Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ
Team Udayavani, Sep 7, 2024, 3:08 PM IST
ಪುಣೆ: ಹೋಟೆಲ್ ನಲ್ಲಿ ಆಹಾರ ಕೊಡಲು ನಿರಾಕರಿಸಿದ್ದಾರೆಂದು ಸಿಟ್ಟಿಗೆದ್ದ ಚಾಲಕನೋರ್ವ ತನ್ನ ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಆಘಾತಕಾರಿ ಘಟನೆಯೊಂದು ಪುಣೆ ಜಿಲ್ಲೆಯ ಇಂದಾಪುರ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.
ಪುಣೆ ಜಿಲ್ಲೆಯ ಇಂದ್ರಾಪುರದಲ್ಲಿ ಶುಕ್ರವಾರ ರಾತ್ರಿ ಈ ಘಟನೆ ಸಂಭವಿಸಿದ್ದು, ಪುಣೆ-ಸೋಲಾಪುರ ಹೆದ್ದಾರಿಯ ಹಿಂಗಂಗಾವ್ನಲ್ಲಿರುವ ಹೊಟೇಲ್ ಗೋಕುಲ್ ರೆಸ್ಟೋರೆಂಟ್ ಗೆ ಲಾರಿ ಚಾಲಕ ಊಟ ಮಾಡಲೆಂದು ಬಂದಿದ್ದಾನೆ ಅಲ್ಲದೆ ತಡವಾಗಿದ್ದರಿಂದ ಹೋಟೆಲ್ ಸಿಬ್ಬಂದಿ ಊಟ ಮುಗಿದಿದೆ ಎಂದು ಹೇಳಿದ್ದಾರೆ ಇಷ್ಟಕ್ಕೆ ಸಿಟ್ಟಾದ ಲಾರಿ ಚಾಲಕ ತನ್ನ ಲಾರಿಯನ್ನು ಹೋಟೆಲ್ ಕಟ್ಟಡದಕ್ಕೆ ಡಿಕ್ಕಿ ಹೊಡೆದಿದ್ದಾನೆ ಅಲ್ಲದೆ ಹೋಟೆಲ್ ಹೊರಗಡೆ ಇದ್ದ ಕಾರು ಬೈಕುಗಳಿಗೆ ಗುದ್ದಿ ಜಖಂಗೊಳಿಸಿದ್ದಾನೆ ಇಷ್ಟಾಗುತ್ತಲೇ ಅಲ್ಲಿದ್ದ ಜನರು ಲಾರಿಯನ್ನು ನಿಲ್ಲಿಸಲು ಯತ್ನಿಸಿದ್ದಾರೆ ಈ ವೇಳೆ ನಿಲ್ಲಿಸದೆ ಮತ್ತೆ ಮತ್ತೆ ಹೋಟೆಲ್ ಕಟ್ಟಡಕ್ಕೆ ಲಾರಿಯನ್ನು ಡಿಕ್ಕಿ ಹೊಡೆಸಿದ್ದಾನೆ.
ಲಾರಿ ಚಾಲಕನ ಅವಾಂತ ಅಲ್ಲಿನ ಜನ ತಮ್ಮ ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಅಸಲಿಗೆ ಲಾರಿ ಚಾಲಕ ಪಾನಮತ್ತನಾಗಿದ್ದ ಎಂದು ಹೇಳಲಾಗಿದೆ ಕೊನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದನ್ನು ಕಂಡ ಲಾರಿ ಚಾಲಕ ಇನ್ನು ನನಗೆ ಉಳಿಗಾಲ ಇಲ್ಲ ಎಂದು ತಿಳಿದು ಲಾರಿಯನ್ನು ನಿಲ್ಲಿಸಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ, ಆದರೆ ಚಾಲಕನ ಆಟಾಟೋಪಕ್ಕೆ ಎರಡು ಕಾರು ಎರಡು ದ್ವಿಚಕ್ರ ವಾಹನ ಸಂಪೂರ್ಣ ಜಖಂಗೊಂಡಿದ್ದು ಲಾರಿ ಚಾಲಕನ ವಿರುದ್ಧ ದೂರು ದಾಖಲಾಗಿದೆ.
ಇದನ್ನೂ ಓದಿ: Crime: ಸೈನೈಡ್ ಮಿಶ್ರಿತ ಜ್ಯೂಸ್ ನೀಡಿ ಚಿನ್ನಾಭರಣ ಲೂಟಿ; ಲೇಡಿ ಗ್ಯಾಂಗ್ ಅರೆಸ್ಟ್
#Pune: Drunk Driver Crashes Truck Into Hotel After Food Denial, Damages Vehicles, Watch Video https://t.co/AdGuLvtIlo pic.twitter.com/23c1cXp7T0
— Pune Pulse (@pulse_pune) September 7, 2024
VIDEO | Maharashtra: A truck driver rammed his vehicle into a hotel building in #Pune after he was reportedly denied food. The truck driver was allegedly drunk. The incident took place on Friday night.#PuneNews #maharashtranews
(Source: Third Party)
(Full video available on… pic.twitter.com/TrPEF1ZxrA
— Press Trust of India (@PTI_News) September 7, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Viral Disease: ಕೇರಳದಲ್ಲಿ ಎಂ ಫಾಕ್ಸ್ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.