ಗದಗ-ಬೆಟಗೇರಿ ಅವಳಿ ನಗರದಲ್ಲಿ ಗೂಳಿಗಳ ಉಪಟಳ… ವಿದ್ಯಾರ್ಥಿನಿಗೆ ಗಾಯ
Team Udayavani, Sep 4, 2024, 9:22 PM IST
ಗದಗ: ಗದಗ-ಬೆಟಗೇರಿ ಅವಳಿ ನಗರದಲ್ಲಿ ಮಿತಿಮೀರಿದ ಬಿಡಾಡಿ ಗೂಳಿಗಳ ಉಪಟಳ ಮುಂದುವರಿದಿದೆ.
ಬೆಟಗೇರಿಯ ಮಾರ್ಕಂಡೇಶ್ವರ ದೇವಸ್ಥಾನದ ಬಳಿ ಕಾಲೇಜು ವಿದ್ಯಾರ್ಥಿನಿಯರ ಮೇಲೆ ಗೂಳಿ ದಾಳಿ ನಡೆಸಿದ್ದು, ಅದೃಷ್ಟವಶಾತ್ ಪಾರಾಗಿದ್ದಾರೆ.
ಮೂವರು ವಿದ್ಯಾರ್ಥಿನಿಯರು ನರಸಾಪೂರ ಬಳಿಯ ಡಿಪ್ಲೊಮಾ ಕಾಲೇಜಿನಿಂದ ಬೆಟಗೇರಿ ಕಡೆಗೆ ತೆರಳುತ್ತಿರುವ ಬಿಡಾಡಿ ಗೂಳಿಯೊಂದು ಏಕಾಏಕಿ ವಿದ್ಯಾರ್ಥಿನಿ ಮೇಲೆ ಎರಗಿದೆ. ವಿದ್ಯಾರ್ಥಿನಿ ಕೆಳಕ್ಕೆ ಬಿದ್ದು, ಗಾಯಗೊಂಡಿದ್ದಾಳೆ.
ಗೂಳಿ ವಿದ್ಯಾರ್ಥಿನಿಗೆ ಗುದ್ದಿದ ವಿಡಿಯೋ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಲ್ಲದೇ, ಎರಡು ಗೂಳಿಗಳು ರಸ್ತೆ ಮಧ್ಯದಲ್ಲಿಯೇ ಪರಸ್ಪರ ಕಾದಾಡುತ್ತ ಆತಂಕ ಸೃಷ್ಟಿಸಿದ ವಿಡಿಯೋ ಕೂಡ ವಾಹನ ಸವಾರರನ್ನು ಮೈಜುಮ್ಮೆನಿಸುವಂತೆ ಮಾಡಿದೆ.
ನಗರಸಭೆ ಈಗಾಗಲೇ ಬಿಡಾಡಿ ದನಗಳ ಸ್ಥಳಾಂತರ ಆರಂಭಿಸಿದ್ದರೂ, ಇನ್ನೂ ಕೂಡ ಬಿಡಾಡಿ ದನಗಳ ಹಾವಳಿ ನಿಂತಿಲ್ಲ. ಕೂಡಲೇ ಅವಳಿ ನಗರದಲ್ಲಿರುವ ಎಲ್ಲಾ ಬಿಡಾಡಿ ದನಗಳನ್ನೂ ಸ್ಥಳಾಂತರಿಸಬೇಕು ಎಂದು ಸ್ಥಳಿಯರು ಆಗ್ರಹಿಸಿದ್ದಾರೆ.
ಇದನ್ನೂ ಓದಿ: Bihar: ಸಂಗೀತ ಕಾರ್ಯಕ್ರಮದ ವೇಳೆ ಶೀಟ್ ಕುಸಿದು 100 ಮಂದಿಗೆ ಗಾಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.