ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ
Team Udayavani, Sep 7, 2024, 7:00 PM IST
ಭೋಪಾಲ್: ರಸ್ತೆಬದಿ ಅತ್ಯಾಚಾರವೆಸಗುತ್ತಿದ್ದ ಕೃತ್ಯವನ್ನು ಮೊಬೈಲ್ ಚಿತ್ರೀಕರಿಸಿ ವೈರಲ್ ಮಾಡಿದ ಆರೋದಡಿ ಆಟೋ ಚಾಲಕನೊಬ್ಬನನ್ನು ಬಂಧಿಸಲಾಗಿದೆ.
ಆರೋಪಿಯನ್ನು ಮೊಹಮ್ಮದ್ ಸಲೀಂ ಎಂದು ಗುರುತಿಸಲಾಗಿದ್ದು, ಈತ ನಾಗ್ಡಾದ ಪ್ರಕಾಶ್ ನಗರದ ನಿವಾಸಿಯಾಗಿದ್ದು, ಆಟೋ ರಿಕ್ಷಾ ಚಾಲಕನಾಗಿ ಕೆಲಸ ಮಾಡುತ್ತಿದ್ದಾನೆ. ವಿಡಿಯೋ ಚಿತ್ರೀಕರಿಸಿದ ಮೊಬೈಲ್ ಫೋನ್ ನನ್ನು ಆರೋಪಿಯಿಂದ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಶರ್ಮಾ ತಿಳಿಸಿದ್ದಾರೆ.
ಏನಿದು ಘಟನೆ?:
ನಗರದ ಅತ್ಯಂತ ಜನನಿಬಿಡ ಪ್ರದೇಶದಲ್ಲಿ ಒಂದಾಗಿರುವ ಕೊಯ್ಲಾ ಫಾಟಕ್ ಪ್ರದೇಶದಲ್ಲಿ ಬುಧವಾರ(ಸೆ.4ರಂದು) ಮಧ್ಯಾಹ್ನ ಲೋಕೇಶ್ ಎಂಬಾತ ಚಿಂದಿ ಆಯುತ್ತಿದ್ದ ಸಂತ್ರಸ್ತೆಯನ್ನು ಮದುವೆ ಆಗುತ್ತೇನೆಂದು ಮನವೊಲಿಸಿ ಆಕೆಗೆ ಮದ್ಯ ಕುಡಿಸಿ ಕುಡಿದ ಅಮಲಿನಲ್ಲಿ ಆಕೆಯನ್ನು ರಸ್ತೆ ಬದಿಯ ಗುಡಿಸಲು(ಟೆಂಟ್) ಮನೆಗೆ ಎಳೆದೊಯ್ದು ಅತ್ಯಾಚಾರ ಎಸಗಿದ್ದ.
ಈ ಪ್ರಕರಣ ಸಂಬಂಧ ಪೊಲೀಸರು ಆರೋಪಿ ಲೋಕೇಶ್ ನನ್ನು ಬಂಧಿಸಿದ್ದಾರೆ. ಆದರೆ ಕೃತ್ಯ ನಡೆಯುತ್ತಿದ್ದ ವೇಳೆ ದಾರಿಹೋಕರು ಮಹಿಳೆಯ ರಕ್ಷಣೆಗೆ ಧಾವಿಸುವ ಬದಲು ಕೃತ್ಯವನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದರು. ಆ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಹರಿದು ಬಿಟ್ಟಿದ್ದರು.
ಆರೋಪಿಗಳು ಉದ್ದೇಶಪೂರ್ವಕವಾಗಿ ವೀಡಿಯೋವನ್ನು ವೈರಲ್ ಮಾಡಿರುವ ಕುರಿತು ನಾವು ಪತ್ತೆ ಹಚ್ಚಲು ಪ್ರಯತ್ನಿಸುತ್ತಿದ್ದೇವೆ ಎಂದು ಪೊಲೀಸರು ಹೇಳಿದ್ದು, ಆರೋಪಿ ಆಟೋ ಚಾಲಕನ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್ಎಸ್), ಐಟಿ ಕಾಯ್ದೆ ಮತ್ತು ಮಹಿಳೆಯರ ಅಸಭ್ಯ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 72, 77, 294 ರ ಅಡಿಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ ಎಂದು ಎಸ್ಪಿ ಶರ್ಮಾ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.