Bantwala: ನವ ದಂಪತಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ; ಪತ್ನಿ ಮೃತ್ಯು, ಪತಿ ಗಂಭೀರ
2 ದಿನಗಳ ಹಿಂದಷ್ಟೇ ಮದುವೆಯಾಗಿದ್ದ ದಂಪತಿ
Team Udayavani, Sep 7, 2024, 3:16 PM IST
ಬಂಟ್ವಾಳ: ನವ ದಂಪತಿಗಳಿಬ್ಬರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ ಸಂಭವಿಸಿ ನವವಿವಾಹಿತೆ ಸಾವನ್ನಪ್ಪಿದ್ದು, ಪತಿ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು-ಬೆಂಗಳೂರು ರಸ್ತೆಯ ಬಂಟ್ವಾಳದ ತಲಪಾಡಿ ಎಂಬಲ್ಲಿ ಸೆ.7ರ ಶನಿವಾರ ನಡೆದಿದೆ.
ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ ಸಾವನ್ನಪ್ಪಿದ ನವವಿವಾಹಿತೆ. ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಅನಿಶ್ ಕೃಷ್ಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.
ಬಿಸಿರೋಡಿನ ಕಡೆಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ದವದಂಪತಿಗಳ ಆಲ್ಟೋ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಯಿಂದ ಡಿವೈಡರ್ ಮೇಲಿನಿಂದ ಇನ್ನೊಂದು ಬದಿಗೆ ಹಾರಿ ಮಂಗಳೂರು ಕಡೆಯಿಂದ ಬಿಸಿರೋಡಿನ ಕಡೆಗೆ ಬರುತ್ತಿದ್ದ ಕೆ.ಎಸ್.ಆರ್ಟಿ.ಸಿ ಬಸ್ ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಸಹಪ್ರಯಾಣಿಕೆ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಘಟನೆಯಿಂದ ಹೆದ್ದಾರಿಯಲ್ಲಿ ಕೆಲಹೊತ್ತು ಸಂಚಾರಕ್ಕೆ ಅಡಚಣೆ ಉಂಟಾಯಿತು.
ಸೆ.5 ರಂದು ದೇಂತಡ್ಕ ದೇವಸ್ಥಾನದಲ್ಲಿ ಮದುವೆ ನಡೆದಿತ್ತು. ಮದುವೆ ಕಾರ್ಯಕ್ರಮದ ವಿಚಾರವಾಗಿ ಇಂದು ಅಲ್ಲಿನ ಕೆಲವೊಂದು ಲೆಕ್ಕಾಚಾರ ಮಾಡಲು ದೇಂತಡ್ಕ ದೇವಸ್ಥಾನಕ್ಕೆ ಬಂದು ವಾಪಸ್ ಮಾವನ ಮನೆಗೆ ಹೋಗುವ ವೇಳೆ ಈಘ ಟನೆ ನಡೆದಿದೆ ಎನ್ನಲಾಗಿದೆ.
ಇಬ್ಬರು ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದೆ.
ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Viral Disease: ಕೇರಳದಲ್ಲಿ ಎಂ ಫಾಕ್ಸ್ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.