Hubballi: ಜ.15ರಿಂದ ವರೂರು ನವಗ್ರಹ ಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕ: ಡಾ| ಹೆಗ್ಗಡೆ
ಪಂಚಕಲ್ಯಾಣ ಪ್ರತಿಷ್ಠಾ ಮಹಾಮಹೋತ್ಸವ ಜ.15ರಿಂದ 26ರ ವರೆಗೆ ಆಯೋಜನೆ
Team Udayavani, Sep 4, 2024, 1:10 AM IST
ಹುಬ್ಬಳ್ಳಿ: ನಗರದ ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ಶ್ರೀ ಪಾರ್ಶ್ವನಾಥ ತೀರ್ಥಂಕರರ ಮಹಾಮಸ್ತಕಾಭಿಷೇಕ ಹಾಗೂ 405 ಅಡಿ ಎತ್ತರದ ಸುಮೇರು ಪರ್ವತ ಜಿನಬಿಂಬ ಪಂಚಕಲ್ಯಾಣ ಪ್ರತಿಷ್ಠಾ ಮಹಾಮಹೋತ್ಸವವನ್ನು ಜನವರಿ 15ರಿಂದ 26ರ ವರೆಗೆ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಮಹಾಮಹೋತ್ಸವ ಸ್ವಾಗತ ಸಮಿತಿ ಅಧ್ಯಕ್ಷರಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆ ಪ್ರಕಟಿಸಿದರು.
ನವಗ್ರಹ ತೀರ್ಥಕ್ಷೇತ್ರದಲ್ಲಿ ಮಂಗಳವಾರ ನಡೆದ ಸ್ವಾಗತ ಸಮಿತಿ ಪದಾಧಿಕಾರಿಗಳು-ಪ್ರಮುಖರ ಸಭೆ ಹಾಗೂ ಮಹಾಮಸ್ತಕಾಭಿಷೇಕ ಮುಹೂರ್ತ ಉದ್ಘೋಷ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಶ್ರವಣಬೆಳಗೊಳ, ಧರ್ಮಸ್ಥಳದಲ್ಲಿ ಸಾಕಷ್ಟು ಮಹಾಮಸ್ತಕಾಭಿಷೇಕ ಕಾರ್ಯಕ್ರಮಗಳನ್ನು ನನ್ನ ಅಧ್ಯಕ್ಷತೆಯಲ್ಲಿ ಮಾಡಿದ್ದೇನೆ. ಆದರೆ ವರೂರು ನವಗ್ರಹ ತೀರ್ಥಂಕರರ ಮಹಾಮಸ್ತಕಾಭಿಷೇಕವು ಅತ್ಯಂತ ವಿಶಿಷ್ಟ ಮತ್ತು ಬೃಹತ್ ಮಟ್ಟದಲ್ಲಿ ನಡೆಯುತ್ತಿರುವುದಕ್ಕೆ ಸಂತಸವಾಗುತ್ತಿದೆ ಎಂದರು.
27 ಪದಾರ್ಥಗಳಿಂದ ಮಜ್ಜನ
ನವಗ್ರಹ ತೀರ್ಥ ಕ್ಷೇತ್ರದ ಆಚಾರ್ಯ ಗುಣಧರನಂದಿ ಮಹಾರಾಜರು ಮಾತನಾಡಿ, ನವ ತೀರ್ಥಂಕರರ ಮಹಾ
ಮಜ್ಜನವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿ ಸಲು ನಿರ್ಧರಿಸಲಾಗಿದೆ. 27 ಪದಾರ್ಥಗಳಿಂದ ಮಹಾಮಸ್ತಕಾ ಭಿಷೇಕ ನಡೆಯಲಿದ್ದು, 200 ಪಂಡಿತರು ನೆರವೇರಿಸಲಿದ್ದಾರೆ. ವಿಶ್ವದಲ್ಲಿ ಇದೇ ಮೊದಲ ಬಾರಿಗೆ ಮಹಾಮಜ್ಜನವನ್ನು ಲೇಸರ್ ಶೋ ಮೂಲಕ ಪ್ರದರ್ಶಿಸಲಾಗುವುದು ಎಂದರು.
ದಸರಾ ಮಾದರಿಯಲ್ಲಿ ಬೃಹತ್ ಮೆರವಣಿಗೆ ಆಯೋಜಿಸಲಾಗುತ್ತಿದ್ದು, 24 ಕುದುರೆ, ರಥ, 9 ಆನೆ, 9 ಜಾಂಜ್ಪಥ ಒಳಗೊಂಡು ನಾನಾ ಪ್ರಕಾರ ಗಳು ಪಾಲ್ಗೊಳ್ಳಲಿವೆ. ಕೊನೆಯ ದಿನ 3,333 ಶ್ರಾವಕ-ಶ್ರಾವಕಿಯರಿಂದ ಮಹಾಅರ್ಚನೆ ನಡೆಯಲಿದೆ ಎಂದರು. ಸ್ವಸ್ತಿಶ್ರೀ ಧರ್ಮಸೇನ ಭಟ್ಟಾರಕರು ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ
Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ
B.C.Road ಏನು ಅಫ್ಘಾನಿಸ್ಥಾನ,ಪಾಕಿಸ್ಥಾನದಲ್ಲಿ ಇದೆಯಾ?: ಮುತಾಲಿಕ್ ಕಿಡಿ
Hubli: ರಾಡ್ ಬಿದ್ದು ಎಎಸ್ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ
Meet Friends: ಧಾರವಾಡದ ಹಳೆಯ ಗೆಳೆಯರ ಭೇಟಿಯಾದ ತೆಲುಗು ನಟ ಶ್ರೀಕಾಂತ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Minister ಕೆ.ಎನ್. ರಾಜಣ್ಣಗೆ ಪ್ರಾಸಿಕ್ಯೂಷನ್ ಸಂಕಷ್ಟ?
Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.