Paralympic 2024: ಶಾಟ್‌ಪುಟ್‌ ಎಸೆತಗಾರ ಸಚಿನ್‌ ಖೀಲಾರಿ ಬೆಳ್ಳಿ ಗರಿ


Team Udayavani, Sep 4, 2024, 11:22 PM IST

SACHIN-KHILARI

ಪ್ಯಾರಿಸ್‌: ಪ್ಯಾರಿಸ್‌ ಪ್ಯಾರಾಲಿಂಪಿಕ್ಸ್‌ನಲ್ಲಿ ಬುಧವಾರ ವಿಶ್ವ ಚಾಂಪಿಯನ್‌ ಶಾಟ್‌ಪುಟ್‌ ಎಸೆತಗಾರ ಸಚಿನ್‌ ಸರ್ಜೆರಾವ್‌ ಖೀಲಾರಿ ಭಾರತಕ್ಕೆ ಮೊದಲ ಪದಕ ತಂದಿತ್ತರು. ಅವರು ಎಫ್46 ವಿಭಾಗದಲ್ಲಿ ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿಗೆ ಮುತ್ತಿಕ್ಕಿದರು.

34 ವರ್ಷದ ಸಚಿನ್‌ ಖೀಲಾರಿ ಅವರದು 16.32 ಮೀಟರ್‌ಗಳ ಸಾಧನೆ ಯಾಗಿತ್ತು. ಇದು ಏಷ್ಯನ್‌ ದಾಖಲೆ ಜತೆಗೆ ಅವರ ಜೀವನಶ್ರೇಷ್ಠ ನಿರ್ವ ಹಣೆಯೂ ಆಗಿತ್ತು. ಅವರು ದ್ವಿತೀಯ ಸುತ್ತಿನಲ್ಲೇ ಈ ದೂರ ದಾಖಲಿಸಿದರು. ಹಿಂದಿನ ಏಷ್ಯನ್‌ ದಾಖಲೆ 16.30 ಮೀ. ಆಗಿತ್ತು. ಇದನ್ನು ಸ್ವತಃ ಖೀಲಾರಿ ಅವರೇ 2023ರ ಕೋಬೆ ವಿಶ್ವ ಪ್ಯಾರಾ ಆ್ಯತ್ಲೆಟಿಕ್ಸ್‌ನಲ್ಲಿ ದಾಖಲಿಸಿದ್ದರು.

ಕೋಬೆಯಲ್ಲಿ ಬೆಳ್ಳಿ ಜಯಿಸಿದ್ದ ಕೆನಡಾದ ಗ್ರೆಗ್‌ ಸ್ಟೀವರ್ಟ್‌ ಇಲ್ಲಿ ಚಿನ್ನಕ್ಕೆ ಭಡ್ತಿ ಪಡೆದರು (16.38 ಮೀ.). ಕ್ರೊವೇಶಿಯಾದ ಲೂಕಾ ಬಾಕೋವಿಕ್‌ ಕಂಚು ಗೆದ್ದರು (16.27 ಮೀ.).

ಕನ್ನಡತಿ ಸಕೀನಾಗೆ ಸೋಲು
ಪವರ್‌ ಲಿಫ್ಟಿಂಗ್‌ನ 45 ಕೆಜಿ ವಿಭಾಗದಲ್ಲಿ ಸ್ಪರ್ಧಿಸಿದ್ದ ಕರ್ನಾಟಕದ ಸಕೀನಾ ಖಾತುನ್‌ ಸೋಲನು ಭವಿಸಿ ದರು. ಬುಧವಾರ ನಡೆದ ಫೈನಲ್‌ನಲ್ಲಿ 7ನೇ ಸ್ಥಾನಿಯಾದರು. ಸಕೀನಾ ಈ ಸ್ಪರ್ಧೆಯಲ್ಲಿ 86 ಕೆಜಿ ತೂಕ ಎತ್ತಿದರು. 123 ಕೆಜಿ ಸಾಧನೆಯೊಂದಿಗೆ ವಿಶ್ವ ದಾಖಲೆ ನಿರ್ಮಿಸಿದ ಚೀನದ ಗುವೋ ಚಿನ್ನ ಗೆದ್ದರು.
ಪುರುಷರ ಪ್ಯಾರಾ ಸೈಕ್ಲಿಂಗ್‌ ರೋಡ್‌ ಸಿ2 ವೈಯಕ್ತಿಕ ಟೈಮ್‌ ಟ್ರಯಲ್‌ನಲ್ಲಿ 11ನೇ ಸ್ಥಾನ ಪಡೆಯುವ ಮೂಲಕ ಶೇಖ್‌ ಅರ್ಷದ್‌ ನಿರಾಸೆ ಅನುಭವಿಸಿದರು. ಮಹಿಳೆಯರ ಸಿ1-3 ವೈಯಕ್ತಿಕ ಟೈಮ್‌ ಟ್ರಯಲ್‌ ವಿಭಾಗದಲ್ಲಿ ಜ್ಯೋತಿ ಗದೆರಿಯಾ 16ನೇ ಸ್ಥಾನ ಪಡೆದು ಹೊರಬಿದ್ದರು.

ಟಾಪ್ ನ್ಯೂಸ್

DC-CHILD

Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ

Suside-Boy

Putturu: ವೃದ್ಧನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Court-Symbol

Kasaragodu: ಶಿಕ್ಷಕಿ ಆತ್ಮಹತ್ಯೆ: ಪತಿಗೆ 9 ವರ್ಷ, ಅತ್ತೆಗೆ 7 ವರ್ಷ ಕಠಿನ ಜೈಲು ಶಿಕ್ಷೆ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

Ranji Trophy: Samit Dravid in possible squad

Ranji Trophy: ಸಂಭಾವ್ಯ ತಂಡದಲ್ಲಿ ಸಮಿತ್‌ ದ್ರಾವಿಡ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

DC-CHILD

Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ

Suside-Boy

Putturu: ವೃದ್ಧನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Court-Symbol

Kasaragodu: ಶಿಕ್ಷಕಿ ಆತ್ಮಹತ್ಯೆ: ಪತಿಗೆ 9 ವರ್ಷ, ಅತ್ತೆಗೆ 7 ವರ್ಷ ಕಠಿನ ಜೈಲು ಶಿಕ್ಷೆ

Car-Palti

Sulya: ಎರಡು ಕಾರುಗಳು ಢಿಕ್ಕಿ; ನಿಯಂತ್ರಣ ತಪ್ಪಿ ಕಾರು ಪಲ್ಟಿ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.