Video: ದಳಪತಿ ವಿಜಯ್ ʼಗೋಟ್ʼ ಸಿನಿಮಾ ನೋಡಲು ನಿಜವಾದ ಆಡನ್ನೇ ಥಿಯೇಟರ್ ಗೆ ಕರೆತಂದ ನಟ.!
Team Udayavani, Sep 5, 2024, 6:41 PM IST
ಚೆನ್ನೈ: ದಳಪತಿ ವಿಜಯ್ (Thalapathy Vijay) ಅವರ ʼದಿ ಗೋಟ್ʼ (The GOAT) ಸಿನಿಮಾ ಇಂದು (ಸೆ.5ರಂದು) ವರ್ಲ್ಡ್ ವೈಡ್ ಗ್ರ್ಯಾಂಡ್ ಆಗಿ ರಿಲೀಸ್ ಆಗಿದೆ.
ʼಗೋಟ್ʼ ನೋಡಲು ವಿಜಯ್ ಅಭಿಮಾನಿಗಳು ಮುಂಜಾನೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಟಿಕೆಟ್ ಖರೀದಿಸಿ ಸಿನಿಮಾ ನೋಡಿದ್ದಾರೆ. ಪಟಾಕಿ ಸಿಡಿಸಿ, ಶಿಳ್ಳೆ ಚಪ್ಪಾಳೆ ಹಾಕಿ ದಳಪತಿಗೆ ಅಭಿಮಾನಿಗಳು ಜೈಕಾರ ಹಾಕಿದ್ದಾರೆ.
ವಿಜಯ್ ಅವರ ಅಭಿಮಾನಿಯಾಗಿರುವ ವೈರಲ್ ಸ್ಟಾರ್, ನಟ ಕೂಲ್ ಸುರೇಶ್ ಅವರು ನಿಜವಾದ ಗೋಟ್ ಅಂದರೆ ಆಡನ್ನೇ ಥಿಯೇಟರ್ ಗೆ ತಂದಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವಿಜಯ್ ಅಭಿಮಾನಿಗಳ ಜತೆ ಕೂಲ್ ಸುರೇಶ್ ಆಡನ್ನು ಥಿಯೇಟರ್ಗೆ ತಂದಿದ್ದಾರೆ. ಅವರ ಸಂಭ್ರಮದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
View this post on Instagram
ನನಗೆ ಕೂಲ್ ಸುರೇಶ್ ಎಂದು ಹೆಸರು ಬರಲು ಕಾರಣನೇ ವಿಜಯ್ ಸರ್ ಅವರ ಸಿನಿಮಾವನ್ನು ಸಂಭ್ರಮಿಸಲು ನಾನು ಆಡನ್ನು ತಂದಿದ್ದೇನೆ. ಈ ಸಿನಿಮಾ ಸೂಪರ್ ಹಿಟ್ ಆಗುತ್ತದೆ ಎಂದು ಸುರೇಶ್ ಮಾಧ್ಯಮಗಳ ಮುಂದೆ ಹೇಳಿದ್ದಾರೆ.
ʼಗೋಟ್ʼ ಸಿನಿಮಾಕ್ಕೆ ಓಪನಿಂಗ್ ಡೇ ಪಾಸಿಟಿವ್ ರೆಸ್ಪಾನ್ಸ್ ಕೇಳಿ ಬಂದಿದ್ದು, ದಳಪತಿ ವಿಜಯ್ ಚಿತ್ರದಲ್ಲಿ ತಂದೆ ಮತ್ತು ಅವರ ಮಗನಾಗಿ ದ್ವಿಪಾತ್ರಗಳಲ್ಲಿ ನಟಿಸಿದ್ದಾರೆ. ಈ ಚಿತ್ರವು 2004ರ ಮಾಸ್ಕೋ ಮೆಟ್ರೋ ಬಾಂಬ್ ದಾಳಿಯನ್ನು ಆಧರಿಸಿದೆ ಎನ್ನಲಾಗಿದೆ. ವಿಜಯ್ ಅವರು ವಿಶೇಷ ಭಯೋತ್ಪಾದನಾ ನಿಗ್ರಹ ದಳದ (SATS) ಏಜೆಂಟ್ ಗಾಂಧಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಸಿನಿಮಾದಲ್ಲಿ ವಿಜಯ್ ಜತೆ ಪ್ರಶಾಂತ್, ಪ್ರಭುದೇವ, ಅಜ್ಮಲ್ ಅಮೀರ್, ಮೋಹನ್, ಜಯರಾಮ್, ಸ್ನೇಹಾ, ಲೈಲಾ, ಮೀನಾಕ್ಷಿ ಚೌಧರಿ, ವೈಭವ್, ಯೋಗಿ ಬಾಬು, ಪ್ರೇಮ್ಗಿ ಅಮರೇನ್ ಮತ್ತು ಯುಗೇಂದ್ರನ್ ಮುಂತಾದವರು ಕಾಣಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್ ಟಿಆರ್ ಸಿನಿಮಾ ವೀಕ್ಷಿಸಿದ ರೋಗಿ.!
Actress Sakunthala: ಹೃದಯಾಘಾತದಿಂದ ಬಹುಭಾಷಾ ನಟಿ ʼಸಿ.ಐ.ಡಿ. ಶಕುಂತಲಾʼ ನಿಧನ
Poonam Kaur: ಖ್ಯಾತ ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್ ವಿರುದ್ಧ ನಟಿ ಪೂನಂ ಗಂಭೀರ ಆರೋಪ
Raghu Thatha: ಓಟಿಟಿಯಲ್ಲಿ ರಿಲೀಸ್ ಆದ 24 ಗಂಟೆಯಲ್ಲೇ ಹೊಸ ದಾಖಲೆ ಬರೆದ ʼರಘು ತಾತʼ
Dhoom 4: ಬಾಲಿವುಡ್ ʼಧೂಮ್-4ʼ ನಲ್ಲಿ ಸೌತ್ ಸ್ಟಾರ್ ಸೂರ್ಯ ವಿಲನ್?
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.