Mumbai: ಸೆಬಿ ಸದಸ್ಯೆಯಾಗಿದ್ದರೂ ಬಾಡಿಗೆ ಆದಾಯ ಪಡೆದ ಮಾಧವಿ… ಕಾಂಗ್ರೆಸ್ ಆರೋಪ
Team Udayavani, Sep 6, 2024, 9:45 PM IST
ಮುಂಬೈ: ಸೆಬಿ ಮುಖ್ಯಸ್ಥೆ ಮಾಧವಿ ಪುರಿ ಬುಚ್ ವಿರುದ್ಧ ಕಾಂಗ್ರೆಸ್ ಮತ್ತೊಂದು ಸ್ವಹಿತಾಸಕ್ತಿ ಸಂಘರ್ಷದ ಆರೋಪ ಮಾಡಿದೆ. ಹಲವು ಪ್ರಕರಣಗಳಲ್ಲಿ ಸೆಬಿಯಿಂದ ತನಿಖೆ ಎದುರಿಸುತ್ತಿರುವ ಕಂಪನಿಯೊಂದಕ್ಕೆ ಸೇರಿದ ಸಂಸ್ಥೆಯಿಂದ ಮಾಧವಿ ಅವರು 2.16 ಕೋಟಿ ರೂ. ಬಾಡಿಗೆ ಆದಾಯ ಪಡೆದಿದ್ದಾರೆಂದು ಕಾಂಗ್ರೆಸ್ ನಾಯಕ ಪವನ್ ಖೇರಾ ಆರೋಪಿಸಿದ್ದಾರೆ. ಇದು ಕೇವಲ ಸ್ವಹಿತಾಸಕ್ತಿ ಸಂಘರ್ಷ ಅಷ್ಟೇ, ಸಂಪೂರ್ಣವಾಗಿ ಭ್ರಷ್ಟಾಚಾರ ಪ್ರಕರಣ ಎಂದಿದ್ದಾರೆ.
ಏನು ಆರೋಪ?
ಸೆಬಿಯಿಂದ ವಿಚಾರಣೆ ಎದುರಿಸುತ್ತಿರುವ ವೋಕಾರ್ಡ್ ಕಂಪನಿಯ ಅಂಗ ಸಂಸ್ಥೆ ಕಾರ್ಲೋ ಇನ್ಫೋ ಸರ್ವಿಸಸ್ಗೆ ಮಾಧವಿ ಅವರು 2018-19ರಲ್ಲಿ ಮುಂಬೈನಲ್ಲಿರುವ ತಮ್ಮ ಆಸ್ತಿಯನ್ನು ಬಾಡಿಗೆ ನೀಡಿದ್ದರು. ತಿಂಗಳಿಗೆ 7 ಲಕ್ಷ ರೂ. ಬಾಡಿಗೆ ನಿಗದಿಯಾಗಿತ್ತು. ಇದೇ ಅವಧಿಯಲ್ಲಿ ಮಾಧವಿ ಸೆಬಿಯ ಪೂರ್ಣಾವಧಿ ಸದಸ್ಯರಾಗಿದ್ದರು ಎಂದು ಖೇರಾ ಹೇಳಿದ್ದಾರೆ.
ಇನ್ಸೈಡರ್ ಟ್ರೇಡಿಂಗ್ ಸೇರಿದಂತೆ ಅನೇಕ ಪ್ರಕರಣಗಳಲ್ಲಿ ಸೆಬಿಯಿಂದ ವಿಚಾರಣೆ ಎದುರಿಸುತ್ತಿರುವ ವೋಕಾರ್ಡ್r ಹಾಗೂ ಕಾರ್ಲೋ ಇನ್ಫೋ ಸರ್ವಿಸಸ್ನ ಪ್ರವರ್ತಕರು ಒಬ್ಬರೇ ಆಗಿದ್ದಾರೆ ಎಂದು ಆರೋಪಿಸಿದರು.
ಸೆಬಿ ಮುಖ್ಯಸ್ಥೆ ಪ್ರಶ್ನಿಸಲು ಪಿಎಸಿ ನಿರ್ಧಾರ:
ಹಲವು ಆರೋಪಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಸೆಬಿ ಮುಖ್ಯಸ್ಥೆ ಮಾಧವಿ ಅವರನ್ನು ಕರೆಯಿಸಿ ವಿಚಾರಣೆ ನಡೆಸಲಾಗುವುದು ಎಂದು ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ ಅಧ್ಯಕ್ಷ ಕೆ.ಸಿ.ವೇಣುಗೋಪಾಲ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.