High Court: ಜ್ಯೋತಿಷಿ ಕೇಸ್‌ ರದ್ದತಿಗೆ ಕೋರ್ಟ್‌ ನಕಾರ


Team Udayavani, Sep 4, 2024, 10:05 AM IST

High Court: ಜ್ಯೋತಿಷಿ ಕೇಸ್‌ ರದ್ದತಿಗೆ ಕೋರ್ಟ್‌ ನಕಾರ

ಬೆಂಗಳೂರು: ಕುಂಡಲಿ ಪೂಜೆ ನೆಪದಲ್ಲಿ ಮಹಿ ಳೆ ಯೊಂದಿಗೆ ಅಸಭ್ಯ ವರ್ತಿಸಿ ಆಕೆಯ ಗೌರವಕ್ಕೆ ಧಕ್ಕೆ ತಂದ ಆರೋಪದಲ್ಲಿ ಜ್ಯೋತಿಷಿಯೊಬ್ಬರ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್‌ ನಿರಾಕರಿಸಿದೆ.

ಇದೇ ವೇಳೆ ಜ್ಯೋತಿಷಿ ಬಳಿಗೆ ಕರೆದುಕೊಂಡು ಹೋಗಿದ್ದಲ್ಲದೆ ಅವರ ವರ್ತನೆಯನ್ನು ಪ್ರಶ್ನಿಸದ ಮಹಿಳೆಯ ಪತಿಯ ವಿರುದ್ಧದ ಪ್ರಕರಣವನ್ನೂ ರದ್ದುಗೊಳಿಸಲು ನ್ಯಾಯಾಲಯ ನಿರಾಕರಿಸಿದೆ. ಮಹಿಳೆಯ ಪತಿ ಎಚ್‌.ಪಿ.ದೀಪ ದರ್ಶನ್‌ ಮತ್ತು ಜ್ಯೋತಿಷಿ ಮೋಹನ್‌ ದಾಸ್‌ ಅಲಿ ಯಾಸ್‌ ಶಿವರಾಮು ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಉಮಾ ಅವರಿದ್ದ ನ್ಯಾಯಪೀಠ, ಅರ್ಜಿ ಯನ್ನು ವಜಾಗೊಳಿಸಿ ಆದೇಶಿಸುವ ಮೂಲಕ ಪ್ರಕರಣ ರದ್ದುಪಡಿಸಿಲು ನಿರಾಕರಿಸಿದೆ.

ಪತ್ನಿಯ ಕುಂಡಲಿ ದೋಷವನ್ನು ಸರಿಪಡಿಸಲು ಪತಿ ದೀಪ ದರ್ಶನ್‌ ಅವರು ದೂರುದಾರರಾಗಿರುವ ಪತ್ನಿಯನ್ನು ಜ್ಯೋತಿಷಿಯಾದ ಮೋಹನ್‌ ದಾಸ್‌ ಎಂಬುವರ ಬಳಿಗೆ ಕರೆದೊಯ್ದಿದ್ದರು. ಜ್ಯೋತಿಷಿಯು ಮಹಿಳೆ ದೇಹವನ್ನು ಸ್ಪರ್ಶಿಸಿ ಅಸಭ್ಯವಾಗಿ ವರ್ತಿಸಿದ್ದಾರೆ. ಈ ಮೂಲಕ ಜ್ಯೋತಿಷಿ ಅಪರಾಧವೆಸಗಿದ್ದರೆ, ಅದನ್ನು ವಿರೋಧಿಸದಂತೆ ಎಚ್ಚರಿಕೆ ನೀಡುವ ಮೂಲಕ ಮಹಿಳೆಯ ಪತಿಯೂ ಅಪರಾಧ ಮಾಡಿದ್ದಾರೆ ಎಂದು ನ್ಯಾಯಪೀಠ ಆದೇಶದಲ್ಲಿ ತಿಳಿಸಿದೆ. ಇಬ್ಬರೂ ಅರ್ಜಿದಾರರ ವಿರುದ್ಧ ಗಂಭೀರ ಸ್ವರೂಪದ ಆರೋಪವಿದೆ.

ಈ ಮೊದಲು ದಾಖಲಿಸಿದ್ದ ಪ್ರಕರಣ ಮತ್ತು ಎರಡನೇ ಬಾರಿ ದಾಖಲಿಸಿದ್ದ ಪ್ರಕರಣದಲ್ಲಿ ಒಂದೇ ರೀತಿಯ ಆರೋಪಗಳಿದ್ದು, ಪ್ರಕರಣದ ರದ್ದುಗೊಳಿ ಸ ಬೇಕು ಎಂದು ಅರ್ಜಿದಾರರ ವಾದವನ್ನು ನ್ಯಾಯಪೀಠ ತಳ್ಳಿ ಹಾಕಿತು.

ಮದುವೆ ದುರದೃಷ್ಟ : ದಂಪತಿ 2014ರಲ್ಲಿ ಮದುವೆಯಾಗಿದ್ದು ಅಂದಿನಿಂದ ಮನೆಗೆ ದುರದೃಷ್ಟವಾಗಿದೆ. ಮದುವೆಯಾದ ದಿನದಿಂದ ಅಪಹಾಸ್ಯ ಮಾಡುವುದು ಮತ್ತು ಕ್ರೌರ್ಯದಿಂದ ನಡೆಸಿಕೊಳ್ಳುತ್ತಿದ್ದರು. ಅಲ್ಲದೆ, ಈ ಸಂಬಂಧ ಜ್ಯೋತಿಷಿ ಇಲ್ಲವೇ ದೇವಮಾ ನವರನ್ನು ಭೇಟಿಯಾಗಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂಬು ದಾಗಿ ಪತಿಯ ಕುಟುಂಬದವರ ಒತ್ತಾಯ ಯಿಸಿದ್ದರು. ಅದಕ್ಕಾಗಿ ಜ್ಯೋತಿಷ್ಯಾಲ ಯಕ್ಕೆ ಕರೆದುಕೊಂಡು ಹೋಗಲಾಗಿತ್ತು. ಆಗ ಕುಂಡಲಿಯನ್ನು ಸರಿಪಡಿಸುವು ದಕ್ಕಾಗಿ ಪೂಜೆ ಮಾಡುವ ಸೋಗಿನಲ್ಲಿ ಆಕೆ ದೇಹವನ್ನು ಅನುಚಿತವಾಗಿ ಸ್ಪರ್ಶಿಸಿ ಅಪರಾಧವೆಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿತ್ತು. ಇದೇ ವೇಳೆ ಮಹಿಳೆ ತನ್ನ ಪತಿಯ ವಿರುದ್ಧವೂ ದೂರು ನೀಡಿದ್ದರು.

ಟಾಪ್ ನ್ಯೂಸ್

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

Road rage case: ರೋಡ್‌ ರೇಜ್‌ ಕೇಸ್‌ ಬಗ್ಗೆ ದೂರು ನೀಡಿ; ಕಮಿಷನರ್‌

Road rage case: ರೋಡ್‌ ರೇಜ್‌ ಕೇಸ್‌ ಬಗ್ಗೆ ದೂರು ನೀಡಿ; ಕಮಿಷನರ್‌

Namma Metro: ಮೆಟ್ರೋ ಹಳಿ ಮೇಲೆ ಜಿಗಿದು ಆತ್ಮಹತ್ಯೆಗೆ ಯತ್ನ

Namma Metro: ಮೆಟ್ರೋ ಹಳಿ ಮೇಲೆ ಜಿಗಿದು ಆತ್ಮಹತ್ಯೆಗೆ ಯತ್ನ

Laptop theft: ಕೆಲಸಕ್ಕಿದ್ದ ಕಂಪನಿಯಲ್ಲೇ 55 ಲ್ಯಾಪ್‌ಟಾಪ್‌ ಕದ್ದ ಟೆಕಿ!

Laptop theft: ಕೆಲಸಕ್ಕಿದ್ದ ಕಂಪನಿಯಲ್ಲೇ 55 ಲ್ಯಾಪ್‌ಟಾಪ್‌ ಕದ್ದ ಟೆಕ್ಕಿ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.