Renukaswamy case; ಜಾಮೀನಿಗೆ ಇಂದು ದರ್ಶನ್ ಅರ್ಜಿ?
ವೀಡಿಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ಗೆ ಹಾಜರು
Team Udayavani, Sep 9, 2024, 7:20 AM IST
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದರ್ಶನ್ ಆ್ಯಂಡ್ ಗ್ಯಾಂಗ್ನ ನ್ಯಾಯಾಂಗ ಬಂಧನ ಅವಧಿ ಸೋಮವಾರ ಅಂತ್ಯವಾಗಲಿದ್ದು, ದರ್ಶನ್ ಸೇರಿ 17 ಮಂದಿ ಆರೋಪಿಗಳನ್ನು ಪೊಲೀಸರು ಜೈಲಿನಿಂದಲೇ ವೀಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ಗೆ ವಿಚಾರಣೆಗೆ ಹಾಜರುಪಡಿಸಲಿದ್ದಾರೆ. ಮತ್ತೂಂದೆಡೆ ದರ್ಶನ್ ಜಾಮೀನು ಕೋರಿ ಇಂದೇ ಕೋರ್ಟ್ಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.
ಜೂನ್ 9ರಂದು ರೇಣುಕಾಸ್ವಾಮಿ ಕೊಲೆ ಪ್ರಕರಣ ಬೆಳಕಿಗೆ ಬಂದ ಮೂರೇ ದಿನದಲ್ಲಿ ದರ್ಶನ್ ಆ್ಯಂಡ್ ಗ್ಯಾಂಗ್ನ 17 ಮಂದಿಯನ್ನು ವಿಜಯನಗರ ಎಸಿಪಿ ಚಂದನ್ ಕುಮಾರ್ ನೇತೃತ್ವದ ತಂಡ ಬಂಧಿಸಿತ್ತು. ವಿಚಾರಣೆ ಬಳಿಕ ಎಲ್ಲರಿಗೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಈ ಮಧ್ಯೆ ದರ್ಶನ್ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗನಿಂದ ವಿಶೇಷ ಆತಿಥ್ಯ ಸ್ವೀಕರಿಸಿದ ಆರೋಪದಲ್ಲಿ, ದರ್ಶನ್ ಸೇರಿ ಕೆಲ ಆರೋಪಿಗಳನ್ನು ಪರಪ್ಪನ ಅಗ್ರಹಾರದಿಂದ ಬಳ್ಳಾರಿಗೆ ಜೈಲಿಗೆ ಸ್ಥಳಾಂತರಿಸಲಾಗಿತ್ತು. ಇದೀಗ ಪರಪ್ಪನ ಅಗ್ರಹಾರ, ಬಳ್ಳಾರಿ, ಮೈಸೂರು, ಶಿವಮೊಗ್ಗ, ವಿಜಯಪುರ, ಧಾರವಾಡ ಸೇರಿ ರಾಜ್ಯದ ವಿವಿಧ ಜೈಲುಗಳಲ್ಲಿರುವ 17 ಮಂದಿ ಆರೋಪಿಗಳನ್ನು ಆಯಾ ಜೈಲಿನಿಂದಲೇ ವೀಡಿಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ಗೆ ಹಾಜರು ಪಡಿಸಲಿದ್ದಾರೆ.
ಇಂದು ಜಾಮೀನಿಗೆ ಅರ್ಜಿ ಸಲ್ಲಿಕೆ ಸಾಧ್ಯತೆ
ಪ್ರಕರಣದ ಸಂಬಂಧ ಈಗಾಗಲೇ ತನಿಖೆ ಪೂರ್ಣಗೊಳಿಸಿರುವ ಪೊಲೀಸರು, 24ನೇ ಎಸಿಎಂಎಂ ನ್ಯಾಯಾಲಯಕ್ಕೆ 3,991 ಪುಟಗಳ ಆರೋಪ ಪಟ್ಟಿ ಸಲ್ಲಿಸಿದ್ದಾರೆ. ಈ ಆರೋಪ ಪಟ್ಟಿಯನ್ನು ನಿಯಮಾನುಸಾರ ಎಲ್ಲ ಆರೋಪಿಗಳ ಪರ ವಕೀಲರಿಗೆ ಸೋಮವಾರ ಬೆಳಗ್ಗೆಯೇ ನೀಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಪ್ರಮುಖ ಆರೋಪಿಗಳಾದ ನಟ ದರ್ಶನ್ ಹಾಗೂ ಇತರ ಆರೋಪಿಗಳು ಸೋಮವಾರ ಜಾಮೀನು ಕೋರಿ ಕೋರ್ಟ್ಗೆ ಅರ್ಜಿ ಸಲ್ಲಿಸಬಹುದು ಎನ್ನಲಾಗಿದೆ.
ಈಗಾಗಲೇ ಪವಿತ್ರಾ ಗೌಡ ಸೇರಿ ನಾಲ್ವರು ಆರೋಪಿಗಳ ಜಾಮೀನು ಅರ್ಜಿಯನ್ನು ಕೋರ್ಟ್ ರದ್ದುಗೊಳಿಸಿದೆ.
