Mangaluru ನಿಷೇಧಿತ ಮಾದಕ ವಸ್ತು ಎಂಡಿಎಂಎ ಸೇವನೆ, ಸಾಗಾಟ; ಓರ್ವನ ಬಂಧನ
Team Udayavani, Sep 4, 2024, 11:19 PM IST
ಮಂಗಳೂರು: ನಿಷೇಧಿತ ಮಾದಕ ವಸ್ತು ಎಂಡಿಎಂಎ ಸೇವಿಸುವ ಜತೆ ಸಾಗಾಟ ಮಾಡುತ್ತಿದ್ದ ಓರ್ವನನ್ನು 2.60 ಗ್ರಾಂ ಎಂಡಿಎಂಎ ಸಹಿತ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅಶೋಕನಗರದ ಕೋಡಿಕ್ಕಲ್ 2ನೇ ಕ್ರಾಸ್, ವಿವೇಕಾನಂದ ನಗರದ ಶಂಕರ ನಿಲಯ ನಿವಾಸಿ ಹಿಮಾನಿಷ್ (27) ಬಂಧಿತ ಆರೋಪಿ.
ಕಂಕನಾಡಿ ನಗರ ಠಾಣಾ ಪಿಎಸ್ಐ ಶಿವಕುಮಾರ್ ಹಾಗೂ ತಂಡ ಪಡೀಲ್ ಚೆಕ್ಪೋಸ್ಟ್ ಬಳಿ ಮಂಗಳವಾರ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಕಾರನ್ನು ತಡೆದು ನಿಲ್ಲಿಸಿ ಪರಿಶೀಲನೆ ನಡೆಸಿದಾಗ ಕಾರು ಚಾಲಕ ಆರೋಪಿ ಮಾದಕ ದ್ರವ್ಯ ಸೇವಿಸಿರುವುದು ತಿಳಿದುಬಂದಿತ್ತು. ಕಾರನ್ನು ಪರಿಶೀಲನೆ ನಡೆಸಿದ ವೇಳೆ ಮಾದಕ ವಸ್ತು ಪತ್ತೆಯಾಗಿದ್ದು, ಸುಮಾರು 2.60 ಗ್ರಾಂ ಮಾದಕ ವಸ್ತುವನ್ನು ವಶಕ್ಕೆ ಪಡೆಯಲಾಗಿದೆ.
ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾರ್ಗದರ್ಶನದಂತೆ ಡಿಸಿಪಿಗಳಾದ ಸಿದ್ಧಾರ್ಥ್ ಗೋಯಲ್, ದಿನೇಶ್ ಕುಮಾರ್ ನಿರ್ದೇಶನದಂತೆ ಎಸಿಪಿ ಧನ್ಯಾ ನಾಯಕ್ ನೇತೃತ್ವದಲ್ಲಿ ಕಂಕನಾಡಿ ನಗರ ಠಾಣಾ ನಿರೀಕ್ಷಕ ಟಿ.ಡಿ. ನಾಗರಾಜ್ ಸಾರಥ್ಯದಲ್ಲಿ ಮಾರ್ಗದರ್ಶನದಂತೆ ಪಿಎಸ್ಐಗಳಾದ ಶಿವಕುಮಾರ್, ಯೋಗೀಶ್ವರನ್, ಎಎಸ್ಐ ಅಶೋಕ್, ಸಿಬಂದಿಗಳಾದ ಜಯಾನಂದ್, ರಾಘವೇಂದ್ರ, ರಾಜೇಸಾಬ್ ಮುಲ್ಲಾ ಮತ್ತು ಗಂಗಾಧರ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!
Bajpe ಬಸ್ ನಿಲ್ದಾಣ ಕಟ್ಟಡ ಪೂರ್ಣ; 90 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ
Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.