Haryana; ಭರ್ಜರಿ ಪ್ರಚಾರ ಆರಂಭಿಸಿದ ಕಾಂಗ್ರೆಸ್ ಅಭ್ಯರ್ಥಿ ವಿನೇಶ್ ಫೋಗಟ್

ಪ್ರಾದೇಶಿಕ ಪಕ್ಷಗಳ ಪ್ರಾಬಲ್ಯವಿರುವಲ್ಲಿ ಗೆಲುವು ಸುಲಭವೇ? ಹರಿಯಾಣದ ಹೈ ವೋಲ್ಟೇಜ್ ಕ್ಷೇತ್ರ...

Team Udayavani, Sep 8, 2024, 5:33 PM IST

1-aaa

ಹೊಸದಿಲ್ಲಿ: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್(Congress) ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಕುಸ್ತಿಪಟು ವಿನೇಶ್‌ ಫೋಗಟ್‌(Vinesh Phogat) ಅವರು ಭಾನುವಾರ ಭರ್ಜರಿ ಪ್ರಚಾರ ಆರಂಭಿಸಿದ್ದಾರೆ.

ಜುಲಾನಾ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿದಿರುವ ವಿನೇಶ್ ಅವರಿಗೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಭರ್ಜರಿ ಸ್ವಾಗತ ನೀಡಿದರು. 30 ರ ಹರೆಯದ ಒಲಿಂಪಿಯನ್, ಯುವ ನಾಯಕಿ ಖಾಪ್ ಪಂಚಾಯತ್ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಬಹಿರಂಗ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡಿದ ವಿನೇಶ್ ‘ಜುಲಾನಾದಲ್ಲಿ ನಿಮ್ಮೆಲ್ಲರನ್ನು ಭೇಟಿಯಾದ ನಂತರ ನನಗೆ ಸಮಾಧಾನವಾಯಿತು. ನಿಮ್ಮಿಂದ ನಾನು ಪಡೆದ ಪ್ರೀತಿ ಮತ್ತು ಆಶೀರ್ವಾದವೇ ನನಗೆ ದೊಡ್ಡ ಶಕ್ತಿ. ನಾನು ನಿಮ್ಮ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳುವುದಿಲ್ಲ. ಯಾವಾಗಲೂ ನಿಮ್ಮ ಸೇವೆಗೆ ಸಮರ್ಪಿತಳಾಗಿರುತ್ತೇನೆ ಎಂದು ನಾನು ಭರವಸೆ ನೀಡುತ್ತೇನೆ. ನಮ್ಮ ಸಮುದಾಯದ ಅಭಿವೃದ್ಧಿ ಮತ್ತು ನಿಮ್ಮ ಯೋಗಕ್ಷೇಮ ನನ್ನ ಆದ್ಯತೆಯಾಗಿದೆ. ನಾವೆಲ್ಲರೂ ಒಟ್ಟಾಗಿ ಹೊಸ ಆರಂಭವನ್ನು ಮಾಡೋಣ” ಎಂದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ವಿನೇಶ್” ಕ್ಷೇತ್ರದಲ್ಲಿ ಜನರು ತುಂಬಾ ಉತ್ಸುಕರಾಗಿದ್ದಾರೆ, ನಮಗೆ ನೀಡಿದ ಜವಾಬ್ದಾರಿ, ಕಾಂಗ್ರೆಸ್ ಪಕ್ಷವು ನನ್ನನ್ನು ಇಲ್ಲಿಗೆ ಅಭ್ಯರ್ಥಿಯನ್ನಾಗಿ ಕಳುಹಿಸಿದೆ, ಜನರು ನಮಗೆ ಪ್ರೀತಿ ಮತ್ತು ಬೆಂಬಲ ನೀಡುತ್ತಿದ್ದಾರೆ. ನಮ್ಮ ಜನರು ನನ್ನನ್ನು ಗೆಲ್ಲಿಸುತ್ತಾರೆ ಮತ್ತು ಅವರ ದೃಷ್ಟಿಯಲ್ಲಿ ನಾನು ವಿಜೇತೆ. ಇದಕ್ಕಿಂತ ದೊಡ್ಡದು ಯಾವುದೂ ಇಲ್ಲ” ಎಂದರು.

