Teacher’s Day; ದೇಶ ಮೊದಲು ಎಂಬ ಶಿಕ್ಷಣ ಅಗತ್ಯ: ಸಂಸದ ಕೋಟ ಶ್ರೀನಿವಾಸ ಪೂಜಾರಿ
Team Udayavani, Sep 6, 2024, 1:04 AM IST
ಉಡುಪಿ: ಜಾತಿ, ಧರ್ಮ, ವೈಯಕ್ತಿಕ ಬದುಕಿಗಿಂತ ದೇಶ ದೊಡ್ಡದು ಎಂಬ ಭಾವನೆ ಮಕ್ಕಳಲ್ಲಿ ಮೂಡಿಸುವಂಥ ಶಿಕ್ಷಣ ವ್ಯವಸ್ಥೆ ಅಗತ್ಯ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಜಿಲ್ಲಾಡಳಿತ, ಜಿ.ಪಂ., ಶಾಲಾ ಶಿಕ್ಷಣ ಇಲಾಖೆಯ ಡಿಡಿಪಿಇ ಹಾಗೂ ಬಿಇಒ ಕಚೇರಿ, ಅಂಬಲಪಾಡಿಯ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಸಹಯೋ ಗದಲ್ಲಿ ಗುರುವಾರ ಕಿದಿಯೂರು ಹೊಟೇಲ್ನಲ್ಲಿ ಜರಗಿದ ಶಿಕ್ಷಕರ ದಿನಾಚರಣೆಯಲ್ಲಿ ಅವರು ಮಾತ ನಾಡಿದರು.
ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ಡಾ| ಜಿ. ಶಂಕರ್ ಮಾತನಾಡಿ, ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಬದಲಾವಣೆ ಸಾಧ್ಯ. ಪ್ರತಿಯೊಬ್ಬರೂ ಶಿಕ್ಷಣ ಪಡೆಯುವಂತೆ ಆಗಬೇಕು ಎಂದು ಆಶಿಸಿದರು.
ಜಿಲ್ಲೆಯಲ್ಲಿ ಶೇ.95 ರಷ್ಟು ಶಿಕ್ಷಕರು ಪ್ರಾಮಾಣಿಕ, ಮನಃಪೂರ್ವಕವಾಗಿ ಸೇವೆ ಸಲ್ಲಿಸುತ್ತಿದ್ದು, ಕೆಲವರು ಸರಿ ಯಾಗಿ ಕಾರ್ಯ ನಿರ್ವಹಿಸದಿರುವುದು ಗಮನಕ್ಕೆ ಬಂದಿದೆ. ಎಸೆಸೆಲ್ಸಿಯಲ್ಲಿ ಶೇ.100ರಷ್ಟು ಸಾಧನೆಗೆ ಕೂಡಲೇ ಯೋಜನೆ ರೂಪಿಸಿ ಎಂದು ಡಿಸಿ ಡಾ| ಕೆ. ವಿದ್ಯಾಕುಮಾರಿ ಸೂಚಿಸಿದರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ಯಶ್ಪಾಲ್ ಸುವರ್ಣ, ಬುದ್ಧಿವಂತರ ಜಿಲ್ಲೆ ಎಂಬ ಸಾಧನೆಯನ್ನು ಉಳಿಸಿಕೊಳ್ಳಲು ಶಿಕ್ಷಕರ ಪರಿಶ್ರಮ ಆಗತ್ಯ ಎಂದರು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಜಿಪಂ ಸಿಇಒ ಪ್ರತೀಕ್ ಬಾಯಲ್ ಹಾಗೂ ಎಸ್.ಪಿ. ಡಾ| ಅರುಣ್ ಕೆ. ಶುಭ ಹಾರೈಸಿದರು. ಸಾಹಿತಿ ಮುನಿರಾಜ ರೆಂಜಾಳ ಉಪನ್ಯಾಸ ನೀಡಿದರು.
ಆಭರಣ ಜುವೆಲರಿ ವತಿಯಿಂದ ಶಿಕ್ಷಕರಿಗೆ ಲಕ್ಕಿ ಕೂಪನ್ ನೀಡಿ, ಕೊನೆಗೆ ಡ್ರಾ ನಡೆಸಿ 1 ಗ್ರಾಂ ಚಿನ್ನ, 50 ಗ್ರಾಂ ಬೆಳ್ಳಿ ಹಾಗೂ 25 ಗ್ರಾಂ ಬೆಳ್ಳಿಯ ಮೂರು ಬಹುಮಾನ ನೀಡಲಾಯಿತು.
ಜಿಲ್ಲಾ ಮಟ್ಟದ ಪ್ರಶಸ್ತಿ ಪುರಸ್ಕೃತರನ್ನು ಹಾಗೂ ವಲಯದ ನಿವೃತ್ತ ಶಿಕ್ಷಕರನ್ನು ಸಮ್ಮಾನಿಸಲಾಯಿತು. ಉದ್ಯಮಿ ಭುವ ನೇಂದ್ರ ಕಿದಿಯೂರು, ಡಯಟ್ ಪ್ರಾಂಶುಪಾಲ ಗೋವಿಂದ ಮಡಿವಾಳ, ಸಂಘ ಸಂಸ್ಥೆಯ ಪದಾಧಿಕಾರಿಗಳು, ಶಿಕ್ಷಕರು ಉಪಸ್ಥಿತರಿದ್ದರು. ಡಿಡಿಪಿಐ ಕೆ. ಗಣಪತಿ ಸ್ವಾಗತಿಸಿ, ಬಿಇಒ ಡಾ| ಯಲ್ಲಮ್ಮ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ
Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.