Lakkundi ಇತಿಹಾಸ, ಪರಂಪರೆ,ಗತವೈಭವವನ್ನು ದೇಶಕ್ಕೆ ಪರಿಚಯಿಸಲು ಶೀಘ್ರ ಉತ್ಖನನ

5 ಕೋಟಿ ರೂ. ವೆಚ್ಚದಲ್ಲಿ 13 ಅರಕ್ಷಿತ ಸ್ಮಾರಕಗಳ ಸಂರಕ್ಷಣೆ ಕಾಮಗಾರಿಗಳ ಶಿಲಾನ್ಯಾಸ ಸಮಾರಂಭ

Team Udayavani, Sep 8, 2024, 9:08 PM IST

1-gadag

ಗದಗ: ಐತಿಹಾಸಿಕ ಲಕ್ಕುಂಡಿಯ ಮಣ್ಣಿನಲ್ಲಿ ಹುದುಗಿರುವ ಕಲ್ಯಾಣ ಚಾಲುಕ್ಯರ ಶಿಲ್ಪಕಲೆಗಳನ್ನು ಪುನರುತ್ಥಾನಗೊಳಿಸಬೇಕಿದ್ದು, ಜನತೆಯ ತ್ಯಾಗ ಅವಶ್ಯವಿದ್ದು ಉತ್ಖನನಕ್ಕೆ ಅವಕಾಶ ಕಲ್ಪಿಸಬೇಕು ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ತಾಲೂಕಿನ ಲಕ್ಕುಂಡಿಯ ಹಾಲಗುಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಮೈಸೂರಿನ ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಸಹಯೋಗದಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ 13 ಆರಕ್ಷಿತ ಸ್ಮಾರಕಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಲಕ್ಕುಂಡಿ ಗ್ರಾಮದಲ್ಲಿ 101 ದೇವಾಲಯಗಳು, 101 ಬಾವಿಗಳಿದ್ದವು ಎಂಬ ಮಾತನ್ನು ಕೇಳುತ್ತಿದ್ದೇವೆ. ಆದರೆ, ನಮಗೆ ನೋಡಲು ಸಾಧ್ಯವಾಗಿರುವುದು ಕೇವಲ 30 ದೇವಾಲಯಗಳು, 30 ಬಾವಿಗಳಷ್ಟೇ. ಆದ್ದರಿಂದ ಮಣ್ಣಿನಲ್ಲಿ ಹುದುಗಿರುವ 70ಕ್ಕೂ ಹೆಚ್ಚು ದೇವಾಲಯ, ಬಾವಿಗಳನ್ನು ಉತ್ಖನನ ಮಾಡಿದಾಗ ಮಾತ್ರ ಲಕ್ಕುಂಡಿಯ ಹಿರಿಮೆ, ಶ್ರೇಷ್ಠತೆ, ಗತವೈಭವ ಸಂಪೂರ್ಣವಾಗಿ ನೋಡಲು ಸಿಗುತ್ತದೆ. ರಾಷ್ಟçಕ್ಕೊಂದು ದೊಡ್ಡ ಆಸ್ತಿಕೊಟ್ಟಂತಾಗುತ್ತದೆ ಎಂದು ಹೇಳಿದರು.

ಕಲ್ಯಾಣ ಚಾಲುಕ್ಯರ ಕಾಲದಲ್ಲಿ ಅದ್ಬುತ ಶಿಲ್ಪಕಲೆಗಳನ್ನು ನಾವಿಂದು ಅಗೌರವದಿಂದ ನೋಡಲಾಗುತ್ತಿದೆ. ಇಂದಿನ ದಿನದಲ್ಲೂ ಲಕ್ಕುಂಡಿ ಭಾಗದಲ್ಲಿನ ತಿಪ್ಪೆಯನ್ನು ಅಗೆದರೆ 20ಕ್ಕೂ ಹೆಚ್ಚು ಶಿಲ್ಪಕಲೆಗಳು ಸಿಗುತ್ತವೆ. ಮನೆಗಳಳಲ್ಲಿನ ಕಟ್ಟೆಗಳನ್ನು ಅಗೆದರೂ ಮ್ಯೂಸಿಯಂ ಹಿಡಿಸಲಾಗದಷ್ಟು ಪಾರಂಪರಿಕ ಶಿಲ್ಪಕಲೆಗಳು ದೊರೆಯುತ್ತವೆ. ಆದ್ದರಿಂದ ಗ್ರಾಮಸ್ಥರು, ಯುವಕರು ಶಿಲ್ಪಕಲೆಗಳ ರಕ್ಷಣೆಗೆ ಮುಂದಾಗಬೇಕು, ಕಟ್ಟೆಯ ಕೆಳಗೆ ಅವಿತಿರುವ ಕಲೆ, ಶಿಲ್ಪಕಲೆಗಳು ಅದ್ಬುತ ಕಲಾಕೃತಿಗಳನ್ನು ಉತ್ಖನನವಾಗಬೇಕಾದರೆ ಗ್ರಾಮಸ್ಥರ ಪ್ರೀತಿ, ಸ್ನೇಹ, ವಿಶ್ವಾಸ, ತ್ಯಾಗ ಬೇಕಾಗುತ್ತದೆ ಎಂದು ಹೇಳಿದರು.

