Agnipath Scheme: ಅಗ್ನಿಪಥ ಯೋಜನೆಯಲ್ಲಿ ಶೇ.50 ಯೋಧರ ಉಳಿಕೆಗೆ ಚಿಂತನೆ ?
ಅಗ್ನಿಪಥ ಪ್ರವೇಶ ವಯಸ್ಸು 23ಕ್ಕೆ ಏರಿಕೆಗೂ ಚಿಂತನೆ
Team Udayavani, Sep 6, 2024, 9:32 PM IST
ನವದೆಹಲಿ: ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳ ಆಕ್ರೋಶಕ್ಕೆ ಕಾರಣವಾಗಿರುವ “ಅಗ್ನಿಪಥ’ ಯೋಜನೆಯಲ್ಲಿ ಸರ್ಕಾರ ದೊಡ್ಡ ಮಟ್ಟದ ಬದಲಾವಣೆ ಮಾಡುವ ಸಾಧ್ಯತೆ ಕಡಿಮೆ ಇದೆ ಎನ್ನಲಾಗಿದೆ.
ಪೂರ್ವ ಲಡಾಖ್ನಲ್ಲಿ ಚೀನಾ ಜತೆಗೆ ಉಂಟಾಗಿರುವ ಗಡಿ ತಗಾದೆ ಹಿನ್ನೆಲೆಯಲ್ಲಿ “ಅಗ್ನಿಪಥ’ ಯೋಜನೆಯಲ್ಲಿ ನೇಮಕಗೊಂಡಿರುವ ಯೋಧರನ್ನು ಸೇನೆಯ 3 ವಿಭಾಗಗಳಲ್ಲಿ ಉಳಿಸಿಕೊಳ್ಳುವ ಪ್ರಮಾಣವನ್ನು ಹಾಲಿ ಶೇ.25ರಿಂದ ಶೇ.50ಕ್ಕೆ ಏರಿಕೆ ಮಾಡುವ ಪ್ರಸ್ತಾಪದ ಬಗ್ಗೆ ಕೇಂದ್ರ ಸರ್ಕಾರದ ಮಟ್ಟದಲ್ಲಿ ಚರ್ಚೆಗಳು ನಡೆದಿವೆ. ಸರ್ಕಾರದ ಮುಂದಿರುವ ಹೊಸ ಪ್ರಸ್ತಾಪದ ಅನ್ವಯ ಯೋಜನೆಗಾಗಿ ಆರಂಭಿಕ ವಯೋಮಿತಿಯನ್ನು ಈಗಿ ರುವ 17ರಿಂದ 23ನೇ ವರ್ಷಕ್ಕೆ ಪರಿಷ್ಕರಿಸಲಾಗುತ್ತದೆ. ಪರ್ವತ ಮತ್ತು ಕಡಿದಾದ ಗುಡ್ಡಗಾಡು ಪ್ರದೇಶಗಳಲ್ಲಿ ಹೋರಾಟ ಮತ್ತು ಕಾರ್ಯಾಚರಣೆ ನಡೆಸಲು ಯುವಕರ ಅಗತ್ಯವಿದೆ ಎಂದು ಹೆಸರು ಬಹಿರಂಗಪಡಿಸಲಿಚ್ಛಿಸದ ಸೇನಾಧಿಕಾರಿ ಹೇಳಿಕೊಂಡಿದ್ದಾರೆ.
“ಅಗ್ನಿಪಥ’ ಯೋಜನೆಯ ಅನ್ವಯ 17 ವರ್ಷದಿಂದ 21 ವರ್ಷ ವಯೋಮಿತಿಯವರೆಗೆ ಯುವಕರನ್ನು ಸೇನೆಯ 3 ವಿಭಾಗಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ. 4 ವರ್ಷಗಳ ಸೇವೆಯ ಬಳಿಕ ಶೇ.25 ಮಂದಿಯನ್ನು ಹೊರತುಪಡಿಸಿ ಉಳಿದವರನ್ನು ಕೈಬಿಡುವ ಬಗ್ಗೆ ಈಗಿನ ಪ್ರಸ್ತಾಪವಿದೆ.
ಇದನ್ನೂ ಓದಿ: ಪೆನ್ನಿಂದ ವಿಶ್ವದ ಅತಿ ಚಿಕ್ಕ ವ್ಯಾಕ್ಯೂಮ್ ಕ್ಲೀನರ್ ತಯಾರಿಸಿದ ಭಾರತೀಯ ವಿದ್ಯಾರ್ಥಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.