Kolkata Doctor Case: ಪೊಲೀಸರಿಂದ ಪ್ರಕರಣ ಮುಚ್ಚಿ ಹಾಕಲು ಯತ್ನ… ಪೋಷಕರಿಂದ ಗಂಭೀರ ಆರೋಪ
Team Udayavani, Sep 5, 2024, 11:09 AM IST
ಕೋಲ್ಕತ್ತಾ: ಕಳೆದ ತಿಂಗಳು ಕೋಲ್ಕತ್ತಾದ ಆರ್ಜಿ ಕರ್ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳಾ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಿನಕಳೆದಂತೆ ಹೆಚ್ಚಿನ ಕಾವು ಪಡೆಯುತ್ತಿದೆ. ಆರೋಪಿಗಳಿಗೆ ಶಿಕ್ಷೆಯಾಗಬೇಕೆಂದು ಆಗ್ರಹಿಸಿ ಬಂಗಾಳದಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳು ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ. ಇದೇ ವೇಳೆ ಮಹಿಳಾ ವೈದ್ಯೆಯ ಕುಟುಂಬ ಕೋಲ್ಕತ್ತಾ ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದೆ.
ಪೋಷಕರ ಆರೋಪದಂತೆ ಪೊಲೀಸರ ಕ್ರಮದ ಕುರಿತು ನಮಗೆ ಮೊದಲಿನಿಂದಲೇ ಅನುಮಾನವಿತ್ತು ಅಲ್ಲದೆ ಮಗಳ ಹತ್ಯೆ ನಡೆದ ಬಳಿಕ ಮಗಳ ಅಂತ್ಯಸಂಸ್ಕಾರವನ್ನು ಪೊಲೀಸರು ತರಾತುರಿಯಲ್ಲಿ ನಡೆಸಿದ್ದರು ಜೊತೆಗೆ ಪ್ರಕರಣ ಮುಚ್ಚಿ ಹಾಕಲು ಪೊಲೀಸರು ನಮಗೆ ಲಂಚ ನೀಡಲು ಯತ್ನಿಸಿದ್ದರು ಆದರೆ ನಾವು ಅದನ್ನು ನಿರಾಕರಿಸಿದ್ದೆವು ಎಂದು ಆರೋಪಿಸಿದ್ದಾರೆ.
‘‘ಪೊಲೀಸರು ಮೊದಲಿನಿಂದಲೂ ವಿಷಯವನ್ನು ಹತ್ತಿಕ್ಕಲು ಯತ್ನಿಸಿದರು. ಮಗಳ ಶವವನ್ನು ನೋಡಲು ಕೂಡ ನಮಗೆ ಅವಕಾಶ ನೀಡದೆ ಪೊಲೀಸ್ ಠಾಣೆಯಲ್ಲಿಯೇ ಕುಳಿತು ಪೋಸ್ಟ್ಮಾರ್ಟಂಗಾಗಿ ಕಾಯುವಂತೆ ಮಾಡಿದ್ದಾರೆ.
ನಮ್ಮ ಮಗಳಿಗೆ ನ್ಯಾಯ ಸಿಗಬೇಕು ಅದಕ್ಕಾಗಿ ಜೀವ ಇರುವವರೆಗೂ ಹೋರಾಡಲು ಸಿದ್ದ, ದೇಶಾದ್ಯಂತ ಪ್ರತಿಭಟನೆಗಳೂ ನಡೆಯುತ್ತಿವೆ ಇದರ ಹಿಂದೆ ಯಾರೆಲ್ಲಾ ಇದ್ದಾರೆ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಲೇ ಬೇಕು ಎಂದು ಪೋಷಕರು ಆಗ್ರಹಿಸಿದ್ದಾರೆ.
ಆರೋಪಿ ಸಂಜಯ್ ರಾಯ್ ಗೆ ಸರ್ಕಾರಿ ಆಸ್ಪತ್ರೆಯ ಮೂಲೆ ಮೂಲೆಗೂ ಮುಕ್ತವಾಗಿ ತಿರುಗಾಡಲು ಹೇಗೆ ಅವಕಾಶ ನೀಡಲಾಯಿತು ಎಂಬ ಪ್ರಶ್ನೆಗಳು ಕೂಡ ಎದ್ದಿವೆ. ಅಷ್ಟುಮಾತ್ರವಲ್ಲದೆ ಆರೋಪಿಗಳು ಹಣಕ್ಕಾಗಿ ಅಕ್ರಮವಾಗಿ ರೋಗಿಗಳಿಗೆ ಆಸ್ಪತ್ರೆಯ ಬೆಡ್ ಮತ್ತು ಇತರ ಸೌಲಭ್ಯಗಳನ್ನು ನೀಡುತ್ತಿದ್ದರು ಎಂಬುದೂ ಕೆಲವು ವರದಿಗಳಲ್ಲಿ ಬೆಳಕಿಗೆ ಬಂದಿದೆ.
ಆಗಸ್ಟ್ ಎರಡನೇ ವಾರದಲ್ಲಿ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸುವಂತೆ ಕಲ್ಕತ್ತಾ ಹೈಕೋರ್ಟ್ ಆದೇಶ ನೀಡಿರುವುದು ಗಮನಾರ್ಹ. ಕಳೆದ ಸೋಮವಾರ, ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಡಾ.ಸಂದೀಪ್ ಘೋಷ್ ಅವರನ್ನು ಆಸ್ಪತ್ರೆಯಲ್ಲಿನ ಹಣಕಾಸಿನ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಸಿಬಿಐ ಬಂಧಿಸಿದೆ.
ಇದನ್ನೂ ಓದಿ: Narendra Modi: ಅಭಿವೃದ್ಧಿ ನೀತಿಗೆ ಬೆಂಬಲ, ವಿಸ್ತರಣ ವಾದಕ್ಕಲ್ಲ: ಪ್ರಧಾನಿ ಮೋದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ
Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್
ESI Hospital: ಬೆಳ್ಳಂಬೆಳಗ್ಗೆ ಇಎಸ್ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
MUST WATCH
ಹೊಸ ಸೇರ್ಪಡೆ
Explainer: FBI ವಾಂಟೆಡ್ ಲಿಸ್ಟ್ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್ ಯಾದವ್?
Katpadi: ತ್ಯಾಜ್ಯ ಗುಂಡಿಯಾಗುತ್ತಿದೆ ಕುರ್ಕಾಲು ಮದಗ
Belagavi: ಸುವರ್ಣ ವಿಧಾನಸೌಧಕ್ಕೆ ಯು.ಟಿ.ಖಾದರ್, ಬಸವರಾಜ ಹೊರಟ್ಟಿ ಭೇಟಿ
Bengaluru: ರಾಜಧಾನಿಯ ಬೀದಿ ನಾಯಿಗಳಿಗೆ ಅಕ್ಕರೆಯ ತುತ್ತು
Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.