Education Department: ಪಿಯು ನಂತರ ಸಿಇಟಿಗೆ ಉಚಿತ ತರಬೇತಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ

ಸೆ. 20 ರೊಳಗಾಗಿ ವಾರವಿಡೀ ಮೊಟ್ಟೆ ವಿತರಣೆ ಜಾರಿ

Team Udayavani, Sep 6, 2024, 12:35 AM IST

Madhu

ಬೆಂಗಳೂರು: ಪದವಿಪೂರ್ವ ಶಿಕ್ಷಣದ ನಂತರ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಸರ್ಕಾರದಿಂದಲೇ ಉಚಿತವಾಗಿ ತರಬೇತಿ ಕೊಡಲಾಗುವುದು ಎಂದು ಘೋಷಿಸಿದ ಶಾಲಾ ಶಿಕ್ಷಣ ಮತ್ತು ಸಾರಕ್ಷತಾ ಇಲಾಖೆ ಸಚಿವ ಮಧು ಬಂಗಾರಪ್ಪ, ಸೆ.15 ಅಥವಾ 20 ರಿಂದ ಮಕ್ಕಳಿಗೆ ವಾರವಿಡಿ ಮೊಟ್ಟೆ ಕೊಡುವ ಕಾರ್ಯಕ್ರಮ ಜಾರಿಗೊಳಿಸಲಾಗುವುದು ಎಂದೂ ಪ್ರಕಟಿಸಿದರು.

ವಿಧಾನಸೌಧದ ಬ್ಯಾಂಕ್ವೆಟ್‌ ಸಭಾಂಗಣದಲ್ಲಿ ಗುರುವಾರ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ “ಅಕ್ಷರ ಆವಿಷ್ಕಾರ’ ಕಾರ್ಯಕ್ರಮದ ಮೂಲಕ 1008 ಎಲ್‌ಕೆಜಿ, ಯುಕೆಜಿ ತರಗತಿ ಆರಂಭಿಸಿದ್ದು, 40 ದಿನದಲ್ಲಿ 40 ಸಾವಿರ ಮಕ್ಕಳು ದಾಖಲಾಗಿದ್ದಾರೆ.

ಶೈಕ್ಷಣಿಕ ವರ್ಷದ ಮೊದಲ ದಿನವೇ 42,500 ಅತಿಥಿ ಶಿಕ್ಷಕರನ್ನು ನೇಮಿಸಿಕೊಂಡಿದ್ದೇವೆ, 12,500 ಶಾಲಾ ಶಿಕ್ಷಕರ ನೇಮಕ ಆಗಿದೆ. 9 ವರ್ಷದಿಂದ ನೇಮಕವಾಗದ ಅನುದಾನಿತ ಶಾಲೆಗಳಲ್ಲೂ 5 ವರ್ಷಕ್ಕೆ ಶಿಕ್ಷಕರ ನೇಮಕಾತಿ ಆಗಿದೆ. ಮುಂದಿನ ದಿನಗಳಲ್ಲಿ ಶಿಕ್ಷಕರು, ಉಪನ್ಯಾಸಕರ ಕೊರತೆ ನೀಗಿಸುತ್ತೇವೆ ಎಂದರು.

ಸಮಾನತೆ, ಬಂಧುತ್ವ, ಸಾಮಾಜಿಕ ನ್ಯಾಯ ಕೊಡುವ ಸಂವಿಧಾನದ ಪೀಠಿಕೆಯನ್ನು 1.06 ಕೋಟಿ ಮಕ್ಕಳು ಪ್ರತಿದಿನ ಓದುವಂತಾಗಿದೆ. ವಾರದಲ್ಲಿ 6 ದಿನವೂ ಹಾಲು, ರಾಗಿ ಮಾಲ್ಟ್, ಮಧ್ಯಾಹ್ನದ ಬಿಸಿಯೂಟ ಸಿಗುತ್ತಿದ್ದು, ವಾರದಲ್ಲಿ ಒಂದು ದಿನ ಸಿಗುತ್ತಿದ್ದ ಮೊಟ್ಟೆಯನ್ನು ವಾರದಲ್ಲಿ ಎರಡು ದಿನ ಕೊಡಲಾಗುತ್ತಿದೆ.

ಅಜೀಂ ಪ್ರೇಮ್‌ಜೀ ಪ್ರತಿಷ್ಠಾನದೊಂದಿಗೆ ಒಡಂಬಡಿಕೆ ಮಾಡಿಕೊಂಡಿರುವ ಪ್ರಕಾರ ಸೆ.15 ಅಥವಾ 20 ರಿಂದ 1500 ಕೋಟಿ ರೂ. ವೆಚ್ಚದಲ್ಲಿ 56 ಲಕ್ಷ ಮಕ್ಕಳಿಗೆ ವಾರವಿಡೀ ಮೊಟ್ಟೆ, ಚಿಕ್ಕಿ ಅಥವಾ ಬಾಳೆಹಣ್ಣು ಕೊಡುವ ಕಾರ್ಯ ಆರಂಭವಾಗಲಿದೆ. ಎಲ್ಲಕ್ಕಿಂತ ಮಿಗಿಲಾಗಿ ಪಿಯು ನಂತರ ಸಿಇಟಿ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗೆ ಸರ್ಕಾರದಿಂದ ಉಚಿತ ತರಬೇತಿ ಕೊಡುವ ಚಿಂತನೆಯೂ ಇದ್ದು, ಈ ಬಾರಿಯಿಂದಲೇ ಶುರು ಮಾಡುತ್ತೇವೆ ಎಂದು ಪ್ರಕಟಿಸಿದರು.

ಟಾಪ್ ನ್ಯೂಸ್

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

Lokayukta

Kinnigoli: ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ,ಜೂನಿಯರ್‌ ಇಂಜಿನಿಯರ್‌ ಲೋಕಾಯಕ್ತ ಬಲೆಗೆ

1-tirupati-laddu

Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

Lokayukta

Kinnigoli: ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ,ಜೂನಿಯರ್‌ ಇಂಜಿನಿಯರ್‌ ಲೋಕಾಯಕ್ತ ಬಲೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.