Hubballi: ಮಲಪ್ರಭಾ ಬಚಾವೋ ಆಂದೋಲನಕ್ಕೆ ಚಿಂತನೆ


Team Udayavani, Sep 5, 2024, 3:46 PM IST

Hubballi: ಮಲಪ್ರಭಾ ಬಚಾವೋ ಆಂದೋಲನಕ್ಕೆ ಚಿಂತನೆ

ಹುಬ್ಬಳ್ಳಿ: ನಾಲ್ಕು ದಶಕಗಳಿಂದ ಹೋರಾಟ ಮಾಡಿದರೂ ಹನಿ ನೀರು ಸಿಗದೆ ರಾಜಕೀಯ ಗಾಳಕ್ಕೆ ಸಿಲುಕಿ ಒದ್ದಾಡುತ್ತಿರುವ ಮಹದಾಯಿ, ಕಳಸಾ-ಬಂಡೂರಿ ನಾಲಾ ಯೋಜನೆಯ ಗೊಡವೆಯೇ ಬೇಡವೆಂದು, ಪರ್ಯಾಯವಾಗಿ ಮಲಪ್ರಭಾ ಬಚಾವೋ ಆಂದೋಲನಕ್ಕೆ ಗಂಭೀರ ಯತ್ನಗಳು ನಡೆದಿವೆ. ಎಲ್ಲವೂ ಅಂದುಕೊಂಡಂತಾದರೆ ಅಕ್ಟೋಬರ್‌ 2 ಗಾಂಧಿ ಜಯಂತಿ ದಿನದಂದು ಆಂದೋಲನ ಘೋಷಣೆ ಸಾಧ್ಯತೆ ಇದೆ.

ಬೆಳಗಾವಿ, ಧಾರವಾಡ, ಗದಗ, ಬಾಗಲಕೋಟೆ ಜಿಲ್ಲೆಗಳಲ್ಲಿ ಮಲಪ್ರಭಾ ಬಚಾವೋ ಆಂದೋಲನ ಮೊಳಗಿಸಲು ರೈತರು ನಿರ್ಧರಿಸಿದ್ದಾರೆ.

ಕಳಸಾ-ಬಂಡೂರಿ ನಾಲಾ ಕುಡಿಯುವ ನೀರಿನ ಯೋಜನೆಗೆ ಹೋರಾಟ ಮಾಡಿದ್ದು ರೈತರೇ ವಿನಃ ಅದರ ಫಲಾನಭವಿಗಳಲ್ಲ. ಇದರ ಬದಲು ಮಲಪ್ರಭಾ ನೀರು ನೀರಾವರಿಗೆ ಹೆಚ್ಚು ಬಳಕೆಗೆ ಹೋರಾಟ ಮಾಡೋಣ ಎನ್ನುವುದು ಹಲವು ರೈತರ ಅನಿಸಿಕೆಯಾಗಿದೆ.

ರಾಜಕೀಯ ಗಾಳಕ್ಕೆ ಸಿಲುಕಿದ ಮಹದಾಯಿ: ಮಹದಾಯಿ ಕುರಿತಾಗಿ 1976ರಿಂದಲೇ ಧ್ವನಿ ಮೊಳಗಿದ್ದರೆ, ಕಳಸಾ-ಬಂಡೂರಿ ನಾಲಾ ಯೋಜನೆ 2000 ಇಸ್ವಿಯಿಂದ ಇಂದು-ನಾಳೆ ಜಾರಿ ಎನ್ನುತ್ತಲೇ ಸಾಗಿದೆ. ಮಹದಾಯಿ, ಕಳಸಾ-ಬಂಡೂರಿ ನಾಲಾ ಯೋಜನೆ ವಿಚಾರದಲ್ಲಿ ಗೋವಾದ ನಿಲುವುಗಳೇ ಜಾರಿ-ಯಶಸ್ವಿಯಾಗುತ್ತಿವೆ. ಇಬ್ಬರು ಸಂಸದರು ಮೇಲುಗೈ ಸಾಧಿಸುತ್ತಿದ್ದರೆ, 28 ಸಂಸದರಿರುವ ರಾಜ್ಯ ಅನ್ಯಾಯ ಅನುಭವಿಸುತ್ತಿದೆ ಎಂಬ ಅಸಮಾಧಾನ, ಆಕ್ರೋಶ ರೈತರದ್ದಾಗಿದೆ.

