Udupi:ಚೌತಿಗೆ ಸ್ವತ್ಛತೆ ಸಂಕಲ್ಪ;ಉದಯವಾಣಿ, ನಗರಸಭೆ, ಕಾಪು ಪುರಸಭೆ,ಸಾಲಿಗ್ರಾಮ ಪ.ಪಂ.ಅಭಿಯಾನ


Team Udayavani, Sep 4, 2024, 4:22 PM IST

Udupi:ಚೌತಿಗೆ ಸ್ವತ್ಛತೆ ಸಂಕಲ್ಪ;ಉದಯವಾಣಿ, ನಗರಸಭೆ, ಕಾಪು ಪುರಸಭೆ,ಸಾಲಿಗ್ರಾಮ ಪ.ಪಂ.ಅಭಿಯಾನ

ಉಡುಪಿ: ಗಣೇಶನ ಆರಾಧನೆಗೆ ಎಲ್ಲೆಡೆ ಸಕಲ ಸಿದ್ಧತೆ ನಡೆಯುತ್ತಿದ್ದು, ಮನೆ, ಮನೆಗಳಲ್ಲಿ ಗೌರಿ ಗಣೇಶನ ಆರಾಧನೆ ಸಂಭ್ರಮ ಮೇಳೈಸಲಿದೆ. ಸಾರ್ವಜನಿಕವಾಗಿ ಗಣೇಶೋತ್ಸವ ಆಚರಿಸಲು ಎಲ್ಲೆಡೆ ತಯಾರಿ ನಡೆಯುತ್ತಿದೆ. ಗಣಪತಿ ಹಬ್ಬವನ್ನು ಆಚರಿಸುವಾಗ ಭಕ್ತಿಯ ಜತೆಗೆ ಸ್ವತ್ಛತೆಗೂ ಸಂಕಲ್ಪ ಮಾಡಬೇಕಿದೆ.

ಇತ್ತೀಚೆಗೆ ಸ್ವತ್ಛ ನಾಗರಪಂಚಮಿ ಅಭಿಯಾನ ಯಶಸ್ವಿಯಾಗಲು ಜನರು ಸಂಪೂರ್ಣ ಸಹಕಾರ ನೀಡಿದ್ದರು. ಅದೇ ಮಾದರಿಯಲ್ಲಿ ಸ್ವತ್ಛತೆ ಉದ್ದೇಶದಿಂದ ಗಣೇಶ ಚತುರ್ಥಿ ಅಭಿಯಾನವನ್ನು ಕೈಗೊಳ್ಳಲಾಗಿದೆ.

ಡೆಂಗ್ಯೂ, ಮಲೇರಿಯಾ, ಇನ್ನಿತರ ಸಾಂಕ್ರಾಮಿಕ ರೋಗ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಬ್ಬಹರಿದಿನಗಳ ವೇಳೆ ನಮ್ಮ ಪರಿಸರದಲ್ಲಿ ಸ್ವತ್ಛತೆ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಬೇಕಿದೆ. ಈ ನಿಟ್ಟಿನಲ್ಲಿ ಪ್ರಮುಖ ಸಾರ್ವಜನಿಕ ಗಣೇಶೋತ್ಸವ ಕೇಂದ್ರಗಳಲ್ಲಿ ಹಸಿ ಮತ್ತು ಒಣ ತ್ಯಾಜ್ಯ ಸಂಗ್ರಹಕ್ಕೆ ಸ್ಥಳೀಯಾಡಳಿತ ಸಂಸ್ಥೆ ವತಿಯಿಂದಲೇ ಸೂಕ್ತ ವ್ಯವಸ್ಥೆಯನ್ನು ಮಾಡಲಾಗುತ್ತಿದೆ. ಭಕ್ತರು ಪೂಜೆ ಸಲ್ಲಿಸಲು ಬರುವಾಗ ಸಾಧ್ಯವಾದಷ್ಟು ಪ್ಲಾಸ್ಟಿಕ್‌ ತೊಟ್ಟೆಗಳನ್ನು ತರದೆ, ಚೀಲ, ಪೇಪರುಗಳಲ್ಲಿ ಅಗತ್ಯ ವಸ್ತುಗಳನ್ನು ಕೊಂಡೊಯ್ಯಬಹುದು.

ಈಗಾಗಲೆ ಅನುಮತಿ ಕೋರಿ ಕೆಲವು ಸಾರ್ವಜನಿಕ ಗಣೇಶೋತ್ಸವ ಸಮಿತಿಗಳು ನಗರಸಭೆಗೆ ಅರ್ಜಿ ಸಲ್ಲಿಸಿವೆ. ಕೆಲವು ಗಣೇಶೋತ್ಸವ ಕೇಂದ್ರಗಳನ್ನು ನಗರಸಭೆಯಿಂದಲೇ ಗುರುತಿಸಲಾಗುತ್ತಿದ್ದು, ಉಳಿದವರು ಅಭಿಯಾನಕ್ಕಾಗಿ ಸಂಪರ್ಕಿಸಿ ನೋಂದಾಯಿಸಬಹುದು ಎಂದು ನಗರಸಭೆ ಪರಿಸರ ಎಂಜಿನಿಯರ್‌ ಸ್ನೇಹಾ ಮಾಹಿತಿ ತಿಳಿಸಿದ್ದಾರೆ. ಕಾಪು ಪುರಸಭೆ ಮತ್ತು ಸಾಲಿಗ್ರಾಮ ಪ.ಪಂ. ಆಡಳಿತಗಳೂ ಈ ಅಭಿಯಾನಕ್ಕೆ ಕೈಜೋಡಿಸಿವೆ.

