Dharwad: ನಾನು ಸಿಎಂ ರೇಸ್ ನಲ್ಲಿ ಇಲ್ಲ… 5 ವರ್ಷ ಸಿದ್ದುನೇ ಸಿಎಂ: ದೇಶಪಾಂಡೆ ಯು ಟರ್ನ್
Team Udayavani, Sep 4, 2024, 6:34 PM IST
ಧಾರವಾಡ : ಮೊನ್ನೆಯಷ್ಟೇ ಅವಕಾಶ ಸಿಕ್ಕರೆ ನಾನು ಕೂಡ ಮುಖ್ಯಮಂತ್ರಿಯಾಗುತ್ತೇನೆ ಎಂದು ಹೇಳಿದ್ದ ಹಿರಿಯ ಕಾಂಗ್ರೆಸ್ ಮುಖಂಡ ಆರ್.ವಿ.ದೇಶಪಾಂಡೆ ಇದೀಗ, ಕಾಂಗ್ರೆಸ್ ಸರ್ಕಾರದ ಐದು ವರ್ಷಗಳ ಅವಧಿ ಮುಗಿಯುವ ವರೆಗೂ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರೇ ಮುಂದುವರೆಯುತ್ತಾರೆ ಎಂದು ಹೇಳಿದ್ದಾರೆ.
ಬುಧವಾರ ಇಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿ, ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿರಲಿದ್ದು, ಉತ್ತಮ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಕೂಡ ಖುಷಿಯಿಂದ ಸಾತ್ ನೀಡಿದ್ದಾರೆ. ನಾನು ಸಿಎಂ ರೇಸ್ನಲ್ಲಿ ಇಲ್ಲವೇ ಇಲ್ಲ. ನನ್ನ ರೇಸ್ ಈಗಿರುವಲ್ಲಿಗೆ ಮುಗಿದಿದೆ ಎಂದರು.
ನಾನು ಐವತ್ತು ವರ್ಷಗಳಿಂದ ರಾಜಕೀಯದಲ್ಲಿದ್ದೇನೆ. ನನ್ನ ತಲೆ ರಾಜಕೀಯದಲ್ಲೆ ಬೆಳ್ಳಗಾಗಿದೆ. ಮಾಧ್ಯಮಗಳು ಮತ್ತು ಪತ್ರಕರ್ತರು ನನ್ನನ್ನು ಎಷ್ಟೇ ಪ್ರಚೋದಿಸಿದರೂ ನಾನು ತಾಳ್ಮೆ ಕಳೆದುಕೊಳ್ಳುವುದಿಲ್ಲ. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿರಲಿದ್ದಾರೆ ಎಂದು ದೇಶಪಾಂಡೆ ಹೇಳಿದರು.
ಗ್ಯಾರಂಟಿಯಿಂದ ಜನರಿಗೆ ಅನುಕೂಲವಾಗಿದೆ. ಅನಾನೂಕೂಲವಾಗಿದೆ ಎಂದು ಹೇಳಿರುವ ಸ್ವಾಮೀಜಿಯೊಬ್ಬರ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡೋದಿಲ್ಲ. ಅಂಗನವಾಡಿ ಸಹಾಯಕರಿಗೆ ವೇತನ ಸಿಕ್ಕಬೇಕು. ಈ ಬಗ್ಗೆ ನಾನು ಸಿಎಂ ಜೊತೆ ಮಾತನಾಡುತ್ತೇನೆ.ಆದರೆ ಇದಕ್ಕೆ ಕೇಂದ್ರ ಸರ್ಕಾರ ಕೂಡ ಹಣ ಕೊಡಬೇಕು.
-ಆರ್.ವಿ.ದೇಶಪಾಂಡೆ,ಆ.ಸು.ಆಯೋಗದ ಅಧ್ಯಕ್ಷ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.