ಡಿ ಗ್ಯಾಂಗ್ ಜೈಲು ಪಾಲಾಗಿ 3 ತಿಂಗಳು
ಕೊಲೆ ಪ್ರಕರಣ ಬೆಳಕಿಗೆ ಬಂದು ಮತ್ತು ದರ್ಶನ್ ಆ್ಯಂಡ್ ಗ್ಯಾಂಗ್ ಬಂಧನಕ್ಕೊಳಗಾಗಿ 3 ತಿಂಗಳು ಕಳೆದಿದೆ. ಜೂ. 8ರಂದು ಪಟ್ಟಣಗೆರೆಯ ಶೆಡ್ನಲ್ಲಿ ರೇಣುಕಾಸ್ವಾಮಿ ಕೊಲೆ ಮಾಡಲಾಗಿತ್ತು. ಜೂನ್ 9ರಂದು ನಸುಕಿನಲ್ಲಿ ಸುಮನಹಳ್ಳಿಯ ಸತ್ವ ಅಪಾರ್ಟ್ಮೆಂಟ್ ಬಳಿಯ ರಾಜಕಾಲುವೆಯಲ್ಲಿ ಆತನ ಮೃತದೇಹ ಎಸೆದು ಆರೋಪಿಗಳು ಪರಾರಿಯಾಗಿದ್ದರು. ಜೂ. 10ರಂದು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ರಾಘವೇಂದ್ರ ಸೇರಿ ನಾಲ್ವರು ಶರಣಾಗಿದ್ದರು. ವಿಚಾರಣೆ ವೇಳೆ ಆರೋಪಿಗಳು ದರ್ಶನ್ ಹೆಸರು ಬಾಯಿಬಿಟ್ಟಿದ್ದರು.
ಜೈಲಿನಲ್ಲಿ ವಿಘ್ನ ನಿವಾರಕನ “ದರ್ಶನ’ ಭಾಗ್ಯವಿಲ್ಲ
ಬಳ್ಳಾರಿ: ಇಲ್ಲಿನ ಕೇಂದ್ರ ಕಾರಾಗೃಹದಲ್ಲಿರುವ ಕೊಲೆ ಆರೋಪಿ, ನಟ ದರ್ಶನ್ಗೆ ಜೈಲಲ್ಲೇ ಪ್ರತಿಷ್ಠಾಪಿಸಿರುವ ವಿಘ್ನ ನಿವಾರಕ ಗಣೇಶನ “ದರ್ಶನ’ ಭಾಗ್ಯವಿಲ್ಲದಂತಾಗಿದೆ.
ಬಳ್ಳಾರಿ ಜೈಲಲ್ಲೂ ಪ್ರತಿ ವರ್ಷದಂತೆ 4 ಅಡಿ ಎತ್ತರದ ಗಣೇಶ ಮೂರ್ತಿ ಪ್ರತಿಷ್ಠಾಪಿಸಲಾಗಿದ್ದು ಗಣೇಶನ ದರ್ಶನ ಪಡೆದಿರುವ ಕೈದಿಗಳು, ತಮ್ಮ ಜೀವನದಲ್ಲಾಗಿರುವ ವಿಘ್ನಗಳನ್ನು ನಿವಾರಿಸುವಂತೆ ಮೊರೆಯಿಡುತ್ತಿದ್ದಾರೆ. ಆದರೆ ಜೈಲಿನ ವಿಶೇಷ ಭದ್ರತಾ ವಿಭಾಗದ ಹೈಸೆಕ್ಯುರಿಟಿ ಸೆಲ್ನಲ್ಲಿರುವ ಆರೋಪಿ ದರ್ಶನ್ಗೆ “ವಿನಾಯಕ’ನ ದರ್ಶನ ಭಾಗ್ಯ ಇಲ್ಲದಂತಾಗಿದ್ದು ಗಣೇಶ ಹಬ್ಬವನ್ನು 10/10 ಸೆಲ್ನಲ್ಲೇ ಆಚರಿಸುವಂತಾಗಿದೆ.
ಕಳೆದ ವರ್ಷ ಮನೆಯಲ್ಲಿ ಕುಟುಂಬ ಸಮೇತ ಗಣೇಶ ಹಬ್ಬವನ್ನು ಆಚರಿಸಿದ್ದ ದರ್ಶನ್, ಈ ಬಾರಿ ಜೈಲಲ್ಲಿ ಸೆರೆವಾಸ ಅನುಭವಿಸುತ್ತಿದ್ದು ಹಬ್ಬದ ದಿನ ಶನಿವಾರ ಮಾನಸಿವಾಗಿ ಕೊಂಚ ಕುಗ್ಗಿದ್ದಾರೆ ಎನ್ನಲಾಗಿದೆ. ಜೈಲಲ್ಲಿ ಪ್ರತಿಷ್ಠಾಪಿಸಿರುವ ಗಣೇಶನ ದರ್ಶನಕ್ಕಾದರೂ ದರ್ಶನ್ ಬಂದಾಗ ಅವರನ್ನು ನೋಡಬಹುದು ಎಂದು ನೀರಿಕ್ಷೆ ಇಟ್ಟುಕೊಂಡ ಕೈದಿಗಳಿಗೆ ನಿರಾಸೆಯಾಗಿದೆ. ಓದಲೆಂದು 5 ಪುಸ್ತಕ ಪಡೆದಿದ್ದ ದರ್ಶನ್, ಅದರಲ್ಲಿ 2 ಪುಸ್ತಕ ಚೆನ್ನಾಗಿಲ್ಲ ಎಂದು ಹಿಂದಿರುಗಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು
Ricky Ponting: ಡೆಲ್ಲಿಯಿಂದ ಪಂಜಾಬ್ ಗೆ ಬಂದ ರಿಕಿ ಪಾಂಟಿಂಗ್
Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.