ನ.17, 18: ಶತಮಾನೋತ್ತರ ರಜತ ಮಹೋತ್ಸವ; ಉಡುಪಿ ನ್ಯಾಯಾಲಯ, ವಕೀಲರ ಸಂಘ


Team Udayavani, Sep 6, 2024, 11:25 PM IST

Courtನ.17, 18: ಶತಮಾನೋತ್ತರ ರಜತ ಮಹೋತ್ಸವ; ಉಡುಪಿ ನ್ಯಾಯಾಲಯ, ವಕೀಲರ ಸಂಘ

ಉಡುಪಿ: ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘಕ್ಕೆ 125 ವರ್ಷಗಳು ತುಂಬಿದ್ದು, ಈ ಶತಮಾನೋತ್ತರ ರಜತ ಮಹೋತ್ಸವ ಸಮಾರಂಭವನ್ನು ನ.17 ಮತ್ತು 18ರಂದು ನ್ಯಾಯಾಲಯದ ಆವರಣದಲ್ಲಿ ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ಶತಮಾನೋತ್ತರ ರಜತ ಮಹೋತ್ಸವ ಸಮಿತಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಮತ್ತು ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್‌ ಪ್ರವೀಣ್‌ ಕುಮಾರ್‌ ತಿಳಿಸಿದರು.

ಅಜ್ಜರಕಾಡು ಪುರಭವನದಲ್ಲಿ ಶುಕ್ರವಾರ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಹೋತ್ಸವದ ಲೋಗೋ ಅನಾವರಣಗೊಳಿಸಿ ಅವರು ಮಾತನಾಡಿದರು.

ನ.17ರ ಬೆಳಗ್ಗೆ ಜೋಡುಕಟ್ಟೆಯಿಂದ ನ್ಯಾಯಾಲಯದ ಆವರಣದ ವರೆಗೆ ಮೆರವಣಿಗೆ ಇರಲಿದೆ. ಬೆಳಗ್ಗೆ 10ಕ್ಕೆ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಅರವಿಂದ ಕುಮಾರ್‌ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ.

ಆಂಧ್ರಪ್ರದೇಶದ ರಾಜ್ಯಪಾಲ ನ್ಯಾ| ಎಸ್‌.ಅಬ್ದುಲ್‌ ನಝೀರ್‌ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ಇ.ಎಸ್‌.ಇಂದಿರೇಶ್‌ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಎಂ.ಜಿ.ಉಮಾ, ರಾಮಚಂದ್ರ ಡಿ.ಹುದ್ದಾರ್‌, ಟಿ.ವೆಂಕಟೇಶ್‌ ನಾಯ್ಕ, ಅಡ್ವೊಕೇಟ್‌ ಜನರಲ್‌ ಶಶಿಕಿರಣ್‌ ಶೆಟ್ಟಿ, ಹೈಕೋರ್ಟ್‌ ರಿಜಿಸ್ಟ್ರಾರ್‌ ಜನರಲ್‌ ಕೆ.ಎಸ್‌.ಭರತ್‌ ಕುಮಾರ್‌ ಮತ್ತು ಉಡುಪಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್‌ ಎಸ್‌.ಗಂಗಣ್ಣನವರ್‌ ಭಾಗವಹಿಸಲಿದ್ದಾರೆ.

ನ.18ರಂದು ಸಂಜೆ 5ಕ್ಕೆ ಸಮಾರೋಪ ನಡೆಯಲಿದೆ. ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ಇ.ಎಸ್‌.ಇಂದಿರೇಶ್‌ ಸಮಾರೋಪ ಭಾಷಣ ಮಾಡಲಿದ್ದು, ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಎಸ್‌.ವಿಶ್ವಜಿತ್‌ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಶಿವಶಂಕರ ಬಿ.ಅಮರಣ್ಣವರ್‌, ಸಿಎಂ ಜೋಷಿ, ಟಿ.ಜಿ.ಶಿವಶಂಕರೇ ಗೌಡ, ಉಡುಪಿಯ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್‌ ಎಸ್‌.ಗಂಗಣ್ಣವರ್‌ ಭಾಗವಹಿಸಲಿದ್ದಾರೆ ಎಂದರು.

ಜಿಲ್ಲಾದ್ಯಂತ ಸುಮಾರು 1,300 ನ್ಯಾಯವಾದಿಗಳು ಭಾಗವಹಿಸಲಿದ್ದು, ದ.ಕ., ಶಿವಮೊಗ್ಗ, ಉತ್ತರಕನ್ನಡ ಜಿಲ್ಲೆಯ ನ್ಯಾಯವಾದಿಗಳನ್ನೂ ಆಹ್ವಾನಿಸಲಾಗುವುದು ಎಂದು ರೆನೋಲ್ಡ್‌ ಪ್ರವೀಣ್‌ ಕುಮಾರ್‌ ತಿಳಿಸಿದರು.

ಪ್ರಧಾನ ಕಾರ್ಯದರ್ಶಿ ರಾಜೇಶ್‌ ಎ.ಆರ್‌., ರಜತ ಮಹೋತ್ಸವ ಸಮಿತಿ ಖಜಾಂಚಿ ವಿಲ್ಫೆ†ಡ್‌ ಓಸ್ವಾಲ್ಡ್‌ ಡಿ’ಮೆಲ್ಲೋ, ಉಡುಪಿ ವಕೀಲರ ಸಂಘದ ಪದಾಧಿಕಾರಿಗಳಾದ ಮಿತ್ರ ಕುಮಾರ್‌ ಶೆಟ್ಟಿ, ಬೈಲೂರು ರವೀಂದ್ರ ದೇವಾಡಿಗ, ಸಂತೋಷ್‌ ಕುಮಾರ್‌ ಮೂಡುಬೆಳ್ಳೆ, ಗಂಗಾಧರ ಎಚ್‌.ಎಂ., ಆರೂರು ಸುಕೇಶ್‌ ಶೆಟ್ಟಿ, ವಿವಿಧ ಸಮಿತಿಗಳ ಸಂಯೋಜಕರಾದ ಸಂಜೀವ ಎ., ಎಂ.ಶಾಂತಾರಾಮ ಶೆಟ್ಟಿ, ಎನ್‌.ಕೆ.ಆಚಾರ್ಯ, ಬಿ.ನಾಗರಾಜ, ದಿನೇಶ್‌ ಬಿ.ಶೆಟ್ಟಿ, ಆನಂದ ಮಡಿವಾಳ, ಸತೀಶ್‌ ಪೂಜಾರಿ, ಅಸದುಲ್ಲಾ ಕಟಪಾಡಿ, ಅಮೃತಕಲಾ, ಸ್ಮರಣ ಸಂಚಿಕೆಯ ಸಂಪಾದಕ ಶಶೀಂದ್ರ ಕುಮಾರ್‌ ಪತ್ರಿಕಾಗೋಷ್ಠಿಯಲ್ಲಿದ್ದರು.

 

ಟಾಪ್ ನ್ಯೂಸ್

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Shourya

Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ

Kapu-Kalahasti

Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Kapu-Kalahasti

Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ

DC-CHILD

Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.