Gangavathi: ಪ್ಲಾಸ್ಟಿಕ್ ತಿಂದ ಕರುವಿಗೆ ಉಸಿರಾಟ ತೊಂದರೆ; ನೆರವಿಗೆ ಬಂದ ಕ್ರಿಕೆಟ್ ಆಟಗಾರರು

ಎಲ್ಲೆಂದರಲ್ಲಿ ಪ್ಲಾಸ್ಟಿಕ್ ಬಿಸಾಡದಂತೆ ಸಾರ್ವಜನಿಕರಲ್ಲಿ ಮನವಿ; ಪ್ಲಾಸ್ಟಿಕ್ ತಡೆಯುವಲ್ಲಿ ನಗರಸಭೆ ವಿಫಲ ಆಕ್ರೋಶ

Team Udayavani, Sep 6, 2024, 8:43 AM IST

2-gangavathi

ಗಂಗಾವತಿ: ಪ್ಲಾಸ್ಟಿಕ್ ಪೊಟ್ಟಣದಲ್ಲಿದ್ದ ಆಹಾರವನ್ನು ತಿಂದ ಆಕಳು ಕರುವೊಂದಕ್ಕೆ ಉಸಿರಾಟದ ತೊಂದರೆಯಾಗಿ ನರಳಾಡುತ್ತಿದ್ದಾಗ ಕ್ರಿಕೆಟ್ ಆಟಗಾರರು ಕರುವನ್ನು ಬದುಕಿಸಲು ನೆರವಾದ ಘಟನೆ ಗಂಗಾವತಿಯ ಜೂನಿಯರ್ ಕಾಲೇಜು ಮೈದಾನದಲ್ಲಿ ಸೆ.6ರ ಶುಕ್ರವಾರ ಬೆಳ್ಳಿಗ್ಗೆ ಕಂಡು ಬಂತು.

ಪಶು ವೈದ್ಯರನ್ನು ಕರೆಸಿ ಕರುವಿಗೆ ಚಿಕಿತ್ಸೆ ಕೊಡಿಸಿದ ನಂತರ ಹೆಚ್ಚಿನ ಆರೈಕೆಗಾಗಿ ಕನಕಗಿರಿ ರಸ್ತೆಯಲ್ಲಿರುವ ಗಣೇಶ ಗೋಶಾಲೆಗೆ ಕರುವನ್ನು ರವಾನೆ ಮಾಡಲಾಯಿತು.

ಪ್ಲಾಸ್ಟಿಕ್ ಜಾಗೃತಿ ಅಗತ್ಯ:

ನಗರದಲ್ಲಿ ಪ್ಲಾಸ್ಟಿಕ್ ಬಳಕೆ ಹೆಚ್ಚಾಗಿದ್ದು, ಸಾರ್ವಜನಿಕರು ತಾವು ಬಳಸುವ ಪ್ಲಾಸ್ಟಿಕ್ ಗಳನ್ನು ಎಲ್ಲೆಂದರಲ್ಲಿ ಬಿಸಾಡುವುದು ಸಾಮಾನ್ಯವಾಗಿದೆ. ನಗರಸಭೆಯವರು ಎಷ್ಟೇ ಜಾಗೃತಿ ಮೂಡಿಸಿದರೂ ಜನರು ಪ್ಲಾಸ್ಟಿಕ್ ಬಳಕೆಯನ್ನು ಬಿಡದಿರುವುದು ಶೋಚನೀಯವಾಗಿದೆ.

ನಗರದಲ್ಲಿ ಬೀದಿ ದನಗಳು ಹೆಚ್ಚಿದ್ದು ರಸ್ತೆಯಲ್ಲಿ ಸಿಕ್ಕಿದ ಪ್ಲಾಸ್ಟಿಕ್, ಪೇಪರ್, ಹಣ್ಣು-ಹಂಪಲುಗಳು ಸೇರಿ ಹಸಿ ಮತ್ತು ಒಣ ಕಸವನ್ನು ತಿನ್ನುತ್ತವೆ. ಇದರಿಂದ ಆಕಳುಗಳ ಬೆಳವಣಿಗೆ ಮತ್ತು ಆರೋಗ್ಯದಲ್ಲಿ ಸಮಸ್ಯೆಯಾಗುತ್ತಿದ್ದು, ಈ ಕುರಿತು ನಗರಸಭೆ ಮತ್ತು ಕೆಲ ಸಂಘ ಸಂಸ್ಥೆಯವರು ಜಾಗೃತಿ ಮೂಡಿಸುತ್ತಿದ್ದರೂ ಜನರು ಮೂಕ ಪ್ರಾಣಿಗಳು ಮತ್ತು ಪರಿಸರ ನಾಶದ ಕುರಿತು ತಲೆ ಕೆಡಿಸಿಕೊಳ್ಳುತ್ತಿಲ್ಲ.

ಪ್ರತಿನಿತ್ಯ ಆಕಳು, ಕರು ಸೇರಿ ಮೂಕ ಪ್ರಾಣಿಗಳು ಪ್ಲಾಸ್ಟಿಕ್ ಹಾಗೂ ಅನೈರ್ಮಲ್ಯ ಆಹಾರ ತಿಂದು ಗಾಯಗೊಳ್ಳುತ್ತಿದ್ದು ಅಥವಾ ಸಾವನ್ನಪ್ಪುತ್ತಿವೆ . ಪ್ಲಾಸ್ಟಿಕ್ ಹಾಗೂ ಅನೈರ್ಮಲ್ಯ ವಸ್ತುಗಳು, ಆಹಾರ ಸೇವನೆ ಮಾಡುವ ಬೀದಿ ದನ ಮತ್ತು ಮೂಕಪ್ರಾಣಿಗಳ ಕುರಿತು ನಗರಸಭೆ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ಪೊಲೀಸ್, ಪಶುವೈದ್ಯ, ಅರಣ್ಯ ಇಲಾಖೆಯವರು ನಗರದಲ್ಲಿ ಜನಜಾಗೃತಿ ಮೂಡಿಸಬೇಕು. ಬೀದಿದನಗಳನ್ನು ನಿಯಂತ್ರಿಸಿ ದನ ಮಾಲೀಕರ ವಿರುದ್ಧ ಕೇಸ್ ದಾಖಲಿಸಲು ಗೋ ಪ್ರಿಯರು ಮತ್ತು ಪ್ರಾಣಿ ದಯಾ ಸಂಘಟನೆಯವರು ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.

ಪ್ಲಾಸ್ಟಿಕ್ ಬಳಕೆ ಪರಿಸರದ ಮೇಲೆ, ದನ, ಕರು ಮತ್ತು ಇತರ ಮೂಕ ಪ್ರಾಣಿಗಳ ಮೇಲೆ ವ್ಯತಿರಿಕ್ತ ಪರಿಣಾಮವಾಗುತ್ತಿದ್ದು ನಗರ ಸಭೆಯವರು ಜನರಿಗೆ ಜಾಗೃತಿ ಮೂಡಿಸಬೇಕಿದೆ. ಜೊತೆಗೆ ಜನರು ಪ್ಲಾಸ್ಟಿಕ್ ಸೇರಿದಂತೆ ಹಸಿ, ಕಸ ಒಣ ಕಸವನ್ನು ಪ್ರತ್ಯೇಕ ಮಾಡಿ ನಗರಸಭೆಯವರು ಮನೆ ಬಳಿ ಕಸ ಸಂಗ್ರಹಿಸುವ ವಾಹನ ಬಂದಾಗ ವಾಹನದಲ್ಲಿ ಹಾಕಬೇಕು. ಬೀದಿಗಳು ಮತ್ತು ಚರಂಡಿಗಳಿಗೆ ಪ್ಲಾಸ್ಟಿಕ್ ಹಾಗೂ ಇತರ ಕಸವನ್ನು ಎಸೆಯಬಾರದು. ಇದರಿಂದ ಬೀದಿ ದನಗಳು ಪ್ಲಾಸ್ಟಿಕ್ ಮತ್ತು ಕಸವನ್ನು ತಿಂದು ಅನಾರೋಗ್ಯಗೊಂಡು ಸಾವನ್ನಪ್ಪುತ್ತವೆ. ಜನರು ಪ್ರಾಣಿಗಳ ಬಗ್ಗೆ ಜಾಗೃತಿ ವಹಿಸಬೇಕು. –ಚನ್ನಬಸವ  ಪಶುವೈದ್ಯ ಇಲಾಖೆಯ ಸಹಾಯಕ

ಟಾಪ್ ನ್ಯೂಸ್

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Shourya

Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ

Kapu-Kalahasti

Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ

DC-CHILD

Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppal; ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಸಹಿಸಲ್ಲ: ಸಚಿವ ಶಿವರಾಜ ತಂಗಡಗಿ

Koppal; ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಸಹಿಸಲ್ಲ: ಸಚಿವ ಶಿವರಾಜ ತಂಗಡಗಿ

ಕೊಪ್ಪಳ: ಅದಾಲತ್‌ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು

ಕೊಪ್ಪಳ: ಅದಾಲತ್‌ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು

Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ

Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ

ಗಂಗಾವತಿ: ಮೀಸಲು ಅರಣ್ಯದಲ್ಲಿ ಅವ್ಯಾಹತ ಮರಳು ದಂಧೆ – ಹದಗೆಟ್ಟ ರಸ್ತೆ

Darshan, ಸುದೀಪ್‌ ಹಾಡಿಗಾಗಿ ವಾಗ್ವಾದ, ಗಣೇಶ ಮೂರ್ತಿ ವಿಸರ್ಜನೆ ಮೊಟಕು

Darshan, ಸುದೀಪ್‌ ಹಾಡಿಗಾಗಿ ವಾಗ್ವಾದ, ಗಣೇಶ ಮೂರ್ತಿ ವಿಸರ್ಜನೆ ಮೊಟಕು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Shourya

Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.