Mangaluru ಇಂದಿನಿಂದ ಅಂತಾರಾಷ್ಟ್ರೀಯ ಕರಾಟೆ ಪಂದ್ಯಾಟ “ಶೌರ್ಯ’
1500ಕ್ಕೂ ಅಧಿಕ ಕರಾಟೆಪಟುಗಳು ದೇಶ ವಿದೇಶದಿಂದ ಆಗಮನ
Team Udayavani, Sep 6, 2024, 12:24 AM IST
ಮಂಗಳೂರು: ಸೆಲ್ಫ್ ಡಿಫೆನ್ಸ್ ಸ್ಕೂಲ್ ಆಫ್ ಇಂಡಿಯನ್ ಕರಾಟೆ ಮಂಗಳೂರು ಡೋಜೋ ವತಿಯಿಂದ ಅಂತಾರಾಷ್ಟ್ರೀಯ ಮಟ್ಟದ “ಶೌರ್ಯ’ ಕರಾಟೆ ಚಾಂಪಿಯನ್ಶಿಪ್ ನಗರದ ಕುಲಶೇಖರ ಚರ್ಚ್ ಮೈದಾನದಲ್ಲಿ ಸೆ. 6, 7 ಮತ್ತು 8ರಂದು ನಡೆಯಲಿದ್ದು, ದೇಶ- ವಿದೇಶದ 1,500ಕ್ಕೂ ಅಧಿಕ ಮಂದಿ ದೇಶ-ವಿದೇಶದ ಕರಾಟೆ ಪಟುಗಳು ಭಾಗವಹಿಸಲಿದ್ದಾರೆ.
ಈ ಕುರಿತು ವಿಧಾನಸಭಾಧ್ಯಕ್ಷ ಹಾಗೂ ಕರಾಟೆ ಚಾಂಪಿಯನ್ಶಿಪ್ ಚೀಫ್-ಡಿ-ಮಿಶನ್ ಯು.ಟಿ. ಖಾದರ್ ಅವರು ಗುರುವಾರ ಪತ್ರಿಕಾ ಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಮಲೇಶ್ಯಾ, ಜೋರ್ಡಾನ್, ಜಪಾನ್, ಶ್ರೀಲಂಕಾ, ತಾಂಜಾನಿಯಾ ಮುಂತಾದ ದೇಶಗಳಿಂದ ತಂಡಗಳು ಭಾಗವಹಿಸುತ್ತಿವೆ. ಮುಖ್ಯ ತೀರ್ಪು ಗಾರರು ಕರಾಟೆಯ ಕೇಂದ್ರಸ್ಥಾನ ಜಪಾನ್ನಿಂದ ಆಗಮಿಸುತ್ತಿದ್ದಾರೆ.
ವಿಜೇತರಿಗೆ ಸರ್ಟಿಫಿಕೆಟ್ ಹಾಗೂ ಪದಕ ನೀಡಲಾಗುವುದು. ಸೆ.6ರಂದು 6ರಿಂದ 14 ವರ್ಷದೊಳಗಿನ ಎಲ್ಲ ವಿಧದ ಕಲರ್ ಬೆಲ್ಟ್ಗಳ ಕರಾಟೆ ಪಟುಗಳಿಗೆ, 7ರಂದು 14 ವರ್ಷ ಮೇಲ್ಪಟ್ಟವರಿಗೆ ಪಂದ್ಯಾಟ ನಡೆಯಲಿದೆ. 8ರಂದು ಕಪ್ಪುಬೆಲ್ಟ್ ನವರ ಪಂದ್ಯಾಟ ನಡೆಯಲಿವೆ.
ಒಟ್ಟಾರೆ 3 ಕೋ.ರೂ. ವೆಚ್ಚವಾಗ ಲಿದ್ದು, ಸರಕಾರದಿಂದ 1 ಕೋಟಿ ರೂ. ನೆರವು ಸಿಕ್ಕಿದೆ. ಭಾಗವಹಿಸುವ ಕರಾಟೆ ತಂಡಗಳಿಗೆ ಉಚಿತವಾಗಿ ವಸತಿ, ಊಟೋಪಹಾರ, ಪ್ರಯಾಣದ ವ್ಯವಸ್ಥೆ ಮಾಡಲಾಗಿದೆ. ರಾಷ್ಟ್ರೀಯ ಕರಾಟೆಪಟುಗಳಿಗೆ ವಿಮಾನ, ರೈಲ್ವೇ, ಬಸ್ ನಿಲ್ದಾಣಗಳಿಂದ ಕ್ರೀಡಾ ತಾಣದ ವರೆಗೆ ಉಚಿತ ಪ್ರಯಾಣ, ಊಟ ತಿಂಡಿಗಳಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.
