Udupi ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಮಹತ್ತರ ತೀರ್ಪು

ಸುಸ್ತಿದಾರ ಅಡವಿರಿಸಿದ ಬಂಗಾರ ಹಿಂದೆ ಪಡೆಯಲು ಅರ್ಹನಲ್ಲ

Team Udayavani, Sep 5, 2024, 6:30 AM IST

Udupi ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಮಹತ್ತರ ತೀರ್ಪು

ಉಡುಪಿ: ಗ್ರಾಹಕನು ಸ್ಥಿರಾಸ್ತಿ ಅಡಮಾನ ಸಾಲ ಪಡೆದು ಸುಸ್ತಿದಾರನಾದಾಗ ಅದೇ ಸಂಸ್ಥೆಯಲ್ಲಿ ಅಡಮಾನವಿರಿಸಿದ ಬಂಗಾರದ ಸಾಲ ಸಂದಾಯ ಮಾಡಿದರೂ, ಅಡವಿರಿಸಿದ ಬಂಗಾರ ಹಿಂದೆ ಪಡೆಯಲು ಅರ್ಹನಲ್ಲ ಎಂದು ಉಡುಪಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಮಹತ್ತರ ತೀರ್ಪು ನೀಡಿದೆ.

ಉಡುಪಿಯ ಗುರುಮಾಚಿದೇವ ವಿವಿಧೋದ್ದೇಶ ಸಹಕಾರ ಸಂಘದ ಕೇಂದ್ರ ಕಚೇರಿಯ ಶಾಖೆಯಲ್ಲಿ 2015ರ ಎ. 30ರಂದು ಸಂಸ್ಥೆಯ ಗ್ರಾಹಕರೊಬ್ಬರು 25 ಲ.ರೂ.ಆಸ್ತಿ ಅಡಮಾನ ಸಾಲ ಪಡೆದಿದ್ದರು. ಈ ಸಾಲವು ಸುಸ್ತಿಯಾಗಿದ್ದು, ಸಂಸ್ಥೆಯು ಸಾಲ ವಸೂಲಾತಿಗಾಗಿ ಕ್ರಮ ಕೈಗೊಂಡಿತ್ತು. ಈ ಬಗ್ಗೆ ಸಹಕಾರ ಸಂಘಗಳ ಉಪನಿಬಂಧಕರ ನ್ಯಾಯಾಲಯದಲ್ಲಿ ಅಸಲು ಮತ್ತು ಬಡ್ಡಿ ಪಾವತಿಸಲು ಸಾಲಗಾರನ ವಿರುದ್ಧ ಆದೇಶವಾಗಿದ್ದು, ಈ ಪ್ರಕರಣವು ಅಮಲ್ಜಾರಿ ಪ್ರಕ್ರಿಯೆಯಲ್ಲಿದೆ.

ಇದೇ ಗ್ರಾಹಕರು 2018ರ ಮಾ. 24ರಂದು ಸುಮಾರು 630 ಗ್ರಾಂ. ಬಂಗಾರದ ಒಡವೆಗಳನ್ನು ಅಡಮಾನವಿರಿಸಿ 16 ಲ.ರೂ. ಸಾಲ ಪಡೆದಿದ್ದು, ಆ ಸಾಲವನ್ನು ಚುಕ್ತ ಮಾಡಿ ತಾನು ಅಡವಿರಿಸಿದ ಬಂಗಾರವನ್ನು ತನಗೆ ನೀಡಬೇಕೆಂದು ಕೋರಿಕೊಂಡರು. ಆದರೆ ಸಂಸ್ಥೆಯು ಆಸ್ತಿ ಅಡಮಾನ ಸಾಲ ಸಂಪೂರ್ಣ ಸಂದಾಯ ಮಾಡಿದರೆ ಮಾತ್ರ ಅಡವಿರಿಸಿದ ಬಂಗಾರವನ್ನು ಹಿಂಪಡೆಯಲು ಅವಕಾಶವಿದೆ ಎಂದು ಹೇಳಿ ಗ್ರಾಹಕನ ಬೇಡಿಕೆಯನ್ನು ತಿರಸ್ಕರಿಸಿತ್ತು. ಈ ಬಗ್ಗೆ ಗ್ರಾಹಕನು ಉಡುಪಿಯ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಮುಂದೆ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಅಧ್ಯಕ್ಷರ ಮೇಲೆ ದೂರು ದಾಖಲಿಸಿ, ತಾನು ಅಡಮಾನವಿಸಿರಿದ ಬಂಗಾರವನ್ನು ಹಿಂದಿರುಗಿಸಬೇಕು ಮತ್ತು ತನಗೆ 3 ಲ.ರೂ. ಮಾನಸಿಕ ವೇದನೆಯೊಂದಿಗೆ 10,000 ರೂ. ನೋಟಿಸಿನ ಖರ್ಚು ನೀಡಬೇಕೆಂದು ಕೇಳಿಕೊಂಡಿದ್ದರು.

