Yograj Bhat: ಲೈಟ್ ಬಾಯ್ ಸಾವು- ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ FIR ದಾಖಲು
Team Udayavani, Sep 6, 2024, 9:40 AM IST
ಬೆಂಗಳೂರು: ಹಲವು ಹಿಟ್ ಸಿನಿಮಾಗಳ ನಿರ್ದೇಶಕ ಯೋಗರಾಜ್ ಭಟ್ (Yograj Bhat) ಅವರ ವಿರುದ್ಧ ಎಫ್ಐಆರ್ ದಾಖಲಾದ ಬಗ್ಗೆ ವರದಿಯಾಗಿದೆ.
ಮನದ ಕಡಲು ಸಿನಿಮಾದ ಚಿತ್ರೀಕರಣದ ವೇಳೆ ಸೆ.5ರ ಗುರುವಾರ 30 ಅಡಿ ಮೇಲಿನಿಂದ ಬಿದ್ದು ಲೈಟ್ ಬಾಯ್ ಸಾವನ್ನಪ್ಪಿದ ಹಿನ್ನೆಲೆ ಕನ್ನಡ ಚಿತ್ರರಂಗದ ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಬೆಂಗಳೂರು ಉತ್ತರ ಹೊರವಲಯದ ವಿಆರ್ಎಲ್ ಅರೆನಾ ಬಳಿ ಸಂಭವಿಸಿದ ಘಟನೆಯಲ್ಲಿ ತುಮಕೂರು ಜಿಲ್ಲೆಯ ಕೊರಟಗೆರೆ ಮೂಲದ ಶಿವರಾಜ್ (30) ಮೃತಪಟ್ಟಿದ್ದಾರೆ.
ಎರಡು ದಶಕಗಳಿಗೂ ಹೆಚ್ಚು ಕಾಲ ವೃತ್ತಿಜೀವನದಲ್ಲಿ ಮುಂಗಾರು ಮಳೆ, ಗಾಳಿಪಟ ದಂತಹ ಹಿಟ್ ಸಿನಿಮಾಗಳನ್ನು ನೀಡಿದ್ದ ಯೋಗರಾಜ್ ಭಟ್ ಅವರನ್ನು ಮಾದನಾಯಕನಹಳ್ಳಿ ಪೊಲೀಸರು ದಾಖಲಿಸಿರುವ ಎಫ್ಐಆರ್ನಲ್ಲಿ ಆರೋಪಿ ಸಂಖ್ಯೆ 3 ಎಂದು ನಮೂದಿಸಲಾಗಿದೆ. ಮ್ಯಾನೇಜರ್ ಸುರೇಶ್ ಅವರನ್ನು ಆರೋಪಿ ಸಂಖ್ಯೆ 1 ಎಂದು ಹೆಸರು ದಾಖಲಾಗಿಸಲಾಗಿದೆ.
ಚಿತ್ರದ ಚಿತ್ರೀಕರಣದ ವೇಳೆ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳದೆ ನಿರ್ಲಕ್ಷ್ಯದಿಂದ ಸಾವಿಗೆ ಕಾರಣರಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಲೈಟ್ ಬಾಯ್, ಮೃತ ಶಿವರಾಜ್ ಅವರು ತನ್ನ ಸಹೋದರನೊಂದಿಗೆ ನಗರದಲ್ಲಿ ವಾಸಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.