Theft Case: ಜೈಲಿಂದ ಹೊರಬಂದ ಕೂಡಲೇ ಮತ್ತೆ ಕಳ್ಳತನಕ್ಕಿಳಿದ ಆರೋಪಿ!
Team Udayavani, Sep 4, 2024, 10:02 AM IST
ಬೆಂಗಳೂರು: ಹಗಲು ವೇಳೆ ಮನೆ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಮಾರತ್ತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮೈಸೂರು ರಸ್ತೆಯ ಜನತಾ ಕಾಲೋನಿ ನಿವಾಸಿ ನಾಗರಾಜ್ ಅಲಿಯಾಸ್ ಮತ್ತಿ ನಾಗ(32) ಬಂಧಿತ. ಆರೋಪಿಯಿಂದ 8 ಲಕ್ಷ ರೂ. ಮೌಲ್ಯದ 118 ಗ್ರಾಂ ಚಿನ್ನಾಭರಣ, 203 ಗ್ರಾಂ ಬೆಳ್ಳಿ ವಸ್ತುಗಳು ಹಾಗೂ 1 ಬೈಕ್ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.
ಆರೋಪಿ ಇತ್ತೀಚೆಗೆ ಠಾಣೆ ವ್ಯಾಪ್ತಿಯ ಎನ್ಟಿಆರ್ಲೇಔಟ್ನ ಮನೆಯೊಂದರ ಬೀಗ ಮುರಿದು ಬೀರುವಿನ ಲಾಕರ್ ನಲ್ಲಿದ್ದ 78 ಗ್ರಾಂ ಚಿನ್ನಾಭರಣ ಕಳವು ಮಾಡಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ. ಆತ ರೂಢಿಗತ ಆರೋಪಿಯಾಗಿದ್ದು, ಈತನ ವಿರುದ್ಧ ಮಾರತ್ತಹಳ್ಳಿ. ಆನೇಕಲ್, ಕೋಣನಕುಂಟೆ, ಸೂರ್ಯ ನಗರ ಸೇರಿ ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದ 12 ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದರು.
ಇತ್ತೀಚೆಗಷ್ಟೇ ಆರೋಪಿ ಪ್ರಕರಣವೊಂದರಲ್ಲಿ ರಾಮನಗರ ಜೈಲು ಸೇರಿದ್ದ ಇದೀಗ ಬಿಡುಗಡೆಯಾಗಿ ಬಂದು ಕೆಲ ದಿನಗಳಲ್ಲೇ ಮತ್ತೆ ಮನೆ ಕಳ್ಳತನ ಮಾಡಿ ಜೈಲು ಸೇರಿದ್ದಾನೆ. ಮಡಿಕೇರಿ ಮೂಲದ ಆರೋಪಿ ಹಲವು ವರ್ಷಗಳಿಂದ ಕಳ್ಳತನವನ್ನೇ ವೃತ್ತಿಯನ್ನಾಗಿಸಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!
Bengaluru: ಮೆಜೆಸ್ಟಿಕ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು
Bengaluru: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 9 ಮೊಬೈಲ್ ಫೋನ್ಗಳು ಪತ್ತೆ!
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.