Beluru: ಕಸಾಯಿ ಖಾನೆ ಮೇಲೆ ಮತ್ತೆ ದಾಳಿ: ಸಾವಿರ ಕೆ.ಜಿ. ಮಾಂಸ ವಶ
15 ದಿನಗಳ ಹಿಂದೆ ದಾಳಿ ನಡೆಸಿದರೂ ದಂಧೆ ನಿರಂತರ!
Team Udayavani, Sep 4, 2024, 12:09 AM IST
ಬೇಲೂರು: ಅಕ್ರಮವಾಗಿ ಗೋಮಾಂಸ ಮಾರಾಟದ ಜತೆಗೆ ಹೊರ ರಾಜ್ಯಕ್ಕೆ ರಫ್ತು ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್ ಎಂ. ಮಮತಾ ಮತ್ತೆ 5 ಕಸಾಯಿ ಖಾನೆಗಳ ಮೇಲೆ ದಾಳಿ ನಡೆಸಿ ಸಾವಿರ ಕೆ.ಜಿ. ಗೋಮಾಂಸ ಮತ್ತು ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ. ತಹಶೀಲ್ದಾರ್ ಬರುವ ಮಾಹಿತಿ ಪಡೆದ ದಂಧೆಕೋರರು ಪರಾರಿಯಾಗಿದ್ದಾರೆ.
ಪಟ್ಟಣದಲ್ಲಿ ಕಳೆದ 2 ದಶಕದಿಂದ ರಾಜರೋಷವಾಗಿ ಅಕ್ರಮ ಗೋಮಾಂಸ ಮಾರಾಟ ನಡೆಯುತ್ತಿದೆ. 15 ದಿನಗಳ ಹಿಂದೆ ಬೇಲೂರು ತಹಶೀಲ್ದಾರ್ ಪಟ್ಟಣದ ಪುರಿಭಟ್ಟಿಗೆ ಮತ್ತು ಮುಸ್ತಫಾ ಬೀದಿ ಕಸಾಯಿಕಾನೆಗಳ ಮೇಲೆ ದಾಳಿ ನಡೆಸಿ 500 ಕೆ.ಜಿ. ಗೋಮಾಂಸ ವಶಪಡಿಸಿಕೊಂಡು ಎಚ್ಚರಿಕೆ ನೀಡಿದ್ದರು. ಇದೇ ರೀತಿ ಕೆಲವು ಬಾರಿ ದಾಳಿ ನಡೆಸಿ ಗೋಮಾಂಸ ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದರೂ ದಂಧೆ ಮಾತ್ರ ನಿರಂತರವಾಗಿದೆ. ಇದಕ್ಕೆ ಕೆಲವು ರಾಜಕಾರಣಿಗಳ ಕೃಪಾ ಕಟಾಕ್ಷವೇ ಕಾರಣ ಎಂದು ಸ್ಥಳೀಯರು ದೂರಿದ್ದಾರೆ.
ತಹಶೀಲ್ದಾರ್ ಅಳಲು!:
ತಹಶೀಲ್ದಾರ್ ಮಮತಾ ಮಾತನಾಡಿ, 15 ದಿನದ ಹಿಂದೆ ನಾನೇ ಬೇಲೂರು ಪಟ್ಟಣದ ಪುರಿಬಟ್ಟಿ ಮತ್ತು ಮುಸ್ತಾಫ ಬೀದಿಗಳಲ್ಲಿ ನಡೆಯುತ್ತಿರುವ ಗೋಮಾಂಸ ಮಾರಾಟ ಕಸಾಯಿ ಖಾನೆಗಳ ಮೇಲೆ ದಾಳಿ ನಡೆಸಿ 500 ಕೆ.ಜಿ. ಮಾಂಸ ವಶಪಡಿಸಿಕೊಂಡು ಎಚ್ಚರಿಕೆ ನೀಡಿದರೂ ಮತ್ತೆ ಮಾರಾಟ ನಡೆಯುತ್ತಿರುವುದು ನಿಜಕ್ಕೂ ಶೋಚನೀಯ. ಇಲ್ಲಿನ ಪುರಸಭೆ, ಪೊಲೀಸ್ ವ್ಯವಸ್ಥೆ ಏನು ಮಾಡುತ್ತಿದೆ ಎಂಬುದೇ ತಿಳಿಯುತ್ತಿಲ್ಲ. ಉನ್ನತ ಅಧಿಕಾರಿಗಳಿಗೆ ಪತ್ರ ಬರೆದು ಶಿಸ್ತು ಕ್ರಮ ಕ್ರಮ ಕೈಗೊಳ್ಳಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Minister ಕೆ.ಎನ್. ರಾಜಣ್ಣಗೆ ಪ್ರಾಸಿಕ್ಯೂಷನ್ ಸಂಕಷ್ಟ?
Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.