Bellary; ದರ್ಶನ್ ರನ್ನು ನೋಡಬೇಕು, ಅವರನ್ನು ಮದುವೆಯಾಗುತ್ತೇನೆಂದು ಪಟ್ಟು ಹಿಡಿದ ಮಹಿಳೆ
Team Udayavani, Sep 5, 2024, 11:39 AM IST
ಬಳ್ಳಾರಿ: ನಗರದ ಕೇಂದ್ರ ಕಾರಗೃಹದಲ್ಲಿ ಸೆರೆಯಾಗಿರುವ ಆರೋಪಿ ನಟ ದರ್ಶನ್ (Darshan) ನೋಡಬೇಕು, ಅವರ ಜತೆ ಒಂದೆರಡು ಮಾತನಾಡಬೇಕು ಎಂದು ಮಹಿಳಾ ಅಭಿಮಾನಿಯೊಬ್ಬರು ಪಟ್ಟು ಹಿಡಿದ ಘಟನೆ ಜೈಲಿನ ಎದುರು ನಡೆದಿದೆ.
ಕಲಬುರಗಿ ಮೂಲದ ಬೆಂಗಳೂರಿನ ಆರ್ ಆರ್ ನಗರ ನಿವಾಸಿ ಲಕ್ಷ್ಮೀ ಎನ್ನುವ ಮಹಿಳೆ ಬೆಂಗಳೂರಿನಿಂದ ಬಳ್ಳಾರಿ ಜೈಲಿಗೆ ಗುರುವಾರ ಬೆಳಗ್ಗೆ ಆಗಮಿಸಿ, ನಟ ದರ್ಶನ್ ಅವರನ್ನು ನೊಡಲೇ ಬೇಕು ಅಂತಾ ಹಠ ಹಿಡಿದು, ಜೈಲು ಸಿಬ್ಬಂದಿ ಜೊತೆ ವಾಗ್ವಾದಕ್ಕಿಳಿದಿದ್ದಾರೆ. ಈ ವೇಳೆ ಜೈಲಿನ ಭದ್ರತಾ ಸಿಬ್ಬಂದಿ ದರ್ಶನ್ ನೋಡಲು ಸಂಬಂಧಿಗಳಿಗೆ ಮಾತ್ರ ಅವಕಾಶವಿದೆ ಎಂದು ತಿಳಿಸುತ್ತಿದ್ದಂತೆ ನಾನು ದರ್ಶನ್ ಅವರನ್ನು ಮದುವೆ ಆಗುವುದಕ್ಕೂ ಸಿದ್ಧವಾಗಿ ಬಂದಿರುವೆ ಎಂದಿದ್ದಾಳೆ.
ವಿಜಯಲಕ್ಷ್ಮಿ ರೀತಿ ನಾನೂ ಮದುವೆಯಾಗುತ್ತೇನೆ. ನನಗೆ ದರ್ಶನ್ ಅಂದರೆ ಇಷ್ಟ. ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ಹೋದರೂ ಅಲ್ಲೂ ಬಿಡಲಿಲ್ಲ. ಈಗ ಇಲ್ಲಿಗೆ ಬಂದಿರುವೆ. ನಟ ದರ್ಶನ್ ಅವರಿಗೆ ಹಣ್ಣು ಕೊಟ್ಟು ನೋಡಿ ಹೊಗುವೆ ಎಂದು ಪಟ್ಟು ಹಿಡಿದಿದ್ದ ಲಕ್ಷ್ಮೀ ಅವರನ್ನು ಕೊನೆಗೆ ಜೈಲಿನ ಸಿಬ್ಬಂದಿ ಮನವೊಲಿಸಿ ವಾಪಾಸ್ ಕಳುಹಿಸಿದ್ದಾರೆ.
ವಿಜಯಲಕ್ಷ್ಮಿ ಭೇಟಿ
ರೇಣುಕಾಸ್ವಾಮಿ ಕೊಲೆ ಪ್ರಕರಣದ ಜಾರ್ಜ್ ಶೀಟ್ ಸಲ್ಲಿಕೆ ಬೆನ್ನಲ್ಲೇ ದರ್ಶನ್ ಭೇಟಿಗೆ ಇಂದು (ಸೆ.05) ಪತ್ನಿ ವಿಜಯಲಕ್ಷ್ಮಿ ಬರುತ್ತಿದ್ದಾರೆ. ಸಂಜೆ 4.30ಕ್ಕೆ ಬರುವುದಾಗಿ ಜೈಲು ಸಿಬ್ಬಂದಿಗೆ ಮನವಿ ಮಾದ್ದಾರೆ. ಸಂಜೆ 4.30 ರಿಂದ 5.30ರವರೆಗೆ ಸಂದರ್ಶಕರ ಭೇಟಿಯ ಸಮಯವಿರುತ್ತದೆ. ನಿಯಮಗಳ ಪ್ರಕಾರ ಒಬ್ಬ ಕೈದಿ ಆರ್ಧ ಗಂಟೆ ಸಂಬಂಧಿಕರ ಜೊತೆಗೆ ಮಾತನಾಡಬಹುದು. ಹೀಗಾಗಿ ಹೈಸೆಕ್ಯೂರಿಟಿ ಜೈಲಿನಿಂದ ಸಂದರ್ಶಕರ ಕೊಠಡಿಗೆ ದರ್ಶನ್ ಬರಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.