Malpe: ಚಿನ್ನವನ್ನು ಕರಗಿಸಿ ವಂಚನೆ; ಪ್ರಕರಣ ದಾಖಲು


Team Udayavani, Sep 4, 2024, 11:35 PM IST

FRAUD-1

ಮಲ್ಪೆ: ಚಿನ್ನದ ಕೈ ಬಳೆಯ ಹೊಳಪನ್ನು ಹೆಚ್ಚಿಸುವುದಾಗಿ ಹೇಳಿ ವೃದ್ಧೆಗೆ ವಂಚಿಸಿದ ಘಟನೆ ಮಲ್ಪೆ ಬೈಲಕರೆ ಸಮೀಪದ ಮನೆಯೊಂದರಲ್ಲಿ ನಡೆದಿದೆ.

ಬೈಲಕರೆಯ ಕಲ್ಯಾಣಿ ಜತ್ತನ್‌ ಮನೆಯಲ್ಲಿ ಈ ಘಟನೆ ನಡೆದಿದೆ. ಪುರುಷರು ಮನೆಯಲ್ಲಿ ಇಲ್ಲದಿರುವುದನ್ನು ಖಚಿತಪಡಿಸಿಕೊಂಡು ಬ್ಯಾಗ್‌ ಹಾಕಿಕೊಂಡು ಬಂದಿದ್ದ ಯುವಕ ತಾನು ಪ್ರತಿಷ್ಠಿತ ಗೋಲ್ಡ್‌ ಸಂಸ್ಥೆಯಿಂದ ಬಂದಿದ್ದು, ಬೆಳ್ಳಿ-ಬಂಗಾರ ಸಹಿತ ಹಲವು ವಸ್ತುಗಳನ್ನು ಸ್ವಚ್ಛಗೊಳಿಸಿ ಹೊಳಪು ನೀಡುವ ಪೌಡರ್‌ ಮಾರಾಟ ಮಾಡುವುದಾಗಿ ಕಲ್ಯಾಣಿ ಅವರಲ್ಲಿ ಹೇಳಿ ನಂಬಿಸಿದ್ದ. ಪಾಲಿಶ್‌ ಮಾಡುವ ಮಾದರಿ ತೋರಿಸುವುದಾಗಿ ಮೊದಲಿಗೆ ತುಳಸಿಕಟ್ಟೆಯಲ್ಲಿದ್ದ ದೀಪದ ಸ್ಟಾಂಡಿಗೆ ಪುಡಿಯೊಂದನ್ನು ತಿಕ್ಕಿ ಅದನ್ನು ಶುಭ್ರ ಮಾಡಿ ತೋರಿಸಿದ್ದಾನೆ.

ಬಳಿಕ ಆತ ಮಹಿಳೆಯ ಕೈಯಲ್ಲಿದ್ದ 3 ಪವನಿನ 2 ಚಿನ್ನದ ಬಳೆಗಳನ್ನು ನೋಡಿ ಹೊಳಪು ಮಾಡಿಕೊಡುವ ಬಗ್ಗೆ ನಯವಾದ ಮಾತುಗಳಿಂದ ನಂಬಿಸಿದ್ದಾನೆ. ಆತ ದ್ರಾವಣವಿದ್ದ ಪಾತ್ರೆಯೊಂದರಲ್ಲಿ ಚಿನ್ನವನ್ನು ಹಾಕಿ ಬೆಂಕಿಯಲ್ಲಿ ಕಾಯಿಸಿದ್ದಾನೆ. ಜತೆಗೆ ಮಹಿಳೆಯ ಕತ್ತಿನಲ್ಲಿದ್ದ ಸರವನ್ನು ಹೊಳಪು ಮಾಡಿಕೊಡುವುದಾಗಿ ಹೇಳಿದ. ಆದರೆ ಮಹಿಳೆ ಅದಕ್ಕೆ ಒಪ್ಪಲಿಲ್ಲ. ಬಳೆಯನ್ನು ಅನಂತರ ಪೇಪರ್‌ನಲ್ಲಿ ಕಟ್ಟಿ, 15 ನಿಮಿಷ ಬಿಟ್ಟು ತೆಗೆಯಲು ಹೇಳಿ ಮಹಿಳೆಯ ಕೈಗಿತ್ತ. ಇದಕ್ಕೆ ಶುಲ್ಕ ಇಲ್ಲ. ಇದು ನಮ್ಮ ಗೋಲ್ಡ್‌ ಸಂಸ್ಥೆಯ ಉಚಿತ ಕೊಡುಗೆ ಎಂದು ಹೇಳಿ ಆತ ಅಲ್ಲಿಂದ ಕಾಲ್ಕಿತ್ತಿದ್ದ. ಅನಂತರ ಕಲ್ಯಾಣಿ ಜತ್ತನ್‌ ಅವರು ಚಿನ್ನದ ಬಳೆಯನ್ನು ಬಿಡಿಸಿ ತೆಗೆದಾಗ ಕೆಲವು ಕಡೆ ಕರಗಿದ ಹಾಗೆ ಇತ್ತು. ತತ್‌ಕ್ಷಣ ಅವರು ತನ್ನ ಮಗ ಅರುಣ್‌ ಜತ್ತನ್‌ ಅವರಿಗೆ ಈ ಬಗ್ಗೆ ಮಾಹಿತಿ ನೀಡಿದರು. ವಂಚಕ ಚಿನ್ನದಂಶವನ್ನು ದ್ರವ ಮಾದರಿಯಲ್ಲಿ ಸಂಗ್ರಹಿಸಿ ಪಡೆದು ಪರಾರಿಯಾಗಿದ್ದ. ಮನೆಮಂದಿ ಪರಿಸರದವರೊಂದಿಗೆ ಸೇರಿ ಹುಡುಕಾಟ ನಡೆಸಿದರೂ ವಂಚಕನ ಸುಳಿವು ಸಿಕ್ಕಿಲ್ಲ.

ಚಿನ್ನದ ಸರ ಸೆಳೆದು ಪರಾರಿ
ಮಣಿಪಾಲ: ಮಣಿಪಾಲದ ಕಮಲಾ ಅವರು ಸಗ್ರಿನೋಳೆ ತಿರುಮಲ ಕೋಳಿ ಫಾರಂನ ಬಳಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಓರ್ವ ವ್ಯಕ್ತಿ ಅವರ ಕುತ್ತಿಗೆಗೆ ಕೈ ಹಾಕಿ 16 ಗ್ರಾಂ ತೂಕದ ಚಿನ್ನದ ಚೈನ್‌ ಅನ್ನು ಎಳೆದು ಸುಲಿಗೆ ಮಾಡಿಕೊಂಡು ಹೋಗಿದ್ದಾನೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Lokayukta

Kinnigoli: ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ,ಜೂನಿಯರ್‌ ಇಂಜಿನಿಯರ್‌ ಲೋಕಾಯಕ್ತ ಬಲೆಗೆ

1-tirupati-laddu

Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Lokayukta

Kinnigoli: ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ,ಜೂನಿಯರ್‌ ಇಂಜಿನಿಯರ್‌ ಲೋಕಾಯಕ್ತ ಬಲೆಗೆ

crime

Tipper ಢಿಕ್ಕಿ: ಎಂಬಿಬಿಎಸ್‌ ವಿದ್ಯಾರ್ಥಿ ಸಾವು

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1-tirupati-laddu

Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ

Untitled-1

Kasaragod ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.