ಉಭಯ ವಾದಗಳನ್ನು ಆಲಿಸಿದ ಆಯೋಗವು ದೂರುದಾರರು ಅಡವಿರಿಸಿದ ಚಿನ್ನಾಭರಣವನ್ನು ಸಂಸ್ಥೆಯಿಂದ ಹಿಂದೆ ಪಡೆಯಲು ಅರ್ಹರಲ್ಲವೆಂದು ಆ ದೂರನ್ನು ವಜಾಗೊಳಿಸಿ ಆದೇಶ ನೀಡಿದೆ. ಗುರುಮಾಚಿದೇವ ಸಂಸ್ಥೆಯ ಪರವಾಗಿ ಉಡುಪಿಯ ವಕೀಲ ಎಸ್‌. ಗುರುರಾಜ್‌ ಐತಾಳ್‌ ವಾದ ಮಂಡಿಸಿದ್ದರು.

ಸಂಸ್ಥೆಗೆ ಅಧಿಕಾರವಿದೆ: ಅಧ್ಯಕ್ಷರು
ಭಾರತೀಯ ಕರಾರು ಅಧಿನಿಯಮ ಕಲಂ 171ರಂತೆ ಯಾವುದೇ ಹಣಕಾಸು ಸಂಸ್ಥೆಯಲ್ಲಿ ಗ್ರಾಹಕನು ಸಾಲ ಪಡೆದು ಸುಸ್ತಿದಾರನಾದರೆ ಅಂತಹ ವ್ಯಕ್ತಿಗೆ ಸೇರಿದ ಚರ ಸೊತ್ತುಗಳನ್ನು ಕಾನೂನು ರೀತಿಯಲ್ಲಿ ಮುಟ್ಟಗೋಲು ಹಾಕಲು ಸಾಲ ನೀಡಿದ ಸಂಸ್ಥೆಗೆ ಅಧಿಕಾರವಿದೆ ಎಂದು ವಕೀಲ ಹಾಗೂ ಗುರುಮಾಚಿದೇವ ವಿ.ಸ.ಸ ನಿ. ಅಧ್ಯಕ್ಷ ಎಚ್‌. ಆನಂದ ಮಡಿವಾಳ ತಿಳಿಸಿದ್ದಾರೆ.

ಟಾಪ್ ನ್ಯೂಸ್

DC-CHILD

Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ

Suside-Boy

Putturu: ವೃದ್ಧನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Court-Symbol

Kasaragodu: ಶಿಕ್ಷಕಿ ಆತ್ಮಹತ್ಯೆ: ಪತಿಗೆ 9 ವರ್ಷ, ಅತ್ತೆಗೆ 7 ವರ್ಷ ಕಠಿನ ಜೈಲು ಶಿಕ್ಷೆ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DC-CHILD

Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

ಉಡುಪಿ ಜಿಲ್ಲೆಯಲ್ಲಿ 11 ಕಾಲರಾ ಪ್ರಕರಣ ಪತ್ತೆ… ಎಚ್ಚರಿಕೆ ವಹಿಸುವಂತೆ ಡಿಸಿ ಸೂಚನೆ

ಉಡುಪಿ ಜಿಲ್ಲೆಯಲ್ಲಿ 11 ಕಾಲರಾ ಪ್ರಕರಣ ಪತ್ತೆ… ಎಚ್ಚರಿಕೆ ವಹಿಸುವಂತೆ ಡಿಸಿ ಸೂಚನೆ

POLICE-5

Udupi: ಮದ್ಯದ ನಶೆಯಲ್ಲಿ ವ್ಯಕ್ತಿ; ಅಸಹಾಯಕ ಮಗುವಿನ ರಕ್ಷಣೆ

Shirva: ಸಕಲ ಸರಕಾರಿ ಗೌರವಗಳೊಂದಿಗೆ ಪೊಲೀಸ್‌ ಅಧಿಕಾರಿ ನಿತ್ಯಾನಂದ ಶೆಟ್ಟಿ ಅಂತ್ಯಕ್ರಿಯೆ

Shirva: ಸಕಲ ಸರಕಾರಿ ಗೌರವಗಳೊಂದಿಗೆ ಪೊಲೀಸ್‌ ಅಧಿಕಾರಿ ನಿತ್ಯಾನಂದ ಶೆಟ್ಟಿ ಅಂತ್ಯಕ್ರಿಯೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

DC-CHILD

Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ

Suside-Boy

Putturu: ವೃದ್ಧನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Court-Symbol

Kasaragodu: ಶಿಕ್ಷಕಿ ಆತ್ಮಹತ್ಯೆ: ಪತಿಗೆ 9 ವರ್ಷ, ಅತ್ತೆಗೆ 7 ವರ್ಷ ಕಠಿನ ಜೈಲು ಶಿಕ್ಷೆ

Car-Palti

Sulya: ಎರಡು ಕಾರುಗಳು ಢಿಕ್ಕಿ; ನಿಯಂತ್ರಣ ತಪ್ಪಿ ಕಾರು ಪಲ್ಟಿ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.