ಮಹದಾಯಿ ನ್ಯಾಯಾಧಿಕರಣ ಕರ್ನಾಟಕಕ್ಕೆ 13.42 ಟಿಎಂಸಿ ಅಡಿಯಷ್ಟು ನೀರು ಹಂಚಿಕೆ ಮಾಡಿದ್ದು, ಇದರಲ್ಲಿ 8 ಟಿಎಂಸಿ ಅಡಿ ವಿದ್ಯುತ್‌ ಉತ್ಪಾದನೆಯದ್ದಾಗಿದೆ. ಉಳಿದ 5.42 ಟಿಎಂಸಿ ಅಡಿಯಷ್ಟು ನೀರು ಎಂದಿದ್ದರೂ, ವಾಸ್ತವವಾಗಿ ಬಳಕೆಗೆ ಸಿಗುವುದು ಕೇವಲ 3-4 ಟಿಎಂಸಿ ಅಡಿಯಷ್ಟು ಮಾತ್ರ. ಹುಬ್ಬಳ್ಳಿ-ಧಾರವಾಡ ಮಹಾನಗರ ಸೇರಿದಂತೆ ವಿವಿಧ ಕಡೆಗೆ ಕುಡಿಯುವ ನೀರಿನ ಉದ್ದೇಶದ ಹೆಸರಲ್ಲಿಯೇ 2000 ಇಸ್ವಿಯಲ್ಲಿ ಆರಂಭಗೊಂಡ ಕಳಸಾ-ಬಂಡೂರಿ ನಾಲಾ ಯೋಜನೆ ತ್ರಿಶಂಕು ಸ್ಥಿತಿಗೆ ತಲುಪಿದೆ. ಮಹದಾಯಿ, ಕಳಸಾ-ಬಂಡೂರಿ ನಾಲಾ ಯೋಜನೆಗಾಗಿ ರೈತರು ಧರಣಿ, ಪಾದಯಾತ್ರೆ, ಉಪವಾಸ, ರಸ್ತೆ -ರೈಲು ತಡೆ ಹೀಗೆ ವಿವಿಧ ಸ್ವರೂಪದ ಹೋರಾಟ ಮೂಲಕ ಲಾಠಿ-ಗುಂಡಿನೇಟು ತಿಂದಿದ್ದಾರೆ. ಜೈಲು ಸೇರಿದ್ದಾರೆ, ಕೇಸ್‌ಗಳಿಗಾಗಿ ಕೋರ್ಟ್‌ಗಳಿಗೆ ಅಲಿಯುತ್ತಿದ್ದಾರೆ, ಇಷ್ಟಾದರೂ ಹನಿ ನೀರು ಮಾತ್ರ ಬಂದಿಲ್ಲ.

ಕೃಷಿಗೆ ವರವಾದ ಮಲಪ್ರಭಾ ನದಿ ಹಾಗೂ ನೀರಾವರಿ ಆದ್ಯತೆಯೊಂದಿಗೆ ನಿರ್ಮಾಣಗೊಂಡ ಮಲಪ್ರಭಾ ಜಲಾಶಯ ನೀರು ಸಂರಕ್ಷಣೆ, ಕೃಷಿ ಬಳಕೆಗೆ ಒತ್ತು ನೀಡುವ ಆಂದೋಲನಕ್ಕೆ ಮುಂದಾಗೋಣ ಎಂಬುದು ರೈತರು ನಿರ್ಧಾರವಾಗಿದೆ