ಅತ್ಯಂತ ಪ್ರಾಮುಖ್ಯತೆ ಹೊಂದಿರುವ ಲಕ್ಕುಂಡಿಯನ್ನು ಚಾಲುಕ್ಯರು ಠಂಕಸಾಲೆಯನ್ನಗಿಸಿಕೊಂಡಿದ್ದರು. ಆ ಕಾಲದ ಇತಿಹಾಸ, ಸಂಸ್ಕೃತಿ, ವೈಭವದ ಮೆರಗು, ಸಂಭ್ರಮ ಮರುಕಳಿಸುವಂತೆ ಆಂದೋಲನ ಪ್ರಾರಂಭಿಸಿ ಅದಕ್ಕೆ ಎಲ್ಲರು ಪ್ರಾಮಾಣಿಕ ಪ್ರಯತ್ನ ಮಾಡುವ ಕೆಲಸವಾಗಬೇಕು ಎಂದರು.

”ಹುಬ್ಬಳ್ಳಿ ಹುಡಿ ಹಾರಬೇಕು, ಗದಗು ಗದ್ದುಗೆಯಾಗಬೇಕು, ಲಕ್ಕುಂಡಿ ಲೆಕ್ಕಾಗಬೇಕು ಈ ಮಾತು ನಿಜವಾಗಬೇಕಾದರೆ ಲಕ್ಕುಂಡಿಯಲ್ಲಿ ಹುದುಗಿರುವ ಶಿಲ್ಪಕಲೆಗಳು ಕಾಣುವಂತಾಗಬೇಕು. ಈ ಹಿನ್ನೆಲೆಯಲ್ಲಿ ಉತ್ಖನನ ಆರಂಭಿಸಿಲು ಈಗಾಗಲೇ ಪ್ರಾಧಿಕಾರದ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರಿಗೆ ಸೂಚನೆ ನೀಡಲಾಗಿದೆ. ಲಕ್ಕುಂಡಿಯಲ್ಲಿ ಎಲ್ಲೆಲ್ಲಿ ಉತ್ಖನನ ಮಾಡಬೇಕು, ಒಂದು ವರ್ಷದಲ್ಲಿ ಎಷ್ಟು ಉತ್ಖನನ ಮಾಡಲು ಸಾಧ್ಯ, ಅದಕ್ಕೆ ಬೇಕಾಗುವ ಹಣವನ್ನು ಮುಂದಿನ ಬಜೆಟ್‌ನಲ್ಲಿ ತೆಗೆದಿಡುವ ಹಾಗೆ ಸಿಎಂ ಸಿದ್ದರಾಮಯ್ಯ ಅವರನ್ನು ಒತ್ತಾಯಿಸುತ್ತೇವೆ” ಎಂದು ಎಚ್.ಕೆ. ಪಾಟೀಲ ಹೇಳಿದರು.

ಶಾಸಕ ಸಿ.ಸಿ. ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಖನಿಜ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷ, ರೋಣ ಶಾಸಕ ಜಿ.ಎಸ್. ಪಾಟೀಲ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಸೇರಿ ಹಲವರು ಇದ್ದರು.

ಟಾಪ್ ನ್ಯೂಸ್

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

China Open 2024: ಒಲಿಂಪಿಕ್‌ ವಿಜೇತೆಗೆ ಮಾಳವಿಕಾ ಆಘಾತ

China Open 2024: ಒಲಿಂಪಿಕ್‌ ವಿಜೇತೆಗೆ ಮಾಳವಿಕಾ ಆಘಾತ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.