ಜನರ ಸಂಪೂರ್ಣ ಸಹಕಾರದ ಅಗತ್ಯ
ನಗರಸಭೆ-ಉದಯವಾಣಿ ಸಹಭಾಗಿತ್ವದಲ್ಲಿ ನಡೆಯುತ್ತಿರುವ ಸ್ವತ್ಛತಾ ಅಭಿಯಾನಕ್ಕೆ ಜನರ ಸಂಪೂರ್ಣ ಸಹಕಾರದ ಅಗತ್ಯವಿದೆ. ಸಾರ್ವಜನಿಕ ಗಣೇಶೋತ್ವವ ಸಮಿತಿ ಆಚರಣೆ ಕೇಂದ್ರಗಳಿಗೆ ನಗರಸಭೆ ವತಿಯಿಂದ ಡಸ್ಟ್ ಬಿನ್‌, ಚೀಲಗಳನ್ನು ವ್ಯವಸ್ಥೆ ಮಾಡಿಕೊಟ್ಟು ವ್ಯವಸ್ಥಿತವಾಗಿ ತ್ಯಾಜ್ಯ ವಿಲೇವಾರಿ ಮಾಡಲಾಗುತ್ತದೆ. ಅನ್ನ ಸಂತರ್ಪಣೆ ದಿನ ಎಲ್ಲಿಯೂ ತ್ಯಾಜ್ಯ ಎಸೆಯಬಾರದು. ಆಹಾರ ತ್ಯಾಜ್ಯ ವಿಲೇವಾರಿಗೆ ನಗರಸಭೆ ವತಿಯಿಂದಲೇ ವಾಹನ ವ್ಯವಸ್ಥೆ ಮಾಡಲಾಗುತ್ತದೆ. ಈ ಕುರಿತು ನಗರಸಭೆ ಸಿಬಂದಿಗೆ ನಿರ್ದೇಶನ ನೀಡಲಾಗಿದೆ.
– ಪ್ರಭಾಕರ ಪೂಜಾರಿ, ಅಧ್ಯಕ್ಷರು, ರಾಯಪ್ಪ, ಪೌರಾಯುಕ್ತರು, ಉಡುಪಿ ನಗರಸಭೆ

ಜನಜಾಗೃತಿಯನ್ನೂ ರೂಪಿಸಲಿದ್ದೇವೆ
ನಾಗರಪಂಚಮಿ ಹಬ್ಬದಂದು ಸ್ವತ್ಛತೆಗೆ ಆದ್ಯತೆ ನೀಡಿದಂತೆ ಗಣೇಶೋತ್ಸವ ಸಂದರ್ಭದಲ್ಲಿಯೂ ಸ್ವತ್ಛ ಪುರಸಭೆಯಾಗಿ ರೂಪುಗೊಳ್ಳಲು ಆದ್ಯತೆ ನೀಡುತ್ತೇವೆ. ಸಮಿತಿಗಳು ಸಂಪರ್ಕಿಸಿದಲ್ಲಿ ಹಸಿ ಕಸ, ಒಣ ಕಸ ವಿಲೇವಾರಿಗೆ ಉಪಕರಣಗಳನ್ನು ಪೂರೈಸುವುದರ ಜತೆ ಜನಜಾಗೃತಿಯನ್ನೂ ರೂಪಿಸಲಿದ್ದೇವೆ.
– ಹರಿಣಾಕ್ಷಿ ದೇವಾಡಿಗ, ಅಧ್ಯಕ್ಷರು, ನಾಗರಾಜ್‌ ಸಿ., ಮುಖ್ಯಾಧಿಕಾರಿಗಳು, ಕಾಪು ಪುರಸಭೆ

ಪ.ಪಂ. ಕಚೇರಿಯನ್ನು ಸಂಪರ್ಕಿಸಬಹುದು
ಸಾಲಿಗ್ರಾಮ ಪಟ್ಟಣ ಪಂಚಾಯತ್‌ ಕೆಲವು ವರ್ಷಗಳಿಂದ ತ್ಯಾಜ್ಯ ವಿಲೇವಾರಿಗೆ ವಿಶೇಷ ಗಮನ ಕೊಡುತ್ತಿದೆ. ಈ ವರ್ಷವೂ ಗಣೇಶೋತ್ಸವ ಸಮಿತಿಗಳಿಗೆ ಡಸ್ಟ್‌ಬಿನ್‌, ಚೀಲಗಳನ್ನು ಪೂರೈಸುತ್ತೇವೆ. ಈ ಕುರಿತು ಸಮಿತಿಗಳು ಪ.ಪಂ. ಕಚೇರಿಯನ್ನು ಸಂಪರ್ಕಿಸಬಹುದು.
– ಸುಕನ್ಯಾ ಶೆಟ್ಟಿ, ಅಧ್ಯಕ್ಷರು, ಶಿವ ನಾಯ್ಕ, ಮುಖ್ಯಾಧಿಕಾರಿಗಳು, ಸಾಲಿಗ್ರಾಮ ಪ.ಪಂ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.