Safety of Women: ಮೀಟೂ ಪ್ರಕರಣ: 16ಕ್ಕೆ ಫಿಲಂ ಚೇಂಬರ್ ಸಭೆ
ಚಿತ್ರರಂಗದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ತಡೆ ಬಗ್ಗೆ ಚರ್ಚೆ
Team Udayavani, Sep 7, 2024, 6:56 AM IST
ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿನ ಮಹಿಳೆಯರ ಸುರಕ್ಷೆ ಕುರಿತಂತೆ ಸಮಿತಿ ರಚಿಸುವ ಕುರಿತು ಚರ್ಚಿಸಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿರ್ಧರಿಸಿದ್ದು, ಸೆ. 16ರಂದು ಚಿತ್ರರಂಗದ ಪ್ರಮುಖರ ಸಭೆ ಕರೆಯುವ ಸಾಧ್ಯತೆ ಇದೆ.
ಚಿತ್ರ ನಟಿಯರನ್ನು ಕರೆದು ಸೆ.13ರ ಒಳಗೆ ಮಹಿಳೆಯರ ಸುರಕ್ಷೆ ಕುರಿತಾಗಿ ಚರ್ಚಿಸಬೇಕೆಂದು ಮಹಿಳಾ ಆಯೋಗ ಮಂಡಳಿಗೆ ಪತ್ರ ಬರೆದಿತ್ತು. ಈ ಕುರಿತು ಪ್ರತಿಕ್ರಿಯಿಸಿರುವ ಮಂಡಳಿ ಅಧ್ಯಕ್ಷ ಎನ್.ಎಂ. ಸುರೇಶ್, ಮಂಡಳಿ ಕೂಡ ಚಿತ್ರರಂಗದ ಮಹಿಳೆಯರ ಕುರಿತಾಗಿ ಚರ್ಚೆ ನಡೆಸಲಿದೆ ಎಂದಿದ್ದಾರೆ.
ಕನ್ನಡ ಚಿತ್ರರಂಗದಲ್ಲಿ ಮಹಿಳೆಯರ ಮೇಲೆ ಆಗುತ್ತಿರುವ ದೌರ್ಜನ್ಯಗಳನ್ನು ವರದಿ ಮಾಡುವಂತೆ ಹಾಗೂ ಅವರ ಸುರಕ್ಷತೆಗೆ ಯೋಜನೆ ರೂಪಿಸುವಂತೆ ಕೋರಿ ಫಿಲ್ಮ್ ಇಂಡಸ್ಟ್ರಿ ಫಾರ್ ರೈಟ್ಸ್ ಆ್ಯಂಡ್ ಇಕ್ವಾಲಿಟಿ ಸಂಸ್ಥೆ ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ. ಇದರೊಂದಿಗೆ ಚಿತ್ರರಂಗದಲ್ಲಿ ಮತ್ತೆ ಮೀ ಟೂ ಕಾವು ಪಡೆದಿದೆ.
“ಸದ್ಯ ಚಿತ್ರರಂಗದಲ್ಲಿ ಕಿರುಕುಳಕ್ಕೆ ಒಳಗಾದ ಸಾಕಷ್ಟು ಸಂತ್ರಸ್ತೆಯರಿದ್ದಾರೆ. ಆದರೆ ಅವರ್ಯಾರೂ ಮುಂದೆ ಬರಲು ಧೈರ್ಯ ಮಾಡುತ್ತಿಲ್ಲ. ಸದ್ಯ ಸರಕಾರದಿಂದ ಚಿತ್ರರಂಗದಲ್ಲಿ ಮಹಿಳೆಯರಿಗೆ ಸುರಕ್ಷಿತ ವಾತಾವರಣ ಹಾಗೂ ಅದಕ್ಕೆ ಬೆಂಬಲವಾಗಿ ನಿಲ್ಲಬಲ್ಲ ಸಮಿತಿ ರಚಿಸುವುದನ್ನು ನಾವು ಅಪೇಕ್ಷಿಸುತ್ತೇವೆ. ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ.”– ನೀತು ಶೆಟ್ಟಿ, ನಟಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Viral Disease: ಕೇರಳದಲ್ಲಿ ಎಂ ಫಾಕ್ಸ್ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.