![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 5, 2024, 5:34 PM IST
ಚಿಕ್ಕೋಡಿ: ಪಂಚಮಸಾಲಿ ಲಿಂಗಾಯತ ಸಮಾಜಕ್ಕೆ 2ಎ ಮೀಸಲಾತಿಗೆ ಕಾನೂನು ಮೂಲಕ ಹೋರಾಟ ನಡೆಸಲು ಪಂಚಮಸಾಲಿ ಲಿಂಗಾಯತ ಹೋರಾಟ ಸಮಿತಿ ನಿರ್ಧರಿಸಿದ್ದು, ಹೀಗಾಗಿ ಸೆ.22ರಂದು ಬೆಳಗಾವಿಯಲ್ಲಿ ಬೃಹತ್ ಪಂಚಮಸಾಲಿ ಲಿಂಗಾಯತ ವಕೀಲರ ಸಮಾವೇಶ ಆಯೋಜಿಸಲಾಗಿದೆ ಎಂದು ಕೂಡಲಸಂಗಮದ ಶ್ರೀ ಬಸವ ಜಯ ಮೃತುಂಜ್ಯಯ ಸ್ವಾಮೀಜಿ ಹೇಳಿದರು.
ಇಲ್ಲಿನ ಪ್ರವಾಸಿ ಮಂದಿರದಲ್ಲಿ ಚಿಕ್ಕೋಡಿ ಪಂಚಮಸಾಲಿ ಲಿಂಗಾಯತ ವಕೀಲರ ಪೂರ್ವಭಾವಿ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗಾಗಿ ರಾಜ್ಯಾದ್ಯಂತ ಬೃಹತ್ ಹೋರಾಟದ ಬಳಿಕ ಬಿಜೆಪಿ ಸರ್ಕಾರದ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಂದನೆ ನೀಡಿದಷ್ಟು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಂದಿಸುತ್ತಿಲ್ಲ, ಅಧಿಕಾರ ಇರದಿದ್ದಾಗ ಗರ್ಜಿಸುವ ರಾಜಕಾರಣಿಗಳು ಅಧಿಕಾರ ಬಂದ ಮೇಲೆ ಯಾಕೆ ಮೌನ ವಹಿಸುತ್ತಾರೆ ಎಂಬುದು ಅರ್ಥವಾಗುತ್ತಿಲ್ಲ, ಅಧಿಕಾರ ಇಲ್ಲದಿದ್ದಾಗ ಹೋರಾಟಕ್ಕೆ ಬಲ ಕೊಡುತ್ತೀರಾ ಅಧಿಕಾರ ಇದ್ದಾಗಲು ಬಲ ಕೊಡಬೇಕೆಂದು ನಮ್ಮ ಆಗ್ರಹ ಎಂದರು.
ಶಾಸಕರು ಸರಕಾರದ ಮೇಲೆ ಒತ್ತಡ ಹಾಕಲಿ:
ರಾಜ್ಯದಲ್ಲಿ 20 ಮಂದಿ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಸೇರಿದ ಶಾಸಕರಿದ್ದಾರೆ. ಅಧೀವೇಶನದಲ್ಲಿ ಮೀಸಲಾತಿ ಕುರಿತು ಪ್ರಸ್ತಾಪಿಸಬೇಕೆಂದು ಹೇಳಿದಾಗ ಸ್ಪೀಕರ್ ಅವಕಾಶ ಕೊಡಲಿಲ್ಲ ಎನ್ನುವವರು ನೇರವಾಗಿ ಮುಖ್ಯಮಂತ್ರಿ ಜೊತೆ ಯಾಕೆ ಮಾತುಕತೆ ನಡೆಸಲಿಲ್ಲ, ಅಧಿಕಾರ ಶಾಶ್ವತವಲ್ಲ ಸಮಾಜ ಶಾಶ್ವತ ಎಂಬುದು ಅರಿತು ಶಾಸಕರು ಸರ್ಕಾರದ ಮೇಲೆ ಒತ್ತಡ ಹಾಕಬೇಕು ಎಂದರು.
ಕಾನೂನು ಮೂಲಕ ಒತ್ತಡಕ್ಕೆ ಸಮ್ಮೇಳನ:
ಕಾನೂನು ಮೂಲಕ ಒತ್ತಡ ಹಾಕಲು ಇಡೀ ಉತ್ತರ ಕರ್ನಾಟಕದ ವಕೀಲರ ಬೃಹತ್ ಸಮ್ಮೇಳನ ನಡೆಸಲು ನಿರ್ಧರಿಸಲಾಗಿದೆ. ಸಮ್ಮೇಳನದಲ್ಲಿ ಪಂಚಮಸಾಲಿ ಸಮಾಜದ ಕಾನೂನು ತಜ್ಞರ ಜೊತೆ ಸಮಾಲೋಚಿಸಿ ಮೀಸಲಾತಿ ಹೇಗೆ ಪಡೆಯಬೇಕೆಂದು ಹೋರಾಟದ ರೂಪುರೇಷೆ ಕುರಿತು ಸಮಾವೇಶದಲ್ಲಿ ನಿರ್ಣಯ ತೆಗೆದುಕೊಳ್ಳಲಾಗುವುದು. ಸೆ.22 ರಂದು ಹೆಚ್ಚಿನ ಸಂಖ್ಯೆಯಲ್ಲಿ ವಕೀಲರು ಬೆಳಗಾವಿಗೆ ಆಗಮೀಸಬೇಕೆಂದು ಸ್ವಾಮೀಜಿ ಕರೆ ನೀಡಿದರು.
ಈ ಸಂದರ್ಭದಲ್ಲಿ ಹಿರಿಯ ನ್ಯಾಯವಾದಿಗಳಾದ ಎಂ.ಆರ್.ಸಗರೆ, ಎಂ.ಐ.ಬೆಂಡವಾಡೆ, ಅಶೋಕ ಹರಗಾಪೂರೆ, ಸುಧಾಕರ ಖಾಡ, ವಿರೂಪಾಕ್ಷಿ ಈಟಿ ಮುಂತಾದವರಿದ್ದರು.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.