Uppinangady: ಸೇತುವೆ ಬದಿ ಮೊಸಳೆ ಪತ್ತೆ
Team Udayavani, Sep 4, 2024, 12:49 AM IST
ಉಪ್ಪಿನಂಗಡಿ: ಇಲ್ಲಿನ ಹೊಸ ಬಸ್ ನಿಲ್ದಾಣದ ಬಳಿಯ ನೇತ್ರಾವತಿ ನದಿಯ ಬದಿ ಸೆ. 3ರಂದು ಮೊಸಳೆಯೊಂದು ಪತ್ತೆಯಾಗಿರುವುದು ಜನತೆಯ ಆತಂಕಕ್ಕೆ ಕಾರಣವಾಗಿದೆ.
ನದಿಯ ಬದಿಯಲ್ಲಿ ಮಂಗಳವಾರ ಸಂಜೆ ಮೊಸಳೆಯೊಂದು ಮರಳ ದಿಬ್ಬದಲ್ಲಿ ವಿರಮಿಸುತ್ತಿರುವುದನ್ನು ಇಳಂತಿಲ ಗ್ರಾ.ಪಂ. ಮಾಜಿ ಸದಸ್ಯ, ಫಯಾಜ್ ಯು.ಟಿ. ಗಮನಿಸಿ ಫೋಟೋ ಕ್ಲಿಕ್ಕಿಸಿದ್ದಾರೆ. ಇದು ದೊಡ್ಡ ಗಾತ್ರದ ಮೊಸಳೆ ಆಗಿದೆ.
ಕಳೆದ 2022ರ ಸೆಪ್ಟಂಬರ್ನಲ್ಲಿ ಪಂಜಳದ ಪೆಟ್ರೋಲ್ ಪಂಪ್ ಸಮೀಪ ನೇತ್ರಾವತಿ ನದಿಯಲ್ಲಿ ಮೂರು ಮೊಸಳೆಗಳು ಕಂಡು ಬಂದಿದ್ದವು. ಮಧ್ಯಾಹ್ನ ಹೊತ್ತಿನಲ್ಲಿ ನದಿ ಮಧ್ಯದಲ್ಲಿ ಮರಳ ದಿಬ್ಬದ ಮೇಲೆ ಈ ಮೊಸಳೆಗಳು ವಿಶ್ರಾಂತಿ ಪಡೆದಿರುವುದು ಕಂಡು ಬಂದಿತ್ತು. ಇದರಲ್ಲಿ ಒಂದು ಮೊಸಳೆ ದೊಡ್ಡ ಗಾತ್ರದಾದರೆ, ಇನ್ನೆರಡು ಮೊಸಳೆಗಳು ಅದಕ್ಕಿಂತ ಸ್ವಲ್ಪ ಸಣ್ಣ ಗಾತ್ರದ್ದಾಗಿದ್ದವು. ಆದರೆ ಈ ಬಾರಿ ಒಂದು ಮೊಸಳೆ ಮಾತ್ರ ಕಂಡು ಬಂದಿದೆ. ಇದು ನೇತ್ರಾವತಿ ನದಿಯಲ್ಲಿ ಮೊಸಳೆಗಳ ವಾಸ ಇವೆ ಎನ್ನುವುದಕ್ಕೆ ಪುಷ್ಠಿ ನೀಡಿದೆ.
ಮಂಗಳವಾರ ಮೊಸಳೆ ಕಂಡು ಬಂದ ಸ್ಥಳದಿಂದ ಸುಮಾರು 500 ಮೀ. ದೂರದಲ್ಲಿ ನೇತ್ರಾವತಿ- ಕುಮಾರಧಾರ ನದಿಗಳು ಸಂಗಮವಾಗುತ್ತಿದ್ದು, ಅಲ್ಲೇ ಇರುವ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ಬಳಿಯ ಸ್ನಾನಘಟ್ಟದಲ್ಲಿ ಪಿಂಡ ಪ್ರದಾನ ಕಾರ್ಯ, ತೀರ್ಥ ಸ್ನಾನಗಳು ನಿರಂತರ ನಡೆಯುತ್ತಿವೆ. ಇದೀಗ ಈ ಸ್ಥಳದಲ್ಲಿ ಮೊಸಳೆ ಕಂಡು ಬಂದಿರುವುದು ಹಲವರ ಆತಂಕಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Puttur: ವಿದ್ಯುತ್ ಉಪಕರಣದಲ್ಲಿ ಬೆಂಕಿ
Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ
High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.
ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯ;ಗ್ರಾ.ಪಂ.ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ
Belthangady ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಅಸ್ಥಿತ್ವಕ್ಕೆ; ಲೋಗೋ ಅನಾವರಣ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.