Mangaluru ಸಂಜೀವಿನಿ ಮಾಸಿಕ ಸಂತೆ ಖಾಯಂ ಆಗಿಸಲು ಕ್ರಮ: ಜಿಲ್ಲಾ ಪಂಚಾಯತ್ ಸಿಇಒ ಆನಂದ್
Team Udayavani, Sep 6, 2024, 12:16 AM IST
ಮಂಗಳೂರು: ಸಂಜೀವಿನಿ ಮಾಸಿಕ ಸಂತೆಯು ಜನಸಾಮಾನ್ಯರನ್ನು ತಲುಪಲು ತಾಲೂಕುಗಳಲ್ಲಿ ಮುಂದಿನ ದಿನಗಳಲ್ಲಿ ಸೂಪರ್ ಮಾರ್ಕೆಟ್ನ ಪರಿಕಲ್ಪನೆಯತೆ ಅಂಗಡಿಗಳನ್ನು ನಿರ್ಮಿಸಲಾಗುವುದು ಎಂದು ಜಿಲ್ಲಾ ಪಂಚಾಯತ್ ಸಿಇಒ ಡಾ| ಆನಂದ್ ಕೆ. ಹೇಳಿದರು.
ಜಿ.ಪಂ., ಮಂಗಳೂರು ತಾಲೂಕು ಪಂಚಾಯತ್, ಕೌಶಲಾ ಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವ ನೋಪಾಯ ಇಲಾಖೆ ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವ ನೋಪಾಯ ಸಂವರ್ಧನಾ ಸಂಸ್ಥೆ ಇದರ ಸಹಯೋಗದೊಂದಿಗೆ ಮಂಗಳೂರು ತಾಲೂಕು ಪಂಚಾಯತ್ ಆವರಣದಲ್ಲಿ ಗುರುವಾರ ಜರಗಿದ ಸಂಜೀವಿನಿ ಮಾಸಿಕ ಸಂತೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸಂಜೀವಿನಿ ಒಕ್ಕೂಟದಿಂದ ಪ್ರತಿ ತಿಂಗಳು ನಡೆಯುವ ಮಾಸಿಕ ಸಂತೆ ತಾತ್ಕಾಲಿಕವಾಗಿ ರಲಿದೆ. ಖಾಯಂ ಆಗಿ ನಡೆಯಲು ಅಂಗಡಿ ನಿರ್ಮಿಸಲು ಮುಂದಿನ 2 ತಿಂಗಳೊಳಗೆ ಜನಸಂದಣಿ ಇರುವಂತಹ ಸೂಕ್ತ ಜಾಗಗಳನ್ನು ಗುರುತಿಸಲಾಗುವುದು. ಜಿಲ್ಲೆಯಲ್ಲಿರುವ ಸಂಜೀವಿನಿ ಒಕ್ಕೂಟದ ಎಲ್ಲ ಉತ್ಪನ್ನಗಳನ್ನು ಒಂದೇ ಕಡೆ ಮಾರಾಟಕ್ಕೆ ಲಭ್ಯವಾಗು ವಂತೆ ಮಾಡಲಾಗುತ್ತದೆ. ಜಿಲ್ಲೆಯಲ್ಲಿ ಸುಮಾರು 200ಕ್ಕಿಂತಲೂ ಅಧಿಕ ಉತ್ಪನ್ನಗಳನ್ನು ಸಂಜೀವಿನಿ ಒಕ್ಕೂಟದವರು ಉತ್ಪಾದಿಸುತ್ತಿದ್ದಾರೆ. ಅವುಗಳಿಗೆ ಮಾರುಕಟ್ಟೆಯ ಅಭಾವ ಕಾಡುತಿದ್ದು ಇತ್ತೀಚಿಗೆ ಮೀಶೋ ಆನ್ಲೈನ್ ಆ್ಯಪ್ ಮೂಲಕವೂ ಸಂಜೀವಿನಿ ಉತ್ಪನ್ನಗಳು ಮಾರಾಟವಾಗುತ್ತಿದ್ದು ಇನ್ನಷ್ಟು ಮಾರುಕಟ್ಟೆಗಳು ಇಂತಹ ಉತ್ಪನ್ನಗಳಿಗೆ ಸಿಗಬೇಕು ಎಂದರು.
ಉತ್ಪನ್ನವು ಮಾರುಕಟ್ಟೆಯಲ್ಲಿ ಗುರುತಿಸಿಕೊಳ್ಳುವಂತೆ ಮಾಡಲು ಅದರಲ್ಲಿ ವಿಭಿನ್ನ ತರಬೇಕು. ಉತ್ಪನ್ನದ ಗುಣಮಟ್ಟ ಮತ್ತು ಅದನ್ನು ಗ್ರಾಹಕರಿಗೆ ನೀಡುವಾಗ ಉತ್ತಮ ಪ್ಯಾಕೆಜಿಂಗ್ ಹೊಂದಿರಬೇಕು ಎಂದರು. ಸಂಜೀ ವಿನಿ ಒಕ್ಕೂಟದ ಸದಸ್ಯ ರಿಂದ ಅನೇಕ ಉತ್ಪನ್ನಗಳನ್ನು ಸ್ಥಳದಲ್ಲೇ ಮಾರಾಟ ಮಾಡಲಾಯಿತು. ತಾ.ಪಂ. ಕಾರ್ಯನಿರ್ವಹಣಾಧಿ ಕಾರಿ ಮಹೇಶ್ ಹೊಳ್ಳ, ಮಹೇಶ್, ಸಂಜೀವಿನಿ ತಾ. ಪಂ. ಮೂಲ್ಕಿ ಒಕ್ಕೂಟದ ಅಧ್ಯಕ್ಷೆ ಭಾನುಮತಿ ಶೆಟ್ಟಿ, ಮಂಗಳೂರು ತಾ.ಪಂ.ಸ. ನಿರ್ದೇಶಕ ಮಹೇಶ್ ಮತ್ತಿರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!
Bajpe ಬಸ್ ನಿಲ್ದಾಣ ಕಟ್ಟಡ ಪೂರ್ಣ; 90 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ
Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.