ನೀಡುವುದು ಕಷ್ಟವಾಗಿದೆ. ಆದ್ದರಿಂದ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುವಂತೆ ಆಗ್ರಹಿಸಿದರು.

ವೃತ್ತ ನಾಮಕರಣ: ಬನಹಟ್ಟಿಯ ಸೋಮವಾರ ಪೇಟೆಯಲ್ಲಿನ ರಸ್ತೆಗೆ ಸಂಗೋಳ್ಳಿ ರಾಯಣ್ಣ ವೃತ್ತ ನಾಮಕರಣಕ್ಕೆ ಸಭೆ ಅಂಗೀಕರಿಸಿತು.

ಪ್ರಸಕ್ತ ವರ್ಷ ವಿವಿಧ ಘಟಕಗಳಲ್ಲಿನ ಕಾರ್ಯನಿರ್ವಹಣೆಯ ಕಾರ್ಮಿಕರ ವೇತನ ಸುಮಾರು1 ಕೋಟಿ ರೂ.ಗಳಷ್ಟು ಟೆಂಡರ್ ಕರೆಯಲು ಸಭೆ ತೀರ್ಮಾನಿಸಿತು.

ಅವಳಿ ನಗರಾದ್ಯಂತವಿರುವ ಶೌಚಾಲಯ ನಿರ್ವಹಣೆದಾರರಿಗೆ ಉಚಿತವಾಗಿತ್ತು. ಇದೀಗ ಟೆಂಡರ್ ಕರೆಯುವ ಮೂಲಕ ಹೊಸ ನಿರ್ವಹಣೆದಾರರಿಗೆ ಗುತ್ತಿಗೆ ಆಧಾರದ ಮೇಲೆ ನೀಡಲು ಸದಸ್ಯರು ಸಹಮತ ತೋರಿಸಿದರು.

ವಿವಿಧ ಟೆಂಡರ್ ಗಳಿಗೆ ಸಭೆಯಲ್ಲಿ ಅನುಮೋದನೆಯನ್ನು ನೀಡಲಾಯಿತು.ಯಲ್ಲಪ್ಪ ಕಟಗಿ, ಗೌರಿ ಮಿಳ್ಳಿ, ಬಸವರಾಜ ಗುಡೋಡಗಿ, ಚಿದಾನಂದ ಹೊರಟ್ಟಿ, ಶಶಿಕಲಾ ಸಾರವಾಡ ಸೇರಿದಂತೆ ಅನೇಕರು ವಾರ್ಡ್ ಗಳ ಸಮಸ್ಯೆಗಳನ್ನು ಸಭೆಗೆ ತಿಳಿಸಿದರು.

ನಗರಸಭೆಯ ಅಧ್ಯಕ್ಷೆ ವಿದ್ಯಾ ಧಬಾಡಿ, ಉಪಾಧ್ಯಕ್ಷೆ ದೀಪಾ ಗಾಡಿವಡ್ಡರ ಇದ್ದರು.ನಗರಸಭೆಯ ಮ್ಯಾನೇಜರ್ ಮುಖೇಶ ಬನಹಟ್ಟಿ, ವೈಶಾಲಿ ಹಿಪ್ಪರಗಿ, ಶೋಭಾ ಹೊಸಮನಿ, ಸಂಗೀತಾ ಕೋಳಿ, ಮುತ್ತಪ್ಪ ಚೌಡಕಿ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

14

Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್‌ ಪತ್ನಿ ರಾದ್ಧಾಂತ

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

ಮಹಾಲಿಂಗಪುರದ ಮಹಾಜಾತ್ರೆ…: ಲಕ್ಷಾಂತರ ಭಕ್ತರು ಭಾಗಿ..ರಾತ್ರಿಯಿಡಿ ಸಾಗುವ ರಥೋತ್ಸವ

ಮಹಾಲಿಂಗಪುರದ ಮಹಾಜಾತ್ರೆ…: ಲಕ್ಷಾಂತರ ಭಕ್ತರು ಭಾಗಿ… ರಾತ್ರಿಯಿಡಿ ಸಾಗುವ ರಥೋತ್ಸವ

Pak flag ಹಾರಾಡುವ ರೀಲ್ಸ್ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ; ಪ್ರಕರಣ ದಾಖಲು

Pak flag ಹಾರಾಡುವ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Farmers

Farmers; ರೈತನ ಬೆಳೆ ಕಾಯುಲು ಸಿನಿ ತಾರೆಯರು; ಉತ್ತಮ ಬೆಳೆಗೆ ರೈತನ ಹೊಸ ಪ್ರಯೋಗ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Untitled-1

Kasaragod ಅಪರಾಧ ಸುದ್ದಿಗಳು

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.