ರೂಪ ಪಡೆಯುತ್ತಿದೆ ಆಂದೋಲನ: ಮಲಪ್ರಭಾ ಜಲಾಶಯದ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕೆ ಸಂಗ್ರಹಿಸಲು, ಬಳಸಲು ನಮ್ಮ ವಿರೋಧವಿಲ್ಲ. ಆದರೆ ಕುಡಿಯುವ ನೀರಿನ ನೆಪದೊಂದಿಗೆ ಅಗತ್ಯಕ್ಕಿಂತ ಹೆಚ್ಚಿನ ನೀರು ಸಂಗ್ರಹ ಹಾಗೂ ನೀರಾವರಿಗೆ ಇಲ್ಲವಾಗಿಸಿ ಉದ್ಯಮಗಳಿಗೆ ನೀರು ನೀಡುವುದಕ್ಕೆ ನಮ್ಮ ವಿರೋಧವಿದೆ. ಮಲಪ್ರಭಾ ಬಚಾವೋ ಆಂದೋಲನ ಈ ವಿಚಾರವನ್ನೇ ಪ್ರಮುಖವಾಗಿಟ್ಟುಕೊಂಡು ಹೋರಾಟಕ್ಕೆ ಮುಂದಾಗುವ ಎಂಬ ಅನಿಸಿಕೆ ರೈತರದ್ದಾಗಿದೆ.

ಮಲಪ್ರಭಾ ಜಲಾಶಯ ವ್ಯಾಪ್ತಿಯಲ್ಲಿಯೇ ನಾಲ್ಕು ಜಿಲ್ಲೆಗಳ ರೈತರು ನೀರಾವರಿ ಶುಲ್ಕ ಭರಿಸುತ್ತಿದ್ದಾರೆ. ಆದರೆ ಕುಡಿಯುವ ನೀರು ನೆಪದಲ್ಲಿ 14-15 ಟಿಎಂಸಿ ಅಡಿಯಷ್ಟು ನೀರು ಸಂಗ್ರಹಿಸಿ ನೀರಾವರಿಗೆ ನೀರಿಲ್ಲವೆನ್ನುವುದನ್ನು ರೈತರು ಒಪ್ಪಲು ಸಾಧ್ಯವಿಲ್ಲ. ಮಲಪ್ರಭಾ ಜಲಾಶಯ ಸಂಪೂರ್ಣ ಕುಡಿಯುವ ನೀರಿನ ಉದ್ದೇಶವೆಂದು ಘೋಷಣೆ ಮಾಡಿ ಅದರ ವ್ಯಾಪ್ತಿಯ ಎಲ್ಲ ಕೃಷಿ ಭೂಮಿಯನ್ನು ನೀರಾವರಿ ರಹಿತ ಪ್ರದೇಶವೆಂದು ಘೋಷಿಸಲಿ, ಇಲ್ಲವೆ ನಮಗೆ ಸಮರ್ಪಕ ನೀರು ಕೊಡಲಿ ಎಂಬ ಹಕ್ಕೊತ್ತಾಯ ರೈತರದ್ದಾಗಿದೆ.

ಗಾಂಧಿ ಜಯಂತಿಗೆ ಘೋಷಣೆ ಸಾಧ್ಯತೆ
ನಾಲ್ಕು ಜಿಲ್ಲೆಗಳಲ್ಲಿ ಆಂದೋಲನ ಮೊಳಗಿಸಲು ನಿರ್ಧಾರ
ನೀರಾವರಿಗೆ ಮೀಸಲಿದ್ದ ನೀರಿನ ಬಳಕೆ ಹಕ್ಕು ಮಂಡನೆ

-ಅಮರೇಗೌಡ ಗೋನವಾರ

ಟಾಪ್ ನ್ಯೂಸ್

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

basavaraj

Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

mutalik (2)

B.C.Road ಏನು ಅಫ್ಘಾನಿಸ್ಥಾನ,ಪಾಕಿಸ್ಥಾನದಲ್ಲಿ ಇದೆಯಾ?: ಮುತಾಲಿಕ್ ಕಿಡಿ

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

ShreeKanth

Meet Friends: ಧಾರವಾಡದ ಹಳೆಯ ಗೆಳೆಯರ ಭೇಟಿಯಾದ ತೆಲುಗು ನಟ ಶ್ರೀಕಾಂತ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.