Bengaluru: ಫ್ಲೈಓವರ್ನಿಂದ ಕೆಳಗೆ ಬಿದ್ದ ಕಾರು: ಟೆಕಿ ಸಾವು, ಇಬ್ಬರ ಸ್ಥಿತಿ ಗಂಭೀರ
Team Udayavani, Sep 4, 2024, 9:51 AM IST
ಬೆಂಗಳೂರು: ಅತೀ ವೇಗದ ಚಾಲನೆಯಿಂದ ನಿಯಂತ್ರಣ ತಪ್ಪಿದ ಕಾರು ಎದುರು ಬರುತ್ತಿದ್ದ ಬೈಕ್ಗೆ ಡಿಕ್ಕಿ ಹೊಡೆದು ಮೇಲು ಸೇತುವೆಯಿಂದ ಕೆಳಗೆ ಬಿದ್ದ ಪರಿಣಾಮ ಪ್ರಯಾಣಿಕರೊಬ್ಬರು ಮೃತಪಟ್ಟಿರುವ ಘಟನೆ ಯಶವಂತಪುರ ಠಾಣೆ ಮುಂಭಾಗದ ಮೇಲು ಸೇತುವೆ ಬಳಿ ಮಂಗಳವಾರ ಮುಂಜಾನೆ ನಡೆದಿದೆ.
ತಮಿಳುನಾಡು ಮೂಲದ ಶಬರೀಶ್(29) ಮೃತ ಟೆಕಿ. ಘಟನೆಯಲ್ಲಿ ಕಾರು ಚಾಲಕ ಮಿಥುನ್ ಚಕ್ರ ವರ್ತಿ, ಶಂಕರ್ರಾವ್ ಮತ್ತು ಅನುಶ್ರೀ ಹಾಗೂ ಬೈಕ್ ಚಾಲಕ ಮಂಜುನಾಥ್ ಗಾಯಗೊಂಡಿ ದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ ಶಂಕರ್ರಾವ್ ಮತ್ತು ಮಿಥುನ್ ಚಕ್ರವರ್ತಿ ಸ್ಥಿತಿ ಗಂಭೀರವಾಗಿದೆ ಎಂದು ಉತ್ತರ ಸಂಚಾರ ವಿಭಾಗದ ಡಿಸಿಪಿ ಸಿರಿಗೌರಿ ಮಾಹಿತಿ ನೀಡಿದರು.
ತಮಿಳುನಾಡು ಮೂಲದ ಶಬರೀಶ್ ಸಾಫ್ಟ್ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ವೀಸಾ ಪಡೆಯಲು ನಗರಕ್ಕೆ ಬಂದಿದ್ದರು. ಜತೆಗೆ ನಗರದಲ್ಲಿರುವ ತಮ್ಮ ಸ್ನೇಹಿತರಾದ ಮಿಥುನ್ ಚಕ್ರವರ್ತಿ, ಶಂಕರ್ ರಾವ್ ಹಾಗೂ ಅನುಶ್ರೀ ಜತೆ ಸೋಮವಾರ ರಾತ್ರಿ ಓರಾಯನ್ ಮಾಲ್ನಲ್ಲಿ ಶಾಪಿಂಗ್ ಮಾಡಿ, ಪಾರ್ಟಿ ಮಾಡಿದ್ದಾರೆ. ಬಳಿಕ ಮುಂಜಾನೆ 4 ಗಂಟೆ ಸುಮಾರಿಗೆ ಊಟಕ್ಕಾಗಿ ಮಲ್ಲೇಶ್ವರನಿಂದ ಸದಾಶಿವನಗರದವರೆಗೆ ಸುತ್ತಾಡಿದ್ದಾರೆ. ಎಲ್ಲಿಯೂ ಊಟ ಸಿಕ್ಕಿಲ್ಲ. ಬಳಿಕ ಸದಾಶಿವನಗರದಿಂದ ಯಶವಂತಪುರ ಮೇಲುಸೇತುವೆ ಮಾರ್ಗವಾಗಿ ತುಮಕೂರು ಕಡೆ ಹೊರಟ್ಟಿದ್ದರು. ಆದರೆ, ಮೇಲು ಸೇತುವೆಯಲ್ಲಿ ಚಾಲಕ ಮಿಥುನ್ ಚಕ್ರವರ್ತಿ ನಿಯಂತ್ರಣ ತಪ್ಪಿ ಎದುರು ಬರುತ್ತಿದ್ದ ಬೈಕ್ಗೆ ಹೊಡೆದಿದ್ದಾನೆ. ಪರಿಣಾಮ ಕಾರು ಮೇಲು ಸೇತುವೆಯಿಂದ ಕೆಳಗೆ ಬಿದ್ದಿದ್ದು, ಈ ವೇಳೆ ಅನುಶ್ರೀ ಕಾರಿನ ಡೋರ್ ಓಪನ್ ಆದಾಗ ಮೇಲು ಸೇತುವೆ ರಸ್ತೆಯಲ್ಲೇ ಬಿದ್ದಿದ್ದಾರೆ. ಇನ್ನು ಮೇಲು ಸೇತುವೆಯಿಂದ ಕೆಳಗೆ ಬಿದ್ದ ಮೂವರ ಪೈಕಿ ಶಬರೀಶ್ಗೆ ಗಂಭೀರ ಗಾಯವಾಗಿ, ತೀವ್ರ ರಕ್ತಸ್ರಾವ ಆಗಿತ್ತು. ಕೂಡಲೇ ಸ್ಥಳೀಯರು ಮೂವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಶಬರೀಶ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಉತ್ತರ ಸಂಚಾರ ವಿಭಾಗದ ಡಿಸಿಪಿ ಸಿರಿಗೌರಿ ತಿಳಿಸಿದ್ದಾರೆ.
ಮದ್ಯದ ಬಾಟಲಿಗಳು ಪತ್ತೆ : ಪೊಲೀಸರ ಪರಿಶೀಲನೆ ವೇಳೆ ಕಾರಿನಲ್ಲಿ ಮದ್ಯದ ಬಾಟಲಿಗಳು ಪತ್ತೆಯಾಗಿದ್ದು, ಕುಡಿದು ಗಾಡಿ ಕಾರು ಚಾಲನೆ ಮಾಡಿರುವ ಸಾಧ್ಯತೆಯಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದರು. ಈ ಸಂಬಂಧ ಯಶವಂತಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!
Bengaluru: ಮೆಜೆಸ್ಟಿಕ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು
Bengaluru: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 9 ಮೊಬೈಲ್ ಫೋನ್ಗಳು ಪತ್ತೆ!
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.