Vijayapura: ಮಹಾನಗರ ಪಾಲಿಕೆಯಲ್ಲಿ ರಾತೋರಾತ್ರಿ ಗಣೇಶ ಪ್ರತಿಷ್ಠಾಪನೆ
Team Udayavani, Sep 8, 2024, 11:23 AM IST
ವಿಜಯಪುರ: ಮಹಾನಗರ ಪಾಲಿಕೆಯ ಕಟ್ಟಡದಲ್ಲಿ ಶನಿವಾರ ರಾತೋರಾತ್ರಿ ಗಣೇಶ ಪ್ರತಿಷ್ಠಾಪನೆ ಮಾಡಲಾಗಿದೆ. ಪ್ರತಿ ವರ್ಷ ಪಾಲಿಕೆಯಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡಲಾಗುತ್ತಿತ್ತು. ಈ ಬಾರಿ ಗಣೇಶ ಮೂರ್ತಿ ಕೂರಿಸುವಲ್ಲಿ ನಿರ್ಲಕ್ಷ್ಯ ತೋರಲಾಗಿದೆ ಎಂದು ಆರೋಪಿಸಿ ಬಿಜೆಪಿ ಸದ್ಯಸರು, ಇತರರು ರಾತ್ರಿ 11 ಗಂಟೆ ಸುಮಾರಿಗೆ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದಾರೆ.
ಪಾಲಿಕೆಯ ಪ್ರವೇಶ ಕಟ್ಟಡದಲ್ಲಿ ಸದಸ್ಯರಾದ ರಾಜಶೇಖರ್ ಮಗಿಮಠ, ಕಿರಣ್ ಪಾಟೀಲ್, ರಾಹುಲ್ ಜಾಧವ್, ಜವಾಹರ್ ಗೋಸ್ವಾವಿ, ಮಲ್ಲಿಕಾರ್ಜುನ್ ಗಡಗಿ, ಶಿವರುದ್ರ ಬಾಗಲಕೋಟೆ ಇತರರು ಮೂರ್ತಿ ಪ್ರತಿಷ್ಠಾಪಿಸಿದ್ದಾರೆ. ಅಲ್ಲದೆ, ಈ ವೇಳೆ ಜಮೀರ್ ಬಾಂಗಿ, ಬಂದೆ ನಮಾಜ್ ಬೀಳಗಿ, ರಾಜೇಶ್ ದೇವಗಿರಿ ಇದ್ದರು.
ಈ ಬಗ್ಗೆ ಪ್ರತಿಕ್ರಿಯಿಸಿದ ಶಿವರುದ್ರ ಬಾಗಲಕೋಟೆ, ಪ್ರತಿ ವರ್ಷ ಪಾಲಿಕೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಆಚರಣೆ ಮಾಡಲಾಗುತ್ತಿತ್ತು. ಆದರೆ, ಈ ಬಾರಿ ಗಣಪತಿ ಹಬ್ಬದ ಆಚರಣೆ ಮಾಡಿಲ್ಲ. ಆದ್ದರಿಂದ ಈ ವಿಷಯ ತಿಳಿದ ಕೂಡಲೇ ರಾತ್ರಿ ಹೋಗಿ ಗಣೇಶ ಮೂರ್ತಿ ಕೂರಿಸಿದ್ದೇವೆ. ಈ ವೇಳೆ ಕಾಂಗ್ರೆಸ್ ನವರು ಕೂಡ ಇದ್ದರು ಎಂದು ತಿಳಿಸಿದರು.
ಸ್ಥಳಕ್ಕೆ ಜಲನಗರ ಠಾಣೆ ಪೊಲೀಸರು ಸಹ ಆಗಮಿಸಿದ್ದರು. ಕಳೆದ ಜುಲೈನಲ್ಲೂ ಪಾಲಿಕೆ ಕಟ್ಟಡದಲ್ಲಿ ಅಂಬೇಡ್ಕರ್ ಮೂರ್ತಿ ಇಡಲಾಗಿತ್ತು. ಈಗ ಗಣೇಶ ಇಟ್ಟಿರುವ ಜಾಗದ ಸ್ವಲ್ವ ದೂರದ ಮುಂಭಾಗದಲ್ಲೇ ಅಂಬೇಡ್ಕರ್ ಮೂರ್ತಿ ಇಡಲಾಗಿತ್ತು. ಆಗ ರಾತೋರಾತ್ರಿ ಅಂಬೇಡ್ಕರ್ ಮೂರ್ತಿ ತೆರವು ಮಾಡಲಾಗಿತ್ತು. ಇದು ವಿವಾದಕ್ಕೆ ಕಾರಣವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.