Udupi: ಹವಾಮಾನ ವೈಪರೀತ್ಯದ ನಡುವೆ ಸಾಂಕ್ರಾಮಿಕ ರೋಗ ಉಲ್ಬಣ; ಜಿಲ್ಲೆಯ ಹಲವೆಡೆ ಶೀತ-ಜ್ವರ!


Team Udayavani, Sep 4, 2024, 4:29 PM IST

13

ಉಡುಪಿ: ಹವಾಮಾನ ವೈಪರೀತ್ಯದ ನಡುವೆ ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಭೀತಿಯೂ ಉಲ್ಬಣವಾಗುತ್ತಿದೆ. ಮಳೆಗಾಲದಲ್ಲಿಯೂ 30ರಿಂದ 35 ಡಿಗ್ರಿ ಸೆಲ್ಸಿಯಸ್‌ನಷ್ಟು ಉಷ್ಣಾಂಶ ಇರುವುದು ಇದಕ್ಕೆಲ್ಲ ಕಾರಣ ಎನ್ನಲಾಗುತ್ತಿದೆ.
ಪದೇಪದೇ ಮಳೆ ಸುರಿಯು ತ್ತಿರುವುದು ಹಾಗೂ ಕೆಲವೊಮ್ಮೆ ವಿಪರೀತ ಬಿಸಿಲು ಲಕ್ಷಣಗಳಿಂದ ಜನರು ಹೈರಾಣಾಗುತ್ತಿದ್ದಾರೆ. ಉಷ್ಣಾಂಶದಲ್ಲಿ ಬಹಳಷ್ಟು ಏರುಪೇರಾಗುತ್ತಿರುವ ಕಾರಣ ವಿವಿಧ ರೋಗರುಜಿಗಳಿಗೆ ಕಾರಣ ಎನ್ನಲಾಗುತ್ತಿದೆ.

ವಿವಿಧ ಪ್ರಕಾರದ ಕಾಯಿಲೆ
ಜಿಲ್ಲೆಯಲ್ಲಿ ಕಂಡುಬರುತ್ತಿರುವ ನೆಗಡಿ, ಕೆಮ್ಮು, ಜ್ವರ ಲಕ್ಷಣಗಳು ಗುಣಮುಖವಾಗಲು ಕನಿಷ್ಠ ಎಂದರೂ ಒಂದು ವಾರಗಳಷ್ಟು ಸಮಯಾವಕಾಶ ತೆಗೆದುಕೊಳ್ಳುತ್ತಿದೆ. ಮುಖ್ಯವಾಗಿ ಡೆಂಗ್ಯೂ, ಇಲಿಜ್ವರ, ಎಚ್‌1ಎನ್‌1, ಅರಿಸಾರ ಭೇದಿಯಂತಹ ಲಕ್ಷಣಗಳು ಹೆಚ್ಚಿನವರಲ್ಲಿ ಕಂಡುಬರುತ್ತಿದೆ. ಜಿಲ್ಲಾಸ್ಪತ್ರೆ ಸಹಿತ ಸರಕಾರಿ ಆಸ್ಪತ್ರೆಗಳಲ್ಲಿ ಇದಕ್ಕಾಗಿ ಚಿಕಿತ್ಸೆ ನೀಡಲಾಗುತ್ತಿದೆಯಾದರೂ ಗುಣಮುಖ ವಿಳಂಬವಾಗುತ್ತಿರುವ ಕಾರಣ ರೋಗಿಗಳು ಆತಂಕಕ್ಕೆ ಈಡಾಗುತ್ತಿರುವ ಘಟನೆಗಳೂ ನಡೆಯುತ್ತಿವೆ.

ಶುಚಿತ್ವ ಕಾಪಾಡಿ
ಎಲ್ಲೆಂದರಲ್ಲಿ ನೀರು ಶೇಖರಣೆಯಾಗುವುದು, ಕೊಳಚೆ ನೀರು ನಿಲ್ಲುವುದು, ಸೊಳ್ಳೆಗಳು ಇರುವ ಸ್ಥಳ, ಕಾಡು, ಪೊದೆಗಳಿಗೆ ಹೋಗುವ ವೇಳೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯಗತ್ಯ. ಎಲ್ಲೆಂದರಲ್ಲಿ ರೋಗಾಣುಗಳು ಹಾಗೂ ಕ್ರಿಮಿಕೀಟಗಳಿರುವ ಕಾರಣ ಇದುವೇ ಸೋಂಕು ಲಕ್ಷಣಗಳನ್ನು ಉಂಟು ಮಾಡುವ ಸಾಧ್ಯತೆಗಳೂ ಹೆಚ್ಚಳವಾಗಿರುತ್ತದೆ. ಕೈ, ಕಾಲು, ತ್ವಚೆಯಲ್ಲಿ ಫ‌ಂಗಲ್‌ ಇನ್‌ಫೆಕ್ಷನ್‌ ರೀತಿ ಕಂಡುಬರುತ್ತಿದ್ದು, ಕೆಲವೊಮ್ಮ ನೋವು ಕೂಡ ಕಂಡುಬರುತ್ತದೆ. ಕೀವುಗಳು ಬಾರದಂತೆ ಎಚ್ಚರ ವಹಿಸುವ ಜತೆಗೆ ನೀರನ್ನು ಸ್ಪರ್ಷಿಸಿದ ಬಳಿಕ ಶುಭ್ರವಾದ ಬಟ್ಟೆಯಿಂದ ಕೈಕಾಲುಗಳನ್ನು ಒರೆಸಿಕೊಳ್ಳುವುದು ಉತ್ತಮ ಲಕ್ಷಣ ಎನ್ನುತ್ತಾರೆ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ನಾಗರತ್ನಾ.

ಮಲೇರಿಯಾ ಇಳಿಮುಖ
ಜಿಲ್ಲೆಯಲ್ಲಿ ಮಲೇರಿಯಾ ರೋಗಲಕ್ಷಣಗಳು ಇಳಿಮುಖಕಂಡಿವೆ. ಜನವರಿಯಿಂದ ಇದುವರೆಗೆ ಒಟ್ಟು 6 ಪ್ರಕರಣಗಳಷ್ಟೇ ದಾಖಲಾಗಿವೆ. ಆದರೆ ಉಳಿದ ಪ್ರಕರಣಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬಂದಿ ಕಾರ್ಯಪ್ರವೃತ್ತರಾಗಿದ್ದು, ಈಗಾಗಲೇ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ವಿವಿಧ ಕಾರ್ಯಾಚರಣೆಗಳನ್ನು ನಡೆಸುತ್ತಿದ್ದಾರೆ. ಮನೆಮನೆಭೇಟಿ ಸಹಿತ ವಿವಿಧ ರೀತಿಯ ಲಾರ್ವ ಸರ್ವೆಗಳನ್ನು ನಡೆಸಲಾಗುತ್ತಿದೆ. ಕೋವಿಡ್‌ ಪ್ರಕರಣಗಳು ಇಳಿಮುಖ ಕಂಡಿದ್ದು, ಕೇವಲ 4 ಪ್ರಕರಣಗಳು ದಾಖಲಾಗಿವೆ. ಒಟ್ಟಿನಲ್ಲಿ ಜಿಲ್ಲೆಯ ಎಲ್ಲ ಮನೆಮನೆಗಳ ಸದಸ್ಯರಲ್ಲಿಯೂ ಒಂದೊಂದು ಬಗೆಯ ರೋಗಲಕ್ಷಣಗಳು ಕಂಡುಬರುತ್ತಿವೆ.

ಚಿಕಿತ್ಸೆ ಪಡೆಯಿರಿ
ಸಾಂಕ್ರಾಮಿಕ ರೋಗ ತಡೆಗಟ್ಟುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯು ಈಗಾಗಲೇ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದೆ. ಪರಿಸರದ ಸ್ವತ್ಛತೆ ಕಾಪಾಡಿಕೊಳ್ಳುವುದು ಸಹಿತ ಸ್ವಯಂ ಜಾಗೃತಿಯನ್ನು ಪ್ರತಿಯೊಬ್ಬರೂ ರೂಢಿಸಿಕೊಳ್ಳಬೇಕು. ಹವಾಮಾನ ವೈಪರಿತ್ಯದಿಂದಲೂ ಕೆಲವು ಮಂದಿಗೆ ರೋಗರುಜಿನಗಳು ಹರಡುವ ಸಾಧ್ಯತೆಗಳಿದ್ದು, ಈ ಬಗ್ಗೆ ಎಚ್ಚರದಿಂದ ಇದ್ದರೆ ಉತ್ತಮ. ರೋಗ ಲಕ್ಷಣಗಳು ಕಂಡುಬಂದರೆ ಕೂಡಲೇ ವೈದ್ಯರನ್ನು ಭೇಟಿಯಾಗಿ ಚಿಕಿತ್ಸೆ ಪಡೆದುಕೊಳ್ಳಬೇಕು.
-ಡಾ| ಐ.ಪಿ.ಗಡಾದ್‌, ಜಿಲ್ಲಾ ಆರೋಗ್ಯಾಧಿಕಾರಿ

ಟಾಪ್ ನ್ಯೂಸ್

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Kapu-Kalahasti

Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ

DC-CHILD

Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.