ನಾವು ದೇವರೆಂದು ಜನರು ಹೇಳಬೇಕು; ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಮಾರ್ಮಿಕ ಮಾತು
Team Udayavani, Sep 7, 2024, 6:50 AM IST
ಪುಣೆ: “ನಾವು ದೇವರಂತೆಯೋ, ಅಲ್ಲವೋ ಎಂಬುದನ್ನು ಜನರು ನಿರ್ಧರಿಸುತ್ತಾರೆ. ನಾನು ದೇವರು ಎಂದು ನಾವೇ ಘೋಷಿಸಿಕೊಳ್ಳಬಾರದು’ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
ಪುಣೆಯಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿ, ಶಾಂತ ಸ್ಥಿತಿಯಲ್ಲಿರುವ ಬದಲು ನಾವು ಮಿಂಚಿನಂತೆ ಹೊಳೆಯಬೇಕು ಎಂದು ಕೆಲವರು ಭಾವಿಸುತ್ತಾರೆ. ಆದರೆ ಒಮ್ಮೆ ಮಿಂಚು ಅಪ್ಪಳಿಸಿದ ಬಳಿಕ ಆ ಪ್ರದೇಶವು ಮೊದಲಿಗಿಂತ ಹೆಚ್ಚು ಕತ್ತಲಾಗುತ್ತದೆ. ಆದ್ದರಿಂದ ಅಗತ್ಯವಿದ್ದಾಗ ದೀಪದಂತೆ ಬೆಳಗಬೇಕು ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.
ಮಣಿಪುರದ ಪ್ರಸ್ತುತ ಪರಿಸ್ಥಿತಿ ಬಗ್ಗೆ ಮಾತನಾಡಿ, ಮಣಿಪುರದ ಪ್ರಸ್ತುತ ಸ್ಥಿತಿ ದಯನೀಯವಾಗಿದೆ ಮತ್ತು ಸವಾಲಿನಿಂದ ಕೂಡಿದೆ. ಇಂತಹ ಪರಿಸ್ಥಿತಿಯಲ್ಲೂ ಆರೆಸ್ಸೆಸ್ ಸ್ವಯಂಸೇವಕರು ಅಲ್ಲಿ ದೃಢವಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಹಿಂಸಾಚಾರ ಉಂಟಾಯಿತೆಂದು ಸಂಘದ ಕಾರ್ಯಕರ್ತರು ಅಲ್ಲಿಂದ ಓಡಿ ಹೋಗುವುದಿಲ್ಲ. ಅವರು ಪರಿಸ್ಥಿತಿಯನ್ನು ಸಹಜತೆಗೆ ಮರಳಿಸಲು ಮತ್ತು ದ್ವೇಷ ತಗ್ಗಿಸಲು ಶ್ರಮಿಸುತ್ತಿದ್ದಾರೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.