Congress Government: ನಿಗಮ, ಮಂಡಳಿ: ಸೆ. 13ರಂದು ನೇಮಕ ಅಂತಿಮ ಸಾಧ್ಯತೆ
ಎರಡೂವರೆ ಸಾವಿರ ಅರ್ಜಿ, ಮುಂಚೂಣಿ ಕಾರ್ಯಕರ್ತರಿಗೂ ಆದ್ಯತೆ ನೀಡಲು ತೀರ್ಮಾನ
Team Udayavani, Sep 4, 2024, 12:33 AM IST
ಬೆಂಗಳೂರು: ರಾಜ್ಯದ ವಿವಿಧ ನಿಗಮ-ಮಂಡಳಿಗಳ ನಿರ್ದೇಶಕರು ಮತ್ತು ಸದಸ್ಯರ ಆಯ್ಕೆಗೆ ಸಂಬಂಧಿಸಿದಂತೆ ಮಂಗಳವಾರ
ಮೊದಲ ಸಭೆ ನಡೆಯಿತು. ಈ ವೇಳೆ ಪಕ್ಷಕ್ಕಾಗಿ ದುಡಿದು, ಇದುವರೆಗೂ ಗುರುತಿಸಿಕೊಳ್ಳದ ತಳ ಸಮುದಾಯಗಳು ಹಾಗೂ ಪಕ್ಷದ ಕಾರ್ಯಕರ್ತರಿಗೆ ಆದ್ಯತೆ ನೀಡಲು ತೀರ್ಮಾನಿಸಲಾಯಿತು.
ಗೃಹ ಸಚಿವ ಡಾ| ಜಿ. ಪರಮೇಶ್ವರ್ ನೇತೃತ್ವದಲ್ಲಿ ನಡೆದ ಆಯ್ಕೆ ಸಮಿತಿಯ ಸಭೆಯಲ್ಲಿ ಸದಸ್ಯರೆಲ್ಲರೂ ಭಾಗವಹಿಸಿದ್ದರು. ಈ ವೇಳೆ ವಿವಿಧ ಕಡೆಯಿಂದ ನಿಗಮ-ಮಂಡಳಿಗಳ ಸದಸ್ಯರು ಹಾಗೂ ನಿರ್ದೇಶಕರ ಹುದ್ದೆಗಳಿಗೆ ಆಕಾಂಕ್ಷಿಗಳಿಂದ ಬಂದ ಅರ್ಜಿಗಳ ಮೊದಲ ಹಂತದ ಪರಿಶೀಲನೆ ಕಾರ್ಯ ನಡೆಯಿತು. ಸೆ. 13ರಂದು ಮತ್ತೆ ಸಮಿತಿಯು ಸಭೆ ಸೇರಲಿದ್ದು ಅಲ್ಲಿ ಬಹುತೇಕ ಆಯ್ಕೆ ಪ್ರಕ್ರಿಯೆ ಅಂತ್ಯಗೊಳ್ಳುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಕೆಪಿಸಿಸಿ ಕಚೇರಿಗೆ ಆಕಾಂಕ್ಷಿಗಳಿಂದ ಎರಡೂವರೆ ಸಾವಿರ ಅರ್ಜಿಗಳು ಬಂದಿದ್ದರೆ, ನೇರವಾಗಿ ಸಚಿವ ಪರಮೇಶ್ವರ್ ಸೇರಿ ಸಮಿತಿ ಸದಸ್ಯರಿಗೂ ಸಾವಿರಾರು ಅರ್ಜಿಗಳು ಸಲ್ಲಿಕೆಯಾಗಿವೆ. ಅದರಲ್ಲಿ ಶಾಸಕರು, ಸಚಿವರ ಶಿಫಾರಸು ಪತ್ರಗಳೂ ಇವೆ. ಅವೆಲ್ಲವುಗಳ ಬಗ್ಗೆ ಮೊದಲ ಸಭೆಯಲ್ಲಿ ಚರ್ಚಿಸಲಾಯಿತು. ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿಗಾಗಿ ದುಡಿದ ಮುಂಚೂಣಿ ಕಾರ್ಯಕರ್ತರಿಗೆ ಆದ್ಯತೆ ನೀಡುವ ಬಗ್ಗೆ ಚರ್ಚಿಸಲಾಯಿತು.
ಯಾವುದೇ ಕಾರಣಕ್ಕೂ ಕಾರ್ಯಕರ್ತರನ್ನು ಕಡೆಗಣಿಸಬಾರದು. ಈ ನಿಟ್ಟಿನಲ್ಲಿ ಜಿಲ್ಲಾ ಘಟಕಗಳ ಅಧ್ಯಕ್ಷರಿಂದ ಹೆಸರು ಪಡೆಯಬೇಕು. ಯುವ ಕಾಂಗ್ರೆಸ್, ಸಾಮಾಜಿಕ ಜಾಲತಾಣ, ಎನ್ಎಸ್ಯುಐ ಸೇರಿ ವಿವಿಧ ಮುಂಚೂಣಿ ಘಟಕಗಳಲ್ಲಿ ಕಾರ್ಯನಿರ್ವಹಿಸಿದ ಅರ್ಹರನ್ನು ಗುರುತಿಸಲು ತೀರ್ಮಾನ ಕೈಗೊಳ್ಳಲಾಯಿತು. ಮುಂದಿನ ಸಭೆಯ ಹೊತ್ತಿಗೆ ನಿಗಮ-ಮಂಡಳಿಗಳ ಸದಸ್ಯರು ಮತ್ತು ನಿರ್ದೇಶಕರ ಆಯ್ಕೆ ಪಟ್ಟಿ ಸಿದ್ಧಗೊಳ್ಳಲಿದೆ. ನಂತರ ಅದನ್ನು ಸಿಎಂ-ಡಿಸಿಎಂ ಗಮನಕ್ಕೆ ತಂದು ಅಂತಿಮಗೊಳಿಸಲಾಗುವುದು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Minister ಕೆ.ಎನ್. ರಾಜಣ್ಣಗೆ ಪ್ರಾಸಿಕ್ಯೂಷನ್ ಸಂಕಷ್ಟ?
Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.