Kumaradhara: ಹೆದ್ದಾರಿಯಲ್ಲಿ ಬೃಹತ್ ಹೊಂಡ ನಿರ್ಮಾಣ ಗ್ರಾಮಸ್ಥರಿಂದ ಹೊಂಡ-ಗುಂಡಿ ಅಳತೆ!
Team Udayavani, Sep 4, 2024, 12:48 PM IST
ಸುಬ್ರಹ್ಮಣ್ಯ: ಧರ್ಮಸ್ಥಳ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕುಮಾರಧಾರಾ ಬಳಿ ಹೆದ್ದಾರಿಯಲ್ಲಿ ಬೃಹತ್ ಹೊಂಡ ನಿರ್ಮಾ ಣಗೊಂಡಿದ್ದು, ಅಪಾಯವನ್ನು ಆಹ್ವಾನಿ ಸುವಂತಿದೆ. ಜತೆಗೆ ಸಂಚಾರಕ್ಕೂ ಕಷ್ಟವಾಗು ತ್ತಿದ್ದು, ಈ ಬಗ್ಗೆ ಅಧಿಕಾರಿಗಳು ಗಮನ ಹರಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತವಾಗಿದೆ.
ಹೆದ್ದಾರಿಯ ಹೊಂಡ- ಗುಂಡಿಗಳನ್ನು ದುರಸ್ತಿ ಮಾಡದೇ ಇರುವ ಬಗ್ಗೆ ಸಾರ್ವಜ ನಿಕರು ಆಕ್ರೋಶ ವ್ಯಕ್ತಪಡಿಸಿ, ಹೊಂಡಕ್ಕೆ ಅಳತೆ ಮಾಪಕ ಹಿಡಿದು ಈ ಹೊಂಡ ಎಷ್ಟು ಅಗಲ ಹಾಗೂ ಆಳ ಇದೆ ಎಂದು ಅಳೆಯುವ ಮೂಲಕ ವ್ಯಂಗ್ಯವಾಗಿ ಅಸಮಾಧಾನ ಹೊರಹಾಕಿ ಗಂಭೀರತೆಯನ್ನು ತೋರಿಸಿ, ಅಧಿಕಾರಿಗಳ ನಿರ್ಲಕ್ಷ್ಯ ಬಗ್ಗೆ ತಮ್ಮ ಅಸಮಾಧಾನವನ್ನು ತೋರಿಸಿದ್ದಾರೆ.
ಸೀತಾರಾಮ ಗೌಡ, ದಿನೇಶ್, ಉಮೇಶ್ ಮತ್ತಿತರರು ಹೊಂಡ ಅಳತೆ ಯನ್ನು ಪತ್ತೆ ಹಚ್ಚಿ ಆಕ್ರೋಶ ಹೊರ ಹಾಕಿದ್ದಾರೆ. ಇಲ್ಲಿನ ಹೊಂಡ-ಗುಂಡಿಗಳನ್ನು ತಪ್ಪಿಸಲು ಹೋದ ವೇಳೆ ಅಪಘಾತಗಳು, ನಿಯಂತ್ರಣ ತಪ್ಪಿ ಅವಾಂತರಗಳೂ ನಡೆ ಯುತ್ತಿದ್ದರೂ ಕ್ರಮಕೈಗೊಂಡಿಲ್ಲ ಎಂದು ಆರೋಪಿ ಸಲಾಗಿದೆ. ಕೂಡಲೇ ಹೆದ್ದಾರಿ ಹೊಂಡ-ಗುಂಡಿ ಮುಚ್ಚಿ ದುರಸ್ತಿ ಮಾಡುವಂತೆ ಆಗ್ರಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.