ಪಂದ್ಯಾವಳಿಯ ಆರಂಭದ ಮೊದಲು ಕರಾವಳಿ ಕರ್ನಾಟಕದ ಬಗ್ಗೆ ಯಕ್ಷಗಾನ, ಜಾನಪದ ಗೀತೆ ಇತ್ಯಾದಿಗಳನ್ನು ದೃಶ್ಯಮಾಧ್ಯಮ ಮೂಲಕ ಪ್ರದರ್ಶಿಸಲಾಗುವುದು. ಪಂದ್ಯಾಟದ ಬಳಿಕ 2 ಗಂಟೆಯ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಳ್ವಾಸ್ ಸಾಂಸ್ಕೃತಿಕ ತಂಡ ನಡೆಸಿಕೊಡಲಿದೆ ಎಂದರು.
ಪಂದ್ಯವನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೆ.6 ರಂದು ಬೆಳಗ್ಗೆ ಉದ್ಘಾಟಿಸಲಿದ್ದಾರೆ. ಸ್ಪೀಕರ್ ಯು.ಟಿ.ಖಾದರ್, ಬಿಷಪ್ಡಾ| ಪೀಟರ್ ಪಾವ್ಲ್ ಸಲ್ಡಾನ್ಹಾ, ಡಾ|ಎ. ಸದಾನಂದ ಶೆಟ್ಟಿ, ಶಾಸಕರಾದ ವೇದ ವ್ಯಾಸ ಕಾಮತ್, ಎನ್.ಎ.ಹ್ಯಾರಿಸ್ ಮುಂತಾದವರು ಪಾಲ್ಗೊಳ್ಳುವರು.
ಸಂಘಟನ ಸಮಿತಿ ಅಧ್ಯಕ್ಷ ಸುರೇಂದ್ರ ಬಿ., ಪ್ರಮುಖರಾದ ರಾಜಗೋಪಾಲ್ ರೈ, ಕೆ.ತೇಜೋಮಯ, ವಂ| ಕ್ಲಿಫರ್ಡ್ ಫೆರ್ನಾಂಡಿಸ್, ರಾಯ್ ಕ್ಯಾಸ್ಟಲಿನೊ, ಸೂರಜ್ ಕುಮಾರ್ ಶೆಟ್ಟಿ, ಸುರೇಶ್ ಕುಮಾರ್ ಶೆಟ್ಟಿ, ಡಾ| ರಾಹುಲ್ ಟಿ.ಜಿ. ಉಪಸ್ಥಿತರಿದ್ದರು.
ಮೊದಲ ಬಾರಿ ಅಂತಾರಾಷ್ಟ್ರೀಯ ಕರಾಟೆ ಪಂದ್ಯಾವಳಿ
ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಕರಾಟೆ ಪಂದ್ಯಾವಳಿ ನಡೆಯುತ್ತಿದೆ ಎಂದು ಯು.ಟಿ.ಖಾದರ್ ತಿಳಿಸಿದರು.
ಕೋರ್ಡೆಲ್ ಹಾಲ್ನ ಒಳಭಾಗವನ್ನು ಮ್ಯಾಟ್ ಹಾಕಿ ಕರಾಟೆ ಪಂದ್ಯಾಟಗಳಿಗೆ ಸಜ್ಜುಗೊಳಿಸಲಾಗಿದೆ. 1,500ರಷ್ಟು ಕರಾಟೆ ಪಟುಗಳು, ಜತೆಗೆ ತೀರ್ಪುಗಾರರು, ಟೀಂ ಮ್ಯಾನೇಜರ್ಗಳು ಪಾಲ್ಗೊಳ್ಳುತ್ತಿದ್ದಾರೆ. ಏಕಕಾಲದಲ್ಲಿ 7ರಿಂದ 9 ಪಂದ್ಯಗಳನ್ನು ನಡೆಸಬಹುದಾಗಿದೆ. ವೈಯುಕ್ತಿಕ ಕಟಾ, ಟೀಂ ಕಟಾ, ಕುಮಿಟೆ ವಿಭಾಗಗಳಲ್ಲಿ ಪಂದ್ಯಾಟ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ಸುರೇಂದ್ರ ತಿಳಿಸಿದರು.
ಬರಲಿದ್ದಾರೆ ವಿಶ್ವ ಚಾಂಪಿಯನ್
ಜೋರ್ಡಾನ್ ತಂಡದಲ್ಲಿ ಮೂರು ಬಾರಿ ಸತತ ವಿಶ್ವ ಚಾಂಪಿಯನ್ ಆಗಿರುವ ಮೊಹಮ್ಮದ್ ಅಲ್ ಜಾಫರ್ ಪಾಲ್ಗೊಳ್ಳಲಿದ್ದಾರೆ. ಈಗಲೂ ಆನ್ಲೈನ್ ಮೂಲಕ ಕರಾಟೆಗೆ ನೋಂದಾಯಿಸಲು ಅವಕಾಶವಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!
Bajpe ಬಸ್ ನಿಲ್ದಾಣ ಕಟ್ಟಡ ಪೂರ್ಣ; 90 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ
Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.