Arecanut ಬೆಳೆಗಾರರಿಗೆ ಪರಿಹಾರ: ಕರ್ನಾಟಕ, ಕೇರಳ ಮುಖ್ಯಮಂತ್ರಿಗಳಿಗೆ ಕ್ಯಾಂಪ್ಕೊ ಮನವಿ
Team Udayavani, Sep 6, 2024, 12:37 AM IST
ಮಂಗಳೂರು:ಬೇಸಗೆಯಲ್ಲಿ ಬಿಸಿಲ ಬೇಗೆ ಹಾಗೂ ಮುಂಗಾರಿನಲ್ಲಿ ಮಳೆಯ ಆರ್ಭಟದಿಂದಾಗಿ ಅಡಿಕೆ ಬೆಳೆಗಾರರು ತೀವ್ರ ಸಂಕಷ್ಟ ಅನುಭವಿಸಿದ್ದಾರೆ. ಅಡಿಕೆಯನ್ನು ಕಾಡಿದ ಕೊಳರೋಗ ರೈತರನ್ನು ಕಣ್ಣೀರಿನಲ್ಲಿ ಕೈತೊಳೆಯುವಂತೆ ಮಾಡಿದೆ.
ಹಾಗಾಗಿ ನಷ್ಟ ಅನುಭವಿಸಿದ ರೈತರಿಗೆ ಪರಿಹಾರ ಘೋಷಿಸಬೇಕು ಎಂದು ಕರ್ನಾಟಕ ಮತ್ತು ಕೇರಳ ಮುಖ್ಯಮಂತ್ರಿಗಳಿಗೆ ಕ್ಯಾಂಪ್ಕೊ ಅಧ್ಯಕ್ಷ ಎ.ಕಿಶೋರ್ ಕುಮಾರ್ ಕೊಡ್ಗಿ ಅವರು ಪತ್ರದ ಮೂಲಕ ಮನವಿ ಮಾಡಿದ್ದಾರೆ.
ರೈತರನ್ನು ಈ ದಯನೀಯ ಸ್ಥಿತಿಯಿಂದ ಪಾರು ಮಾಡಲು, ರಾಜ್ಯದಲ್ಲಿ ಅಡಿಕೆ ಬೆಳೆ ನಾಶದ ಬಗ್ಗೆ ತುರ್ತು ಸಮೀಕ್ಷೆ ನಡೆಸುವಂತೆ ಸಂಬಂಧಪಟ್ಟ ಇಲಾಖೆಗೆ ನಿರ್ದೇಶನ ನೀಡಬೇಕು ಹಾಗೂ ಅದರ ಪ್ರಕಾರ ಪರಿಹಾರ ಘೋಷಿಸಬೇಕು.
ಕ್ಯಾಂಪ್ಕೊ ಮತ್ತು ಇತರ ಸಹಕಾರ ಸಂಸ್ಥೆಗಳು ಸರ್ವ ಪ್ರಯತ್ನಗಳ ಮೂಲಕ ಕೆ.ಜಿ. ಗೆ 400 ರೂಪಾಯಿಗಳ ಆಸುಪಾಸಿನಲ್ಲಿ ಅಡಿಕೆಯ ದರವನ್ನು ಸ್ಥಿರೀಕರಿಸಿ ರೈತರ ಬೆಂಬಲಕ್ಕೆ ನಿಂತಿವೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
Mangaluru: ಮಾದಕವಸ್ತು ಸಹಿತ ಮೂವರ ಬಂಧನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.