Wage Workers: ತುಮಕೂರಿನ ಶುಂಠಿ ಕ್ಯಾಂಪ್ನಲ್ಲಿ ಜೀತ ಪದ್ಧತಿ ಜೀವಂತ!
Team Udayavani, Sep 6, 2024, 12:42 AM IST
ತುಮಕೂರು: ಜೀತಪದ್ಧತಿ ನಿರ್ಮೂಲನೆಗಾಗಿ ಸರಕಾರಗಳು ಹಲವು ಕಾನೂನು ಕ್ರಮಗಳನ್ನು ಕೈಗೊಂಡಿದ್ದರೂ ಹಲವೆಡೆ ಜೀತಪದ್ಧತಿ ಇನ್ನೂ ಜೀವಂತವಾಗಿದೆ ಎಂಬುದಕ್ಕೆ ಜಿಲ್ಲೆಯ ತಿಪಟೂರು ತಾಲೂಕಿನ ಘಟನೆಯೇ ಸಾಕ್ಷಿ.
ಹಾಲ್ಕುರಿಕೆ ಗ್ರಾಮದ ಬಳಿಯ ಶುಂಠಿ ಕ್ಯಾಂಪ್ನಲ್ಲಿ ಊಟ, ವಸತಿ ನೀಡಿ ಕೂಲಿ ಹಣ ಇಲ್ಲದೇ ಜೀತ ಹಾಗೂ ಒತ್ತೆಯಾಳು ರೀತಿಯಲ್ಲಿಯೇ ದುಡಿಯುತ್ತಿದ್ದ 30 ಕೂಲಿ ಕಾರ್ಮಿಕರನ್ನು ಪೊಲೀಸರು ರಕ್ಷಿಸಿದ್ದಾರೆ.
ಊರಿಗೆ ಕಳುಹಿಸದೇ ದುಡಿತ
ಹೊರ ರಾಜ್ಯ ಹಾಗೂ ರಾಜ್ಯದ ವಿವಿಧೆಡೆಯ 30 ಜನ ಕೂಲಿ ಕಾರ್ಮಿಕರನ್ನು ಈ ಶುಂಠಿ ಕ್ಯಾಂಪ್ನಲ್ಲಿ ಕೆಲಸಕ್ಕಾಗಿ ಸೈದರಹಳ್ಳಿ ಪುಟ್ಟರಾಜು ಎಂಬಾತ ಕರೆತಂದಿದ್ದ. ಆದರೆ ಅವರನ್ನು ಊರಿಗೆ ಕಳುಹಿಸದೇ ಕೂಲಿಯೂ ಕೊಡದೇ ದುಡಿಸಿಕೊಳ್ಳಲಾಗುತ್ತಿತ್ತು. ಕಾರ್ಮಿಕರು ಕೆಲಸ ಮಾಡದೇ ತಮ್ಮ ಊರಿಗೆ ಹೋಗಲು ಪ್ರಯತ್ನಿಸಿದರೆ ಕಾವಲುಗಾರರು ದೊಣ್ಣೆಗಳಿಂದ ಹಲ್ಲೆ ಮಾಡುತ್ತಿದ್ದರು.
ಇದೇ ಕಾರ್ಮಿಕರನ್ನು ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನಲ್ಲಿ ದುಡಿಸಿಕೊಳ್ಳಲಾಗಿತ್ತು. ಅಲ್ಲಿಂದ ಬೇರೆ ಬೇರೆ ಶುಂಠಿ ಕ್ಯಾಂಪ್ಗ್ಳಿಗೆ ಸಾಗಾಟ ಮಾಡುತ್ತಾರೆ ಎಂದು ಕೂಲಿಗಾಗಿ ಕರೆದುಕೊಂಡು ಬರುವ ಏಜೆಂಟರುಗಳ ವಿರುದ್ಧ ಕೂಲಿ ಕಾರ್ಮಿಕರು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು
Minister V. Somanna ಹಾಲಿನ ದರ ಏರಿಕೆ ಗ್ಯಾರಂಟಿಗೆ ಬಳಸಿದ್ರೆ ವಿರೋಧ
Tumkur ಕೊಟ್ಟಿಗೆಗೆ ನುಗ್ಗಿದ 5 ಚಿರತೆಗಳು: 32 ಕುರಿಗಳ ಸಾವು
BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ
Kunigal: ಹಿಂದೂ ಮುಸ್ಲಿಂ ಭಾವೈಕ್ಯತೆ, ಸಂಗಮಕ್ಕೆ ಸಾಕ್ಷಿಯಾದ ಈದ್ ಮಿಲಾದ್ ಮೆರವಣಿಗೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.