ಮಹಾಲಿಂಗಪುರದಲ್ಲಿ ಮತ್ತೊಂದು ಭ್ರೂಣಹತ್ಯೆ ಪ್ರಕರಣ ಬೆಳಕಿಗೆ: ಪಾಟೀಲ ಆಸ್ಪತ್ರೆ ಸೀಜ್

ಹೆಣ್ಣು ಎಂದು ಗರ್ಭಪಾತ... ನಂತರ ಗೊತ್ತಾಗಿದ್ದು ಗಂಡು ಮಗು ಎಂದು

Team Udayavani, Sep 7, 2024, 3:36 PM IST

ಮಹಾಲಿಂಗಪುರದಲ್ಲಿ ಮತ್ತೊಂದು ಭ್ರೂಣಹತ್ಯೆ ಪ್ರಕರಣ ಬೆಳಕಿಗೆ: ಪಾಟೀಲ ಆಸ್ಪತ್ರೆ ಸೀಜ್

ಮಹಾಲಿಂಗಪುರ: ಕಳೆದ ಮೇ 29 ರಂದು ಮಹಾಲಿಂಗಪುರದ ಕವಿತಾ ಬಾಡನವರ ಅವರು ಅಕ್ರಮವಾಗಿ ಅವರ ಮನೆಯಲ್ಲಿಯೇ ಮಾಡಿದ ಗರ್ಭಪಾತದಿಂದ ಮಹಾರಾಷ್ಟ್ರ ಮಹಿಳೆ ಸಾವನ್ನಪ್ಪಿದ್ದರು. ಈ ಘಟನೆಯು ಮಾಸುವ ಮುನ್ನವೇ ಪಟ್ಟಣದಲ್ಲಿ ಮತ್ತೊಂದು ಭ್ರೂಣಹತ್ಯೆ ಪ್ರಕರಣ ನಡೆದಿದೆ. ಭ್ರೂಣಹತ್ಯೆ ಪ್ರಕರಣದ ಆರೋಪಿ ಕವಿತಾ ಬಾಡನವರ ಕಳೆದ ಮೂರು ತಿಂಗಳಿನಿಂದ ಜಾಮೀನು ಸಿಗದೇ ಜೈಲಿನಲ್ಲಿದ್ದಾರೆ.

ಹೀಗಿರುವಾಗಲೇ ಮಹಾಲಿಂಗಪುರ ಪಟ್ಟಣದಲ್ಲಿ ಮತ್ತೊಂದು ಗರ್ಭಪಾತ ಪ್ರಕರಣ ಬೆಳಕಿಗೆ ಬಂದು ಮೊದಲಿನಿಂದ ರುಚಿಕಟ್ಟಾದ ಬೆಲ್ಲಕ್ಕೆ ಹೆಸರುವಾಸಿಯಾದ ಮಹಾಲಿಂಗಪುರ ಈಗ ಅಕ್ರಮ ಗರ್ಭಪಾತ ವಿಷಯದಲ್ಲಿ ರಾಜ್ಯದ ಗಮನ ಸೆಳೆಯುತ್ತಿರುವುದು ವಿಷಾದನೀಯ.

ಪಾಟೀಲ್ ಆಸ್ಪತ್ರೆ ಸೀಜ್ :
ಪಟ್ಟಣದ ಡಬಲ್ ರಸ್ತೆಯಲ್ಲಿರುವ ಡಾ.ರಾಜೇಂದ್ರ ಪಾಟೀಲ ಅವರ ಆಸ್ಪತ್ರೆಯ ಮೇಲೆ ಖಚಿತ ಮಾಹಿತಿಯೊಂದಿಗೆ ಗುರುವಾರ ರಾತ್ರಿ ಬಾಗಲಕೋಟೆ ಡಿಎಚ್‌ಓ ಸುವರ್ಣ ಕುಲಕರ್ಣಿ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ದಯಾನಂದ ಕರೆನ್ನವರ, ಮುಧೋಳ ಟಿಎಚ್‌ಓ ವೆಂಕಟೇಶ ಮಲಘಾಣ ಅವರು ದಾಳಿ ಮಾಡಿದಾಗ ನೆರೆಯ ಮುಧೋಳ ತಾಲೂಕಿನ ರನ್ನಬೆಳಗಲಿ ಪಟ್ಟಣದ 24 ವರ್ಷದ ಮಹಿಳೆಯ ಗರ್ಭಪಾತವನ್ನು ಮಾಡಿರುವುದು ಖಚಿತವಾದ್ದರಿಂದ ಅಧಿಕಾರಿಗಳು ಪಾಟೀಲ್ ಆಸ್ಪತ್ರೆಯ ಮುಖ್ಯವೈದ್ಯರ ಓಪಿಡಿ, ನೆಲಮಹಡಿಯ ಎರಡನೇ ಓಪಿಡಿ, ಆಪರೇಷನ್ ಥಿಯೇಟರ್, ಸ್ಕ್ಯಾನಿಂಗ್ ಸೆಂಟರ್, ಎಮ್‌ಆರ್‌ಡಿ ರೂಮ್ ಸೀಜ್ ಮಾಡಿದ್ದಾರೆ.

14 ವಾರಗಳ ಭ್ರೂಣದ ಗರ್ಭಪಾತ: 14 ವಾರಗಳ ಭ್ರೂಣವನ್ನು ಡಾ.ಪಾಟೀಲ್ ಅವರು ಗರ್ಭಪಾತ ಮಾಡಿದ್ದಾರೆ. ವಿಚಿತ್ರವೆಂದರೆ ಆ ಮಹಿಳೆಗೆ ಈ ಮೊದಲು ಮೂರು ಹೆಣ್ಣುಮಕ್ಕಳಿದ್ದಾರೆ. ಇದು ನಾಲ್ಕನೇ ಮಗು, ಹೆಣ್ಣು ಮಗು ಎಂದು ಗರ್ಭಪಾತ ಮಾಡಿಸಿದ್ದಾರೆ. ಗರ್ಭಪಾತದ ನಂತರ ಗಂಡು ಎಂದು ಗೊತ್ತಾಗಿದ್ದರಿಂದ ಪ್ರಕರಣವು ಬೆಳಕಿಗೆ ಬಂದಿದೆ. ಗರ್ಭಪಾತ ಮಾಡಿಸಿಕೊಂಡ ಮಹಿಳೆಯ ಪತಿ ನೀಡಿದ ದೂರನ್ನು ಆಧರಿಸಿ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ದಾಳಿಯ ವೇಳೆ ಗರ್ಭಪಾತ ಮಾಡಿದ ದಾಖಲೆಗಳು ಪತ್ತೆ :
ಮೂರು ತಿಂಗಳ ಹಿಂದೆ ಮಹಾಲಿಂಗಪುರ ಪಟ್ಟಣದಲ್ಲಿ ಆದ ಕವಿತಾ ಬಾಡನವರ ಪ್ರಕರಣದಲ್ಲಿ ಇತ್ತಿಚಿಗೆ ಮೊದಲಿನ ಡಿಎಚ್‌ಓ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಸೇರಿದಂತೆ ನಾಲ್ವರ ತಲೆದಂಡವಾಗಿ, ಅವರ ಜಾಗಕ್ಕೆ ಬಂದಿರುವ ನೂತನ ಅಧಿಕಾರಿಗಳು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಡಾ.ರಾಜೇಂದ್ರ ಪಾಟಿಲ್ ಆಸ್ಪತ್ರೆಯ ದಾಳಿಯ ವೇಳೆ ಗರ್ಭಪಾತ ಮಾಡಿದ ಅಗತ್ಯ ದಾಖಲೆಗಳು ದೊರೆತ ಹಿನ್ನಲೆ ಅಧಿಕಾರಿಗಳು ಆಸ್ಪತ್ರೆಯ ಎರಡು ಓಪಿಡಿ, ಸ್ಕ್ಯಾನಿಂಗ್ ಸೆಂಟರ್, ಡೆಲಿವರಿ ಥೇಟರ್ ಸೇರಿದಂತೆ 4 ಕೊಠಡಿಗಳನ್ನು ಸೀಜ್ ಮಾಡಿ ವೈದ್ಯರ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಧನ್ವಂತರಿ ಸ್ಕ್ಯಾನಿಂಗ್ ಸೆಂಟರ್ ಸೀಜ್ :
ಶುಕ್ರವಾರ ಸಂಜೆ ಮತ್ತೆ ಮಹಾಲಿಂಗಪುರಕ್ಕೆ ಬಂದ ಬಾಗಲಕೋಟೆ ಡಿಎಚ್‌ಓ ಡಾ.ಸುವರ್ಣ ಕುಲಕರ್ಣಿ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ದಯಾನಂದ ಕರೆನ್ನವರ ಅವರು ಪಾಟೀಲ ಆಸ್ಪತ್ರೆಯಲ್ಲಿ ಗರ್ಭಪಾತ ಮಾಡಿಸಿಕೊಂಡ ಮಹಿಳೆಯು ಆ.30 ರಂದು ಧನ್ವಂತರಿ ಸ್ಕ್ಯಾನಿಂಗ್ ಸೆಂಟರ್‌ನಲ್ಲಿ ಗರ್ಭಪತ್ತೆ ಮಾಡಿಕೊಂಡಿರುವದರಿಂದ ಅಧಿಕಾರಿಗಳು ಶುಕ್ರವಾರ ಸಂಜೆ 5 ರಿಂದ ರಾತ್ರಿ 8 ಗಂಟೆವರೆಗೂ ಸ್ಕ್ಯಾನಿಂಗ್ ಸೆಂಟರ್‌ನ ವೈದ್ಯರ ಮತ್ತು ಸಿಬ್ಬಂದಿ ವಿಚಾರಣೆ ನಡೆಸಿ, ಪ್ರಾಥಮಿಕ ತನಿಖೆಯಲ್ಲಿ ಲೋಪದೋಷಗಳು ಕಂಡು ಬಂದ ಕಾರಣ, ಧನ್ವಂತರಿ ಸ್ಕ್ಯಾನಿಂಗ್ ಸೆಂಟರ್‌ನ್ನು ಸೀಜ್ ಮಾಡಿದ್ದಾರೆ.

ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ದಯಾನಂದ ಕರೆನ್ನವರ, ಸ್ಥಳಿಯ ಸಮುದಾಯ ಆರೋಗ್ಯ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಸಿ.ಎಂ.ವಜ್ಜರಮಟ್ಟಿ ಹಾಗೂ ಕುಟುಂಬ ಕಲ್ಯಾಣ ಇಲಾಖೆಯ ಸಿಬ್ಬಂದಿ ಇದ್ದರು.

ಡಿಎಚ್‌ಓ ಹೇಳಿಕೆ :
ಕಳೆದ 5-6 ದಿನಗಳಿಂದ ಸ್ಟ್ರೀಂಗ್ ಆಪರೇಶನ್ ಮಾಡಿದ್ದರಿಂದ ಮಹಾಲಿಂಗಪುರದ ಪಾಟೀಲ್ ಆಸ್ಪತ್ರೆಯಲ್ಲಿ ಗರ್ಭಪಾತ ಆಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಗುರುವಾರ ರಾತ್ರಿ ಪಾಟೀಲ್ ಆಸ್ಪತ್ರೆಯನ್ನು ಸೀಜ್ ಮಾಡಿ, ಪ್ರಕರಣ ದಾಖಲಿಸಿಕೊಂಡು ಸರ್ಕಾರ ಮತ್ತು ಇಲಾಖೆಯ ಮೇಲಾಧಿಕಾರಿಗಳಿಗೆ ಮಾಹಿತಿ ಕಳಿಸಿಲಾಗಿದೆ. ಪಾಟೀಲ್ ಆಸ್ಪತ್ರೆಯಲ್ಲಿ ಗರ್ಭಪಾತವಾದ ಮಹಿಳೆಯು ಆ.30 ರಂದು ಧನ್ವಂತರಿ ಸೆಂಟರ್‌ನಲ್ಲಿ ಸ್ಕ್ಯಾನಿಂಗ್ ಮಾಡಿಸಿದ್ದಾರೆ. ಅದಕ್ಕಾಗಿ ಇಲ್ಲಿ ವಿಚಾರಣೆ ನಡೆಸಿ, ಪ್ರಾಥಮಿಕ ತನಿಖೆಯಲ್ಲಿ ಸ್ಕ್ಯಾನಿಂಗ್ ಸೆಂಟರ್‌ನಲ್ಲಿನ ಲೋಪದೋಷಗಳ ಹಿನ್ನಲೆ ಸ್ಕ್ಯಾನಿಂಗ್ ಸೆಂಟರ್ ನ್ನು ಸೀಜ್ ಮಾಡಿ, ಪ್ರಕರಣ ದಾಖಲಿಸಿಕೊಂಡಿದ್ದೇವೆ. ನ್ಯಾಯಾಲಯದ ವಿಚಾರಣೆಯಲ್ಲಿ ಸತ್ಯಾಸತ್ಯತೆ ತಿಳಿಯುತ್ತದೆ. ಪಟ್ಟಣದಲ್ಲಿ ಇಂತಹ ಘಟನೆಗಳು ಮರುಕಳಿಸಬಾರದು. ಸಾರ್ವಜನಿಕರು ಗಂಡು ಹೆಚ್ಚು, ಹೆಣ್ಣು ಕಡಿಮೆ ಎಂಬ ಭೇದಭಾವ ಬಿಟ್ಟಾಗ ಮಾತ್ರ ಇಂತಹ ಘಟನೆಗಳಿಗೆ ಕಡಿವಾಣ ಹಾಕಲು ಸಾಧ್ಯ. ಈ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕಾಗಿದ್ದು ಅಗತ್ಯವಾಗಿದೆ.
– ಡಾ. ಸುವರ್ಣ ಕುಲಕರ್ಣಿ. ಡಿಎಚ್‌ಓ , ಬಾಗಲಕೋಟೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.