![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Sep 4, 2024, 11:08 AM IST
ಬಂಟ್ವಾಳ: ರಸ್ತೆ ಸಮತಟ್ಟು ಮಾಡುವ ಡೋಸರ್ ವಾಹನಕ್ಕೆ ಲಾರಿಯೊಂದು ಡಿಕ್ಕಿ ಹೊಡೆದ ರಭಸಕ್ಕೆ ಸ್ಟೇರಿಂಗ್ ಕಡಿತಗೊಂಡು ರಸ್ತೆ ಮಧ್ಯದಲ್ಲಿ ಬಾಕಿಯಾಗಿ ನಿಂತ ಘಟನೆ ಸೆ.4ರ ಬುಧವಾರ ಬೆಳಿಗ್ಗೆ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ.
ಬಿಸಿರೋಡಿನ ಕಡೆಯಿಂದ ಬರುತ್ತಿದ್ದ ಪಾರ್ಸೆಲ್ ಸಾಮಾಗ್ರಿಗಳನ್ನು ಕೊಂಡು ಹೋಗುವ ಲಾರಿ ಪಾಣೆಮಂಗಳೂರು ಸೇತುವೆ ಕಳೆದು ಮುಂದೆ ಹೋಗುತ್ತಿದ್ದ ವೇಳೆ ಕೆಎನ್ಆರ್ ಸಿ ಕಂಪೆನಿಯ ಡೋಸರ್ ವಾಹನಕ್ಕೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಸ್ಟೇರಿಂಗ್ ತುಂಡಾದ ತಕ್ಷಣ ಲಾರಿ ನಿಯಂತ್ರಣ ಕಳೆದುಕೊಂಡು ರಸ್ತೆ ಕಾಮಗಾರಿಗಾಗಿ ರಸ್ತೆಯ ಬದಿಯಲ್ಲಿ ತಾತ್ಕಾಲಿಕವಾಗಿ ಇಟ್ಟಿರುವ ಡಿವೈಡರ್ ಗೆ ಡಿಕ್ಕಿಯಾಗಿ ನಿಂತಿದೆ.
ಘಟನೆ ಬೆಳಿಗ್ಗೆ ಸುಮಾರು 7 ಗಂಟೆಗೆ ನಡೆದಿದ್ದು, ಘಟನೆಯ ಬಳಿಕ 2 ಗಂಟೆಗಳ ಕಾಲ ನಿರಂತರವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗಿದೆ.
ಘಟನೆಯಿಂದ ಲಾರಿ ಚಾಲಕ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾನೆ.
ಅಪಘಾತ ಸಂಭವಿಸಿ ಟ್ರಾಫಿಕ್ ಜಾಮ್ ಉಂಟಾಗಿರುವ ಕಾರಣ ಶಾಲಾ ಮಕ್ಕಳು ಸಹಿತ ಕೆಲಸಕ್ಕೆ ಹೋಗುವವರು ಬಸ್ ನಲ್ಲಿ ಬಾಕಿಯಾದ ಘಟನೆ ನಡೆಯಿತು.
ಟ್ರಾಫಿಕ್ ಎಸ್.ಐ. ಟೀ ಶರ್ಟ್ ಹಾಗೂ ಚಡ್ಡಿ ಧರಿಸಿ ಹೆದ್ದಾರಿಯಲ್ಲಿ ಟ್ರಾಫಿಕ್ ಸಮಸ್ಯೆ ಕಿರಿಕಿರಿಯನ್ನು ಸರಿಮಾಡುವುದು ಕಂಡು ಬಂದಿದೆ.
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.