Vijayapura: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗೆ 5 ವರ್ಷ ಜೈಲು, 1 ಲಕ್ಷ ದಂಡ
Team Udayavani, Sep 4, 2024, 7:46 PM IST
ವಿಜಯಪುರ: 2019ರಲ್ಲಿ ಶ್ರೀಗಂಧದ ಮರವನ್ನು ಕಡಿದು ಸಾಗಿಸಿದ ಆರೋಪಿಯೋರ್ವನಿಗೆ ಐದು ವರ್ಷ ಜೈಲು ಮತ್ತು ಒಂದು ಲಕ್ಷ ರೂಪಾಯಿ ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ವಿಜಯಪುರ ತಾಲೂಕಿನ ಮಿಂಚನಾಳ ತಾಂಡಾದ ರವಿ ರಾಠೋಡ ಶಿಕ್ಷೆಗೆ ಗುರಿಯಾದ ಅಪರಾಧಿ.
ಇಂಡಿ ತಾಲೂಕಿನ ಸಾತಲಗಾಂವ ಕ್ರಾಸ್ ಸಮೀಪ ಮಿರಗಿ ಗ್ರಾಮದ ಜಮದಗ್ನಿ ಭೀಮರಾಯ ಹಳ್ಳಿ ಎಂಬುವರು ತಮ್ಮ ಜಮೀನಿನ ದಂಡೆಗೆ ಶ್ರೀಗಂಧದ ಗಿಡಗಳನ್ನು ಬೆಳೆದಿದ್ದರು. ಆರೋಪಿ ರವಿ ಕಳ್ಳತನದಿಂದ ಈ ಗಿಡಗಳನ್ನು ಕಡಿದು ತುಂಡು ಮಾಡಿ ಒಂದು ಚೀಲದಲ್ಲಿ ಹಾಕಿಕೊಂಡು ಬೈಕ್ನಲ್ಲಿ ಸಾಗುತ್ತಿದ್ದಾಗ ಆಗಿನ ಇಂಡಿ ಗ್ರಾಮೀಣ ಠಾಣೆಯ ಪಿಎಸ್ಐ ಎಸ್.ಶಿರಗುಪ್ಪಿ ಮತ್ತು ಸಿಬ್ಬಂದಿ ಕೈಗೆ ಸಿಕ್ಕಿ ಬಿದ್ದಿದ್ದ. ನಂತರದಲ್ಲಿ ಎಎಸ್ಐ ಡಿ.ಎನ್.ತಳವಾರ ಅವರು ಕರ್ನಾಟಕ ಅರಣ್ಯ ಕಾಯ್ದೆಯ ಕಲಂ 86, 87 ಮತ್ತು ಐಪಿಸಿ ಸೆಕ್ಷನ್ 379ರಡಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಧೀಶ ಶಿವಾಜಿ ಅನಂತ ನಾಲವಾಡೆ ಅವರು ಆರೋಪಿ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮಂಗಳವಾರ ಈ ತೀಪು ನೀಡಿದ್ದಾರೆ. ಸರ್ಕಾರದ ಪರವಾಗಿ ಪ್ರಧಾನ ಸರ್ಕಾರಿ ಅಭಿಯೋಜಕ ಎಸ್.ಹೆಚ್.ಹಕೀಮ ವಾದ ಮಂಡಿಸಿದ್ದರು.
ಇದನ್ನೂ ಓದಿ: Belagavi: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬಿಎ ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.