Teacher: ಗುರಿಯೊಂದಿಗೆ ಗುರುಕೃಪೆಯಿದ್ದರೆ ಯಶ


Team Udayavani, Sep 8, 2024, 8:43 AM IST

2-desiswara-1

“ಗುರು ಬ್ರಹ್ಮ ಗುರು ವಿಷ್ಣು

ಗುರುದೇವೋ ಮಹೇಶ್ವರ’ ಸಂಸ್ಕೃತ ಶ್ಲೋಕ

“ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ’ – ಎನ್ನುವ ದಾಸವಾಣಿ

“ಮನಶ್ಚೇನ್ನ ಲಗ್ನಮ್‌ ಗುರೊರಂಗ್ರಿ ಪದ್ಮೇ ತತಃ ಕಿಂ….’ ಎನ್ನುವ ಶಂಕರಾಚಾರ್ಯರ ಗುರುವಷ್ಟಕ ಇವೆಲ್ಲ ಮುಕ್ತಕಗಳು ನಮಗರಿವಿಲ್ಲದೆಯೇ ನಮ್ಮೆಲ್ಲರ ಮನಸ್ಸಿನಲ್ಲಿ ಅಚ್ಚೊತ್ತಿದೆ. ಇವೆಲ್ಲ ಒಬ್ಬ ಮನುಷ್ಯನ ಜೀವನದಲ್ಲಿ ಗುರುವಿಗಿರುವ ಮಹತ್ವದ ಸ್ಥಾನವನ್ನು, ನಮ್ಮ ಭಾರತೀಯ ಸಂಸ್ಕೃತಿಯು ಗುರುವಿಗೆ ಕೊಟ್ಟಿರುವ ವಿಶೇಷ ಸ್ಥಾನವನ್ನು ತೋರಿಸುತ್ತದೆ.

ಚಾಣಕ್ಯ -ಚಂದ್ರಗುಪ್ತ, ಗುರು ರಾಮದಾಸ್‌ -ಶಿವಾಜಿ, ಹರಿಹರ,ಬುಕ್ಕ-ವಿದ್ಯಾರಣ್ಯರು- ಇವರೆಲ್ಲ ಭಾರತದ ಇತಿಹಾಸ ಪ್ರಸಿದ್ಧ ಗುರುಶಿಷ್ಯರ ಜೋಡಿಗಳು. ಗುರುಗಳ ಮಾರ್ಗದರ್ಶನದಿಂದ ಶಿಷ್ಯರು ಏರಬಹುದಾದ ಎತ್ತರವನ್ನು ಸಾಧಿಸಿ ತೋರಿಸಿದವರು. “ಮುಂದೆ ಗುರಿ ಇರಬೇಕು, ಹಿಂದೆ ಗುರುವಿರಬೇಕು’ಎನ್ನುವ ಪ್ರಸಿದ್ಧ ಹೇಳಿಕೆಯನ್ನು ಸತ್ಯವಾಗಿಸಿದವರು.

ಮಣ್ಣಿನ ಮುದ್ದೆಯಂತಿರುವ ಮಗು ಈ ಜೀವನದಲ್ಲಿ ಬೆಳೆಯುತ್ತಾ ಮನುಷ್ಯ ಎನಿಸಿಕೊಳ್ಳುವ ಪಯಣದಲ್ಲಿ ಅವನು ಏನಾಗುತ್ತಾನೆ ಎನ್ನುವುದು ಅವನು ಬೆಳೆಯುವ ವಾತಾವರಣ, ಅವನ ಮೇಲೆ ಗಾಢವಾಗಿ ಪ್ರಭಾವ ಬೀರುವ ಜನಗಳಿಂದ ನಿರ್ಧಾರವಾಗುತ್ತದೆ. ಒಳ್ಳೆಯ ಗುರು  ಒಬ್ಬ ವ್ಯಕ್ತಿಯ ಜೀವನದಲ್ಲಿ ಬಹುಮುಖ್ಯನಾಗುತ್ತಾನೆ. ಹಾಗಾಗಿ ಶಿಕ್ಷಕನ ವೃತ್ತಿಯು ಪ್ರಪಂಚದಲ್ಲಿ ಅತ್ಯಂತ ಪವಿತ್ರವಾದ ವೃತ್ತಿ ಎನಿಸಿಕೊಳ್ಳುತ್ತದೆ. ಈ ಪವಿತ್ರ ವೃತ್ತಿಗೆ ಯಾಕೋ ನಮ್ಮ ಸಮಾಜದಲ್ಲಿ ಈಗ ಅದಕ್ಕೆ ಬೇಕಾದ ಮನ್ನಣೆ ಸಿಗುತ್ತಿಲ್ಲ ಎನಿಸುತ್ತದೆ. ಬೆಳೆಯುವ ಮಕ್ಕಳು ಏನಾಗುತ್ತೀರಿ ಎಂದು ಕೇಳಿದಾಗ ಶಿಕ್ಷಕ ಅಥವಾ ಶಿಕ್ಷಕಿ ಆಗುತ್ತೇನೆ ಎಂದರೆ ಅವರನ್ನು ನಾವು ಪ್ರೋತ್ಸಾಹಿಸಿ ಅವರು ದಿಕ್ಕಿನಲ್ಲಿ ಬೆಳೆಯುವಂತೆ ನೋಡಿಕೊಳ್ಳುವುದು ಪೋಷಕರ ಕರ್ತವ್ಯ.

ದಿನಬೆಳಗಾದರೆ ಅಮಾನವೀಯ ಕೃತ್ಯಗಳ ಸುದ್ದಿಗಳನ್ನು ಎಲ್ಲ ಕಡೆ ಕೇಳುತ್ತಿರುವ ಈ ದಿನಗಳಲ್ಲಿ ಸ್ವಸ್ಥ ಪ್ರಜೆಗಳನ್ನು ಬೆಳೆಸುವ ಉತ್ತಮ ಗುರುಗಳ ಅಗತ್ಯ ಬಹಳವಿದೆ. ಭಾರತದ ಮಾಜಿ ರಾಷ್ಟ್ರಪತಿ ಎ.ಪಿ.ಜೆ ಅಬ್ದುಲ್‌ ಕಲಾಂ, ಕರ್ನಾಟಕದ ಅನುಭವಿ ಶಿಕ್ಷಣತಜ್ಞ  ಗುರುರಾಜ ಕರ್ಜಗಿ -ಇವರೆಲ್ಲ ಸಾವಿರಾರು ವಿದ್ಯಾರ್ಥಿಗಳ ಸ್ಫೂರ್ತಿಗೆ ಕಾರಣರಾದ ಆಧುನಿಕ ಮಹಾನ್‌ ಗುರುಗಳು. ಅಂತಹ ಗುರುಗಳು ಸಾವಿರ ಸಂಖ್ಯೆಯಲ್ಲಿ ಬರಬೇಕು.

ಈ ನಿಟ್ಟಿನಲ್ಲಿ ಶಿಕ್ಷಕರ ದಿನಾಚರಣೆ ಬಹಳ ಮಹತ್ವದ ದಿನ. ಮಾಜಿ ರಾಷ್ಟ್ರಪತಿಗಳಾದ ಸರ್ವಪಲ್ಲಿ ರಾಧಾಕೃಷ್ಣನ್‌ ಅವರ ಜನ್ಮದಿನವಾದ ಸೆ.5ನ್ನು ಭಾರತದಲ್ಲಿ ಶಿಕ್ಷಕರ ದಿನವನ್ನಾಗಿ ಆಚರಿಸಿದರೆ, ಪಾಶ್ಚಾತ್ಯ ದೇಶಗಳಲ್ಲಿ ಅಕ್ಟೋಬರ್‌ 5ನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ಈ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿ ಉತ್ತಮ ಶಿಕ್ಷಕರು ಬೆಳೆಯುವಂತೆ ಮಾಡುವುದು ಈಗಿನ ಸಮಾಜದ ಅಗತ್ಯವಾಗಿದೆ.

-ಸುಧಾ ಶಶಿಕಾಂತ್‌,

ಮಸ್ಕತ್‌

ಟಾಪ್ ನ್ಯೂಸ್

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: “ಅಕ್ಕ’ ಅರಮನೆಯ ರಚನೆಯ ನೆನ್ನೆ, ಇಂದು, ನಾಳೆಗಳು

Desi Swara: “ಅಕ್ಕ’ ಅರಮನೆಯ ರಚನೆಯ ನೆನ್ನೆ, ಇಂದು, ನಾಳೆಗಳು

Desi Swara: 12ನೆಯ ಅಕ್ಕ ಸಮ್ಮೇಳನ: ವೀರಶೈವ 10 ಸಾವಿರ ವರ್ಷಗಳ ಪ್ರಾಚೀನ ಧರ್ಮ

Desi Swara: 12ನೆಯ ಅಕ್ಕ ಸಮ್ಮೇಳನ: ವೀರಶೈವ 10 ಸಾವಿರ ವರ್ಷಗಳ ಪ್ರಾಚೀನ ಧರ್ಮ

Desi Swara: ಮಸ್ಕತ್‌- 40ನೇ ವರ್ಷದ ಗಣೇಶೋತ್ಸವ-ಮೂರು ದಿನದ ಉತ್ಸವ

Desi Swara: ಮಸ್ಕತ್‌- 40ನೇ ವರ್ಷದ ಗಣೇಶೋತ್ಸವ-ಮೂರು ದಿನದ ಉತ್ಸವ

Desi Swara: ಹೊನ್ನುಡಿ-ಜ್ಞಾನ ಬಳಸಿದರಷ್ಟೇ ಶ್ರೇಷ್ಠ..ಗರ್ವದಿಂದ ಹೊತ್ತು ತಿರುಗಬಾರದು…

Desi Swara: ಹೊನ್ನುಡಿ-ಜ್ಞಾನ ಬಳಸಿದರಷ್ಟೇ ಶ್ರೇಷ್ಠ..ಗರ್ವದಿಂದ ಹೊತ್ತು ತಿರುಗಬಾರದು…

Desi Swara: ಸಾಂಪ್ರದಾಯಿಕ ವೈವಿಧ್ಯದ ಓಣಂ ವೈಭವ-ವಿಶೇಷ ಹತ್ತು ದಿನಗಳು

Desi Swara: ಸಾಂಪ್ರದಾಯಿಕ ವೈವಿಧ್ಯದ ಓಣಂ ವೈಭವ-ವಿಶೇಷ ಹತ್ತು ದಿನಗಳು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.