Sumit Antil; ಸುಮಿತ್‌ ಮುಟ್ಟಿದ್ದೆಲ್ಲ ಚಿನ್ನ: ವಿಶ್ವ ಮಟ್ಟದ ಐದೂ ಕೂಟಗಳಲ್ಲಿ ಚಿನ್ನದ ಪದಕ


Team Udayavani, Sep 4, 2024, 6:59 AM IST

sumit antil

ಪ್ಯಾರಿಸ್‌: ಜಾವೆಲಿನ್‌ ಎಸೆತಗಾರ ಸುಮಿತ್‌ ಅಂತಿಲ್‌ “ತಾನು ಚಿನ್ನವನ್ನಲ್ಲದೇ ಬೇರೆನನ್ನೂ ಜಯಿಸಲಾರೆ’ ಎಂದು ಪಣತೊಟ್ಟಂತಿದೆ. ಅವರು ಮುಟ್ಟಿದ್ದೆಲ್ಲ ಸ್ವರ್ಣವಾಗುತ್ತಿದೆ. ಪ್ಯಾರಿಸ್‌ ಪ್ಯಾರಾಲಿಂಪಿಕ್ಸ್‌ ಇದನ್ನು ಸಾಬೀತುಪಡಿಸಿದೆ. ಸೋಮವಾರ ತಡರಾತ್ರಿಯ ಎಫ್-64 ವಿಭಾಗದಲ್ಲಿ ಅವರು ಚಿನ್ನದ ಪದಕವನ್ನೇ ಗೆದ್ದರು. ಈ ಮೂಲಕ ಆ್ಯತ್ಲೆಟಿಕ್ಸ್‌ ವಿಭಾಗದಲ್ಲಿ ಸತತ 2 ಚಿನ್ನದ ಪದಕ ಗೆದ್ದ ಮೊದಲ ಭಾರತೀಯನೆಂಬ ಹಿರಿಮೆಗೆ ಪಾತ್ರರಾದರು. ಅವರು ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲೂ ಬಂಗಾರದೊಂದಿಗೆ ಹೊಳೆದಿದ್ದರು.

ಜಾಗತಿಕ ಮಟ್ಟದಲ್ಲಿ ಸುಮಿತ್‌ ಅಂತಿಲ್‌ ಗೆದ್ದ 5ನೇ ಚಿನ್ನ ಇದಾಗಿದೆ. ಇದಕ್ಕೂ ಮುನ್ನ ಏಷ್ಯನ್‌ ಗೇಮ್ಸ್‌, ಕೋಬೆ ವಿಶ್ವ ಚಾಂಪಿಯನ್‌ಶಿಪ್‌, ಪ್ಯಾರಿಸ್‌ ವಿಶ್ವ ಚಾಂಪಿಯನ್‌ಶಿಪ್‌ನಲ್ಲೂ ಬಂಗಾರಕ್ಕೆ ಕೊರಳೊಡ್ಡಿದ್ದರು. ಹೀಗೆ ವಿಶ್ವ ಮಟ್ಟದ ಸ್ಪರ್ಧೆಗಳಲ್ಲೆಲ್ಲ ಸುಮಿತ್‌ಗೆ ಸ್ವರ್ಣವೇ ಸಂಗಾತಿ ಆಗುತ್ತಿರುವುದೊಂದು ವಿಶೇಷ.

ಪ್ಯಾರಾಲಿಂಪಿಕ್ಸ್‌ ದಾಖಲೆ

ಪ್ಯಾರಿಸ್‌ ಫೈನಲ್‌ನಲ್ಲಿ ಸುಮಿತ್‌ 70.59 ಮೀ. ದೂರ ಎಸೆಯುವ ಮೂಲಕ ನೂತನ ಪ್ಯಾರಾಲಿಂಪಿಕ್ಸ್‌ ದಾಖಲೆ ನಿರ್ಮಿಸಿದರು. ತಮ್ಮದೇ ದಾಖಲೆಯನ್ನು 2 ಸಲ ಮುರಿದದ್ದು ವಿಶೇಷ. 2ನೇ ಪ್ರಯತ್ನದಲ್ಲೇ ಈ ಸಾಧನೆಗೈದು ಚಿನ್ನವನ್ನು ತಮ್ಮ ಹೆಸರಿಗೆ ಬರೆದುಕೊಂಡರು. ಬೇರೆ ಯಾರು ಕೂಡ 70 ಮೀ. ಗಡಿ ದಾಟಲಿಲ್ಲ.

67.03 ಮೀ. ದೂರ ಎಸೆದ ಶ್ರೀಲಂಕಾದ ದುಲನ್‌ ಕೊಡಿತುವಾಕ್ಕು ಬೆಳ್ಳಿ ಗೆದ್ದರೆ, 64.89 ಮೀ. ದೂರಕ್ಕೆ ಎಸೆದ ಆಸ್ಟ್ರೇಲಿಯದ ಮೈಕಲ್‌ ಬುರಿಯನ್‌ ಕಂಚು ಗೆದ್ದರು. ಭಾರತದ ಮತ್ತೂಬ್ಬ ಸ್ಪರ್ಧಿ ಸಂದೀಪ್‌ ಚೌಧರಿ 62.80 ಮೀ. ದೂರ ಎಸೆಯುವ ಮೂಲಕ 4ನೇ ಸ್ಥಾನ ಪಡೆದುಕೊಂಡರು.

ಸುಮಿತ್‌ ಅಂತಿಲ್‌ ಮೊದಲ ಪ್ರಯತ್ನದಲ್ಲೇ 69.11 ಮೀ. ದೂರಕ್ಕೆ ಜಾವೆಲಿನ್‌ ಎಸೆದು ನೂತನ ಪ್ಯಾರಾಲಿಂಪಿಕ್ಸ್‌ ದಾಖಲೆ ಸ್ಥಾಪಿಸಿದರು. ಟೋಕಿಯೊದಲ್ಲಿ ನಿರ್ಮಿಸಿದ್ದ ತಮ್ಮ 68.55 ಮೀ. ದಾಖಲೆಯನ್ನು ಮುರಿದರು. 2ನೇ ಸುತ್ತಿನಲ್ಲಿ ಇದು 70.59 ಮೀ.ಗೆ ಏರಿತು. ದಾಖಲೆ ಇನ್ನಷ್ಟು ಉತ್ತಮಗೊಂಡಿತು. 3ನೇ ಸುತ್ತಿನಲ್ಲಿ 66.66 ಮೀ. ದಾಖಲಾಯಿತು. ನಾಲ್ಕನೆಯದು ಫೌಲ್‌. ಬಳಿಕ 69.04 ಹಾಗೂ 66.57 ಮೀ. ದಾಖಲಿಸಿದರು.

ವಿಶ್ವದಾಖಲೆಯ ವೀರ

ಪ್ಯಾರಾ ಜಾವೆಲಿನ್‌ ವಿಶ್ವದಾಖಲೆ ಕೂಡ ಸುಮಿತ್‌ ಅಂತಿಲ್‌ ಹೆಸರಿನಲ್ಲಿದೆ. 2022ರಲ್ಲಿ ಹ್ಯಾಂಗ್‌ಝೂನಲ್ಲಿ ನಡೆದ ಏಷ್ಯನ್‌ ಗೇಮ್ಸ್‌ ನಲ್ಲಿ 73.29 ಮೀ. ದೂರ ಎಸೆಯುವ ಮೂಲಕ ಈ ದಾಖಲೆ ನಿರ್ಮಿಸಿದ್ದರು. ಹೀಗಾಗಿ ಪ್ಯಾರಿಸ್‌ನಲ್ಲಿ ಇವರು ಚಿನ್ನದ ಭರವಸೆ ಮೂಡಿಸಿದ್ದರು. ಇದನ್ನು ಸಾಕಾರ ಗೊಳಿಸುವಲ್ಲಿ ಯಶಸ್ವಿಯಾದರು.

ನಿತ್ಯಶ್ರೀಗೆ ಕಂಚಿನ ಪದಕ

ಸೋಮವಾರ ರಾತ್ರಿಯ ಪ್ಯಾರಾ ಬ್ಯಾಡ್ಮಿಂಟನ್‌ ಮಹಿಳಾ ಸಿಂಗಲ್ಸ್‌ ಎಸ್‌ಎಚ್‌6 ವಿಭಾಗದ ಪಂದ್ಯದಲ್ಲಿ ಭಾರತದ ನಿತ್ಯಶ್ರೀ ಶಿವನ್‌ ಕಂಚಿನ ಪದಕದೊಂದಿಗೆ ಖುಷಿಯನ್ನಾಚರಿಸಿದರು.

ಒಂದೇ ದಿನ ಗರಿಷ್ಠ 8 ಪದಕ

ಪ್ಯಾರಾಲಿಂಪಿಕ್ಸ್‌ನಲ್ಲಿ ಸೋಮವಾರ ಒಂದೇ ದಿನ ಭಾರತದ ಆ್ಯತ್ಲೀಟ್‌ಗಳು 8 ಪದಕ ಬೇಟೆಯಾಡಿದ್ದು, ಇದು ಭಾರತದ ಪರ ದೈನಂದಿನ ಗರಿಷ್ಠ ಸಾಧನೆ ಎನಿಸಿದೆ. ಕಳೆದ ಟೋಕಿಯೊ ಪ್ಯಾರಾ ಒಲಿಂಪಿಕ್ಸ್‌ನಲ್ಲಿ ಭಾರತ ಒಂದೇ ದಿನ 5 ಪದಕ ಜಯಿಸಿದ್ದು ಈವರೆಗಿನ ದಾಖಲೆಯಾಗಿತ್ತು. ಸೋಮವಾರ ಭಾರತದ ಕ್ರೀಡಾಳುಗಳು 2 ಚಿನ್ನ, 3 ಬೆಳ್ಳಿ, 3 ಕಂಚಿನ ಪದಕಗಳನ್ನು ಗೆದ್ದರು. ಇದರಲ್ಲಿ 5 ಪದಕಗಳು ಬ್ಯಾಡ್ಮಿಂಟನ್‌ನಲ್ಲಿ ಸಿಕ್ಕರೆ, ಆರ್ಚರಿ, ಡಿಸ್ಕಸ್‌ ತ್ರೊ ಮತ್ತು ಜಾವೆಲಿನ್‌ ಎಸೆತದಲ್ಲಿ ತಲಾ ಒಂದು ಪದಕ ಒಲಿಯಿತು.

ಭಾಗ್ಯಶ್ರೀ, ಅವನಿ ವಿಫ‌ಲ

ಮಂಗಳವಾರದ ಪ್ಯಾರಾಲಿಂಪಿಕ್ಸ್‌ ಮಹಿಳೆಯರ ಸ್ಪರ್ಧೆಗಳಲ್ಲಿ ಭಾರತ ಪದಕ ಗೆಲ್ಲಲು ವಿಫ‌ಲವಾಯಿತು. ಶಾಟ್‌ಪುಟ್‌ ಎಫ್34 ವಿಭಾಗದಲ್ಲಿ ಭಾಗ್ಯಶ್ರೀ ಜಾಧವ್‌ 5ನೇ ಸ್ಥಾನದಲ್ಲಿ ಸ್ಪರ್ಧೆ ಮುಗಿಸಿದರು. 50 ಮೀ. ರೈಫ‌ಲ್‌ ತ್ರಿ ಪೊಸಿಶನ್‌ ಎಸ್‌ಎಚ್‌1 ವಿಭಾಗದಲ್ಲಿ ಮೋನಾ ಅಗರ್ವಾಲ್‌ 13ನೇ ಸ್ಥಾನ ಪಡೆದು ಫೈನಲ್‌ಗೇರಲು ವಿಫ‌ಲರಾದರು. ಅವನಿ ಲೇಖರಾ 50 ಮೀ. ರೈಫ‌ಲ್‌ 3 ಪೊಸಿಶನ್‌ನಲ್ಲಿ 5ನೇ ಸ್ಥಾನಕ್ಕೆ ತೃಪ್ತಿಪಟ್ಟರು (420.6 ಅಂಕ).

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

sidda

‘One Nation One Election’ ಪ್ರಸ್ತಾವ: ಒಕ್ಕೂಟ ವ್ಯವಸ್ಥೆಗೆ ವಿರುದ್ಧ: ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

Ranji Trophy: Samit Dravid in possible squad

Ranji Trophy: ಸಂಭಾವ್ಯ ತಂಡದಲ್ಲಿ ಸಮಿತ್‌ ದ್ರಾವಿಡ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Car-Palti

Sulya: ಎರಡು ಕಾರುಗಳು ಢಿಕ್ಕಿ; ನಿಯಂತ್ರಣ ತಪ್ಪಿ ಕಾರು ಪಲ್ಟಿ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.