Bhatkal: ಮಲ್ಪೆಯ ಬೋಟ್ ಮುಳುಗಡೆ; 7 ಮಂದಿ ಮೀನುಗಾರರ ರಕ್ಷಣೆ
Team Udayavani, Sep 7, 2024, 12:38 AM IST
ಮಲ್ಪೆ: ಆಳಸಮುದ್ರ ಮೀನುಗಾರಿಕೆಗೆ ತೆರಳಿದ ಮಲ್ಪೆಯ ಆಳಸಮುದ್ರ ಬೋಟು ಭಟ್ಕಳ ಸಮೀಪ ತೆಂಗಿನಗುಂಡಿ ಬಂದರು ಬಳಿ ಬಂಡೆಕಲ್ಲಿಗೆ ಢಿಕ್ಕಿ ಹೊಡೆದು ಗುರುವಾರ ಸಂಜೆ ಮುಳುಗಡೆಗೊಂಡಿದ್ದು, ಅದರಲ್ಲಿದ್ದ ಏಳು ಮಂದಿ ಮೀನುಗಾರರನ್ನುಮತ್ತೊಂದು ಬೋಟ್ನಲ್ಲಿ ರಕ್ಷಿಸಲಾಗಿದೆ.
ಬೋಟಿನ ತಂಡೇಲ ದೇವೇಂದ್ರ ಮಂಜು ಮೊಗೇರ, ಕಲಾಸಿಗಳಾದ ಧನಂಜಯ ಮೊಗೇರ, ಸುಧೀರ್ ಕೃಷ್ಣ ಆಚಾರಿ, ನರಸಿಂಹ ಗೋವಿಂದ ಮೊಗೇರ, ನವೀನ್ ಗೊಂಡ, ನಾಗಪ್ಪ ಮೊಗೇರ, ಅನಿಲ್ ಬಾರೋ ಅವರು ಕೊಡವೂರಿನ ಸವಿತಾ ಎಸ್. ಸಾಲ್ಯಾನ್ಗೆ ಸೇರಿದ ಶ್ರೀ ಕುಲಮಹಾಸ್ತ್ರಿ ಫಿಶರೀಸ್ ಬೋಟಿನಲ್ಲಿ ಸೆ. 5ರಂದು ಬೆಳಗ್ಗೆ ಸುಮಾರು 4 ಗಂಟೆಗೆ ಮಲ್ಪೆ ಬಂದರಿನಿಂದ ತೆರಳಿದ್ದರು.
ಬೈಂದೂರಿನಿಂದ ಸುಮಾರು 13 ನಾಟಿಕಲ್ ಮೈಲು ದೂರದಲ್ಲಿ ಒಂದು ಟ್ರಾಲ್ ಮುಗಿಸಿ 2ನೇ ಟ್ರಾಲ್ ಹಾಕಿ ಬಲೆಯನ್ನು ಎಳೆದುಕೊಳ್ಳುವಾಗ ಆಕಸ್ಮಿಕವಾಗಿ ಬೋಟಿನ ಫ್ಯಾನಿಗೆ ಬಲೆ ಬಿದ್ದು ಎಂಜಿನ್ ಸ್ಥಗಿತಗೊಂಡಿತು. ಬೋಟನ್ನು ಚಾಲನಾ ಸ್ಥಿತಿಗೆ ತರಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಆ ವೇಳೆ ಸಮೀಪದಲ್ಲಿದ್ದ ಸಾಯಿ ಸಾಗರ ಬೋಟಿನವರು ಧಾವಿಸಿ ಬಂದು ಬಲೆಯನ್ನು ಬಿಡಿಸಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಬಳಿಕ ಬೋಟನ್ನು ಸಮೀಪದ ಭಟ್ಕಳ ತೆಂಗಿನಗುಂಡಿ ಬಂದರಿಗೆ ಹಗ್ಗದ ಸಹಾಯದಿಂದ ಎಳೆದುಕೊಂಡು ತರುತ್ತಿದ್ದಾಗ ಬಂದರು ಬಳಿಯ ಅಳಿವೆಯಲ್ಲಿ ಸಂಜೆ 6 ಗಂಟೆ ವೇಳೆಗೆ ಹಗ್ಗ ತುಂಡಾಗಿ ಬೋಟು ನಿಯಂತ್ರಣ ತಪ್ಪಿ ಕಲ್ಲಿಗೆ ಬಡಿದು ಸಂಪೂರ್ಣ ಜಖಂಗೊಂಡಿದ್ದು, ಸುಮಾರು 60 ಲಕ್ಷ ರೂ. ನಷ್ಟ ಅಂದಾಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ
Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.