ಬ್ರಿಜ್ ಭೂಷಣ್ ವಿರುದ್ಧ ಕಿಡಿ
ಬಿಜೆಪಿ ನಾಯಕ ಬ್ರಿಜ್ ಭೂಷಣ್ ಅವರ “ವಂಚನೆ” ಆರೋಪಕ್ಕೆ ಪ್ರತಿಕ್ರಿಯಿಸಿರುವ ವಿನೇಶ್ ಫೋಗಟ್ “ನಾನು ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಪದಕವನ್ನು ಪಡೆಯದಿರುವ ನೋವು ಕಡಿಮೆಯಾಗಿದೆ.ಬ್ರಿಜ್ ಭೂಷಣ್ ದೇಶವಲ್ಲ, ಜನರು ನನ್ನೊಂದಿಗೆ ನಿಂತಿದ್ದಾರೆ, ಅವರು ನನ್ನ ಸ್ವಂತದವರು. ಬ್ರಿಜ್ ಭೂಷಣ್ ನನಗೆ ಎಂದಿಗೂ ಅಸ್ತಿತ್ವದಲ್ಲಿಲ್ಲ” ಎಂದು ಕಿಡಿಯಾಗಿದ್ದಾರೆ.

ಶುಕ್ರವಾರ ಕುಸ್ತಿಪಟುಗಳಾದ ಬಜರಂಗ್‌ ಪೂನಿಯಾ ಅವರೊಂದಿಗೆ ವಿನೇಶ್ ಕಾಂಗ್ರೆಸ್‌ ಪಕ್ಷವನ್ನು ಅಧಿಕೃತವಾಗಿ ಸೇರಿದ ಬಳಿಕ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿತ್ತು.

ಪ್ರಾದೇಶಿಕ ಪಕ್ಷಗಳ ಪ್ರಾಬಲ್ಯ
ಹರಿಯಾಣದ ಜಾಟ್ ಪ್ರಾಬಲ್ಯದ ಬಂಗಾರ್ ಪ್ರದೇಶದ ಜುಲಾನಾ ಕ್ಷೇತ್ರದಲ್ಲಿ ಕಳೆದ 15 ವರ್ಷಗಳಿಂದ ಭಾರತೀಯ ರಾಷ್ಟ್ರೀಯ ಲೋಕದಳ (INLD) ಮತ್ತು ಜನನಾಯಕ್ ಜನತಾ ಪಾರ್ಟಿ (JJP) ಯಂತಹ ಪ್ರಾದೇಶಿಕ ಪಕ್ಷಗಳು ಪ್ರಾಬಲ್ಯ ಹೊಂದಿವೆ. 2009 ಮತ್ತು 2014ರಲ್ಲಿ ಐಎನ್‌ಎಲ್‌ಡಿಯ ಪರ್ಮಿಂದರ್ ಸಿಂಗ್ ಗೆದ್ದಿದ್ದರೆ, ಜೆಜೆಪಿಯ ಅಮರ್‌ಜೀತ್ ಧಂಡಾ 2019ರಲ್ಲಿ ಗೆಲುವು ಸಾಧಿಸಿದ್ದರು. ಈ ಬಾರಿ ಕ್ಷೇತ್ರ ಭಾರೀ ಕುತೂಹಲ ಕೆರಳಿಸಿದೆ. ಹರಿಯಾಣದ ಹೈವೋಲ್ಟೇಜ್ ಕ್ಷೇತ್ರವಾಗಿ ಬದಲಾಗಿದೆ.

ಜಾತಿ ಲೆಕ್ಕಾಚಾರ
ಕ್ರೀಡಾ ಲೋಕದ ತಾರೆ ಜಾಟ್ ಪ್ರತಿನಿಧಿಯಾಗಿ ವಿನೇಶ್ ಕಾಂಗ್ರೆಸ್‌ಗೆ ಪ್ರವೇಶಿಸಿದ್ದು ಜುಲಾನಾದಲ್ಲಿ ಹೊಸ ಲೆಕ್ಕಾಚಾರಕ್ಕೆ ಕಾರಣವಾಗಿದೆ. ವಿನೇಶ್ ಅವರ ಮಾವ(ಪತಿ ಸೋಮವೀರ್ ರಾಠಿ ತಂದೆ) ರಾಜ್‌ಪಾಲ್ ರಾಠಿ, ರಾಠಿ ಸಮುದಾಯದ ಖಾಪ್‌ನೊಂದಿಗೆ ಘರ್ವಾಲಿ, ಖೇರಾ ಬಖ್ತಾ, ಜಮೋಲಾ, ಕರೇಲಾ, ಜಯಜಯವಂತಿ ಮತ್ತು ಘೆರ್ತಿ ಎಂಬ ಆರು ಗ್ರಾಮಗಳನ್ನು ಪ್ರತಿನಿಧಿಸುವ ಚುಗಾಮಾ ಖಾಪ್ ವಿನೇಶ್ ಳನ್ನು ಸ್ವಾಗತಿಸುತ್ತಿದೆ” ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

1-tirupati-